Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶೀತ, ಕೆಮ್ಮು ಉಪಟಳ ತಡೆಯುವ ಮನೆಮದ್ದು

ಅದರಲ್ಲೂ ಶಾಲೆಗೆ ಹೋಗುವ ಮಕ್ಕಳು ಮನೆಯಲ್ಲಿದ್ದರೆ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಶಾಲೆಯಲ್ಲಿ ಶೀತ ಮತ್ತು ಕೆಮ್ಮು ಇರುವ ಮಕ್ಕಳ ಜೊತೆ ಆಟ ಆಡಿದರೆ ರೋಗಾಣುಗಳು ನಿಮ್ಮ ಮಗುವಿಗೂ ಸುಲಭವಾಗಿ ಹರಡಿ ಬಿಡುತ್ತದೆ. ಆದ್ದರಿಂದ ನೀವು ಮತ್ತು ನಿಮ್ಮ ಮಕ್ಕಳು ಮುನ್ನೆಚ್ಚರಿಕೆ ಕ್ರಮ ಅನುಸರಿಸಿದರೆ ಒಳ್ಳೆಯದು.
ನೆಗಡಿ, ಕೆಮ್ಮು ಬರದಂತೆ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳು:
1. ತುಳಸಿ ಎಲೆಯನ್ನು ಅಗೆಯುತ್ತಾ ಇರುವುದು ಅಥವಾ ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ಬರುವುದಿಲ್ಲ.
2. ಹವಾನಿಯಂತ್ರಣ ಕೊಠಡಿಯಲ್ಲಿ ಅಥವಾ ಹೊರಗಡೆ ತಿರುಗಾಡಲು ಹೋಗುವಾಗ ಕಿವಿಗೆ ಹತ್ತಿಯನ್ನು ಇಟ್ಟುಕೊಳ್ಳಬೇಕು.
3. ತಲೆಯನ್ನು ಉಣ್ಣೆಯ ಸ್ಕಾರ್ಫ್ ಬಳಸುವುದು ಸೂಕ್ತ.
4. ಕರ್ಚೀಫ್ ಗೆ ಸ್ವಲ್ಪ ನೀಲಗಿರಿಯ ಎಣ್ಣೆಯನ್ನು ಹಾಕಿ ಅದರ ವಾಸನೆಯನ್ನು ತೆಗೆದು ಕೊಳ್ಳುತ್ತಿದ್ದರೆ ಸೀನು ಬರುವುದಿಲ್ಲ.
5. ಮುಖ ತೊಳೆಯುವಾಗ, ಸ್ನಾನಮಾಡುವಾಗ ಬಿಸಿ ನೀರನ್ನು ಬಳಸಬೇಕು.
6. ಕೈಯನ್ನು ಆಗಾಗ್ಗೆ ತೊಳೆಯುತ್ತಿರಬೇಕು, ಅಲ್ಲದೆ ಕೈನಿಂದ ಪದೇಪದೆ ಕಣ್ಣು, ಬಾಯಿ ಮತ್ತು ಮೂಗನ್ನು ಮುಟ್ಟುತ್ತಿರಬಾರದು.
7. ಜ್ವರವಿರುವವರಿಂದ ಸ್ವಲ್ಪ ದೂರವಿರಿ.
8. ಆರೋಗ್ಯಕರವಾದ ಆಹಾರಕ್ರಮವನ್ನು ಪಾಲಿಸಬೇಕು.
9. ಒಂದು ವೇಳೆ ಜ್ವರ ಬಂದರೆ ಮನೆಯಲ್ಲಿಯೆ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ಇದರಿಂದ ಜ್ವರ ಮತ್ತೊಬ್ಬರಿಗೆ ಹರಡುವುದನ್ನು ತಡೆಯಬಹುದು.
ಒಂದು ಶೀತ ಅಥವಾ ಕೆಮ್ಮು ಮನೆಯಲ್ಲಿ ಯಾರಿಗಾದರೂ ಇದ್ದರೆ ಈ ಕೆಳಗಿನ ಮನೆಮದ್ದು ಮಾಡಿ ಸೇವಿಸಿದರೆ ಶೀತ ಮತ್ತು ಕೆಮ್ಮು ಕಮ್ಮಿಯಾಗುವುದು.
1. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮುನ್ನ ಸೇವಿಸಬೇಕು. ರಾತ್ರಿ ಈ ಔಷಧಿಯನ್ನು ಕುಡಿದ ನಂತರ ಯಾವುದೆ ಪದಾರ್ಥವನ್ನು ಸೇವಿಸಬಾರದು.
2. ಒಂದು ಲೋಟ ಹಾಲನ್ನು ಸ್ವಲ್ಪ ಅರಿಶಿಣ ಮತ್ತು ಒಂದು ಎಸಳು ಬೆಳ್ಳುಳ್ಳಿ ಹಾಕಿ ಕುದಿಸಿ ಕುಡಿಯಬೇಕು.
3. ಶುಂಠಿ ಕಾಫಿ ಮಾಡಿ ಕುಡಿದರೆ ಶೀತ , ಕೆಮ್ಮು , ತಲೆನೋವು ಕಡಮೆಯಾಗುವುದು.
4. ಕೆಮ್ಮಿಗೆ ಶುಂಠಿ ಹಾಕಿ ಮಾಡಿದ ಟೀ ಒಳ್ಳೆಯದು.
5. ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ಜೇನು ಮಿಶ್ರ ಮಾಡಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮನ್ನು ನಿವಾರಿಸಬಹುದು. ಚಿಕ್ಕ ಮಕ್ಕಳಿಗೆ ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಕೆಮ್ಮು ನಿವಾರಣೆಯಾಗುವುದು.
6. ಒಣಶುಂಠಿ ಹಾಕಿದ ಕಾಫಿಯನ್ನು ಕುಡಿಯುವುದು ಕೂಡ ಒಳ್ಳೆಯದು.
7. ಕರಿಮೆಣಸಿನ ರಸ ಮಾಡಿ ಕುಡಿಯುವುದು ಕೂಡ ತುಂಬಾ ಒಳ್ಳೆಯದು. ಶುಂಠಿ ಕಷಾಯ, ಬೆಳ್ಳುಳ್ಳಿ ರಸವನ್ನು ತಯಾರಿಸಿ ಸೇವಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications