Just In
- 2 hrs ago ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- 4 hrs ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 7 hrs ago Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- 9 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
Don't Miss
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀತ, ಕೆಮ್ಮು ಉಪಟಳ ತಡೆಯುವ ಮನೆಮದ್ದು
ಅದರಲ್ಲೂ ಶಾಲೆಗೆ ಹೋಗುವ ಮಕ್ಕಳು ಮನೆಯಲ್ಲಿದ್ದರೆ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಶಾಲೆಯಲ್ಲಿ ಶೀತ ಮತ್ತು ಕೆಮ್ಮು ಇರುವ ಮಕ್ಕಳ ಜೊತೆ ಆಟ ಆಡಿದರೆ ರೋಗಾಣುಗಳು ನಿಮ್ಮ ಮಗುವಿಗೂ ಸುಲಭವಾಗಿ ಹರಡಿ ಬಿಡುತ್ತದೆ. ಆದ್ದರಿಂದ ನೀವು ಮತ್ತು ನಿಮ್ಮ ಮಕ್ಕಳು ಮುನ್ನೆಚ್ಚರಿಕೆ ಕ್ರಮ ಅನುಸರಿಸಿದರೆ ಒಳ್ಳೆಯದು.
ನೆಗಡಿ, ಕೆಮ್ಮು ಬರದಂತೆ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳು:
1. ತುಳಸಿ ಎಲೆಯನ್ನು ಅಗೆಯುತ್ತಾ ಇರುವುದು ಅಥವಾ ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ಬರುವುದಿಲ್ಲ.
2. ಹವಾನಿಯಂತ್ರಣ ಕೊಠಡಿಯಲ್ಲಿ ಅಥವಾ ಹೊರಗಡೆ ತಿರುಗಾಡಲು ಹೋಗುವಾಗ ಕಿವಿಗೆ ಹತ್ತಿಯನ್ನು ಇಟ್ಟುಕೊಳ್ಳಬೇಕು.
3. ತಲೆಯನ್ನು ಉಣ್ಣೆಯ ಸ್ಕಾರ್ಫ್ ಬಳಸುವುದು ಸೂಕ್ತ.
4. ಕರ್ಚೀಫ್ ಗೆ ಸ್ವಲ್ಪ ನೀಲಗಿರಿಯ ಎಣ್ಣೆಯನ್ನು ಹಾಕಿ ಅದರ ವಾಸನೆಯನ್ನು ತೆಗೆದು ಕೊಳ್ಳುತ್ತಿದ್ದರೆ ಸೀನು ಬರುವುದಿಲ್ಲ.
5. ಮುಖ ತೊಳೆಯುವಾಗ, ಸ್ನಾನಮಾಡುವಾಗ ಬಿಸಿ ನೀರನ್ನು ಬಳಸಬೇಕು.
6. ಕೈಯನ್ನು ಆಗಾಗ್ಗೆ ತೊಳೆಯುತ್ತಿರಬೇಕು, ಅಲ್ಲದೆ ಕೈನಿಂದ ಪದೇಪದೆ ಕಣ್ಣು, ಬಾಯಿ ಮತ್ತು ಮೂಗನ್ನು ಮುಟ್ಟುತ್ತಿರಬಾರದು.
7. ಜ್ವರವಿರುವವರಿಂದ ಸ್ವಲ್ಪ ದೂರವಿರಿ.
8. ಆರೋಗ್ಯಕರವಾದ ಆಹಾರಕ್ರಮವನ್ನು ಪಾಲಿಸಬೇಕು.
9. ಒಂದು ವೇಳೆ ಜ್ವರ ಬಂದರೆ ಮನೆಯಲ್ಲಿಯೆ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ಇದರಿಂದ ಜ್ವರ ಮತ್ತೊಬ್ಬರಿಗೆ ಹರಡುವುದನ್ನು ತಡೆಯಬಹುದು.
ಒಂದು ಶೀತ ಅಥವಾ ಕೆಮ್ಮು ಮನೆಯಲ್ಲಿ ಯಾರಿಗಾದರೂ ಇದ್ದರೆ ಈ ಕೆಳಗಿನ ಮನೆಮದ್ದು ಮಾಡಿ ಸೇವಿಸಿದರೆ ಶೀತ ಮತ್ತು ಕೆಮ್ಮು ಕಮ್ಮಿಯಾಗುವುದು.
1. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮುನ್ನ ಸೇವಿಸಬೇಕು. ರಾತ್ರಿ ಈ ಔಷಧಿಯನ್ನು ಕುಡಿದ ನಂತರ ಯಾವುದೆ ಪದಾರ್ಥವನ್ನು ಸೇವಿಸಬಾರದು.
2. ಒಂದು ಲೋಟ ಹಾಲನ್ನು ಸ್ವಲ್ಪ ಅರಿಶಿಣ ಮತ್ತು ಒಂದು ಎಸಳು ಬೆಳ್ಳುಳ್ಳಿ ಹಾಕಿ ಕುದಿಸಿ ಕುಡಿಯಬೇಕು.
3. ಶುಂಠಿ ಕಾಫಿ ಮಾಡಿ ಕುಡಿದರೆ ಶೀತ , ಕೆಮ್ಮು , ತಲೆನೋವು ಕಡಮೆಯಾಗುವುದು.
4. ಕೆಮ್ಮಿಗೆ ಶುಂಠಿ ಹಾಕಿ ಮಾಡಿದ ಟೀ ಒಳ್ಳೆಯದು.
5. ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ಜೇನು ಮಿಶ್ರ ಮಾಡಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮನ್ನು ನಿವಾರಿಸಬಹುದು. ಚಿಕ್ಕ ಮಕ್ಕಳಿಗೆ ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಕೆಮ್ಮು ನಿವಾರಣೆಯಾಗುವುದು.
6. ಒಣಶುಂಠಿ ಹಾಕಿದ ಕಾಫಿಯನ್ನು ಕುಡಿಯುವುದು ಕೂಡ ಒಳ್ಳೆಯದು.
7. ಕರಿಮೆಣಸಿನ ರಸ ಮಾಡಿ ಕುಡಿಯುವುದು ಕೂಡ ತುಂಬಾ ಒಳ್ಳೆಯದು. ಶುಂಠಿ ಕಷಾಯ, ಬೆಳ್ಳುಳ್ಳಿ ರಸವನ್ನು ತಯಾರಿಸಿ ಸೇವಿಸುವುದು ಒಳ್ಳೆಯದು.