Latest Updates
-
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ!
ಶೀತ, ಕೆಮ್ಮು ಉಪಟಳ ತಡೆಯುವ ಮನೆಮದ್ದು

ಅದರಲ್ಲೂ ಶಾಲೆಗೆ ಹೋಗುವ ಮಕ್ಕಳು ಮನೆಯಲ್ಲಿದ್ದರೆ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಶಾಲೆಯಲ್ಲಿ ಶೀತ ಮತ್ತು ಕೆಮ್ಮು ಇರುವ ಮಕ್ಕಳ ಜೊತೆ ಆಟ ಆಡಿದರೆ ರೋಗಾಣುಗಳು ನಿಮ್ಮ ಮಗುವಿಗೂ ಸುಲಭವಾಗಿ ಹರಡಿ ಬಿಡುತ್ತದೆ. ಆದ್ದರಿಂದ ನೀವು ಮತ್ತು ನಿಮ್ಮ ಮಕ್ಕಳು ಮುನ್ನೆಚ್ಚರಿಕೆ ಕ್ರಮ ಅನುಸರಿಸಿದರೆ ಒಳ್ಳೆಯದು.
ನೆಗಡಿ, ಕೆಮ್ಮು ಬರದಂತೆ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳು:
1. ತುಳಸಿ ಎಲೆಯನ್ನು ಅಗೆಯುತ್ತಾ ಇರುವುದು ಅಥವಾ ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ಬರುವುದಿಲ್ಲ.
2. ಹವಾನಿಯಂತ್ರಣ ಕೊಠಡಿಯಲ್ಲಿ ಅಥವಾ ಹೊರಗಡೆ ತಿರುಗಾಡಲು ಹೋಗುವಾಗ ಕಿವಿಗೆ ಹತ್ತಿಯನ್ನು ಇಟ್ಟುಕೊಳ್ಳಬೇಕು.
3. ತಲೆಯನ್ನು ಉಣ್ಣೆಯ ಸ್ಕಾರ್ಫ್ ಬಳಸುವುದು ಸೂಕ್ತ.
4. ಕರ್ಚೀಫ್ ಗೆ ಸ್ವಲ್ಪ ನೀಲಗಿರಿಯ ಎಣ್ಣೆಯನ್ನು ಹಾಕಿ ಅದರ ವಾಸನೆಯನ್ನು ತೆಗೆದು ಕೊಳ್ಳುತ್ತಿದ್ದರೆ ಸೀನು ಬರುವುದಿಲ್ಲ.
5. ಮುಖ ತೊಳೆಯುವಾಗ, ಸ್ನಾನಮಾಡುವಾಗ ಬಿಸಿ ನೀರನ್ನು ಬಳಸಬೇಕು.
6. ಕೈಯನ್ನು ಆಗಾಗ್ಗೆ ತೊಳೆಯುತ್ತಿರಬೇಕು, ಅಲ್ಲದೆ ಕೈನಿಂದ ಪದೇಪದೆ ಕಣ್ಣು, ಬಾಯಿ ಮತ್ತು ಮೂಗನ್ನು ಮುಟ್ಟುತ್ತಿರಬಾರದು.
7. ಜ್ವರವಿರುವವರಿಂದ ಸ್ವಲ್ಪ ದೂರವಿರಿ.
8. ಆರೋಗ್ಯಕರವಾದ ಆಹಾರಕ್ರಮವನ್ನು ಪಾಲಿಸಬೇಕು.
9. ಒಂದು ವೇಳೆ ಜ್ವರ ಬಂದರೆ ಮನೆಯಲ್ಲಿಯೆ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ಇದರಿಂದ ಜ್ವರ ಮತ್ತೊಬ್ಬರಿಗೆ ಹರಡುವುದನ್ನು ತಡೆಯಬಹುದು.
ಒಂದು ಶೀತ ಅಥವಾ ಕೆಮ್ಮು ಮನೆಯಲ್ಲಿ ಯಾರಿಗಾದರೂ ಇದ್ದರೆ ಈ ಕೆಳಗಿನ ಮನೆಮದ್ದು ಮಾಡಿ ಸೇವಿಸಿದರೆ ಶೀತ ಮತ್ತು ಕೆಮ್ಮು ಕಮ್ಮಿಯಾಗುವುದು.
1. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮುನ್ನ ಸೇವಿಸಬೇಕು. ರಾತ್ರಿ ಈ ಔಷಧಿಯನ್ನು ಕುಡಿದ ನಂತರ ಯಾವುದೆ ಪದಾರ್ಥವನ್ನು ಸೇವಿಸಬಾರದು.
2. ಒಂದು ಲೋಟ ಹಾಲನ್ನು ಸ್ವಲ್ಪ ಅರಿಶಿಣ ಮತ್ತು ಒಂದು ಎಸಳು ಬೆಳ್ಳುಳ್ಳಿ ಹಾಕಿ ಕುದಿಸಿ ಕುಡಿಯಬೇಕು.
3. ಶುಂಠಿ ಕಾಫಿ ಮಾಡಿ ಕುಡಿದರೆ ಶೀತ , ಕೆಮ್ಮು , ತಲೆನೋವು ಕಡಮೆಯಾಗುವುದು.
4. ಕೆಮ್ಮಿಗೆ ಶುಂಠಿ ಹಾಕಿ ಮಾಡಿದ ಟೀ ಒಳ್ಳೆಯದು.
5. ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ಜೇನು ಮಿಶ್ರ ಮಾಡಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮನ್ನು ನಿವಾರಿಸಬಹುದು. ಚಿಕ್ಕ ಮಕ್ಕಳಿಗೆ ಕೆಮ್ಮು ಬಂದಾಗ ಬೆಚ್ಚಗಿನ ನೀರಲ್ಲಿ ಜೇನುತುಪ್ಪವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಕೆಲಕಾಲ ನಿರಂತರವಾಗಿ ನೀಡಿದರೆ ಕೆಮ್ಮು ನಿವಾರಣೆಯಾಗುವುದು.
6. ಒಣಶುಂಠಿ ಹಾಕಿದ ಕಾಫಿಯನ್ನು ಕುಡಿಯುವುದು ಕೂಡ ಒಳ್ಳೆಯದು.
7. ಕರಿಮೆಣಸಿನ ರಸ ಮಾಡಿ ಕುಡಿಯುವುದು ಕೂಡ ತುಂಬಾ ಒಳ್ಳೆಯದು. ಶುಂಠಿ ಕಷಾಯ, ಬೆಳ್ಳುಳ್ಳಿ ರಸವನ್ನು ತಯಾರಿಸಿ ಸೇವಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications