Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications
