Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications