Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications









