Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications