Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications