Latest Updates
-
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ!
ಇವುಗಳ ಬೀಜ ಬಿಸಾಡಿದರೆ ಆರೋಗ್ಯಕ್ಕೆ ನಷ್ಟ!
ಈ ಲೇಖನದಲ್ಲಿ ಕೆಲವೊಂದು ತರಕಾರಿ ಮತ್ತು ಹಣ್ಣುಗಳ ಬೀಜದ ಉಪಯೋಗವನ್ನು ನೀಡಲಾಗಿದೆ. ದೇಹದ ಆರೋಗ್ಯಕ್ಕೆ ಹೆಚ್ಚಿಸುವ ಆ ಬೀಜಗಳು ಯಾವುವು ಮತ್ತು ಅದರಿಂದ ದೊರೆಯುವ ಪ್ರಯೋಜವೇನು ಎಂದು ತಿಳಿಯಲು ಈ ಫೋಟೊ ಫೀಚರ್ ನೋಡಿ:
ಪಪ್ಪಾಯಿಯ ಬೀಜ: ಪಪ್ಪಾಯಿಯ ಬೀಜವನ್ನು ಖಂಡಿತ ಬಿಸಾಡುತ್ತೇವೆ. ಆದರೆ ಪಪ್ಪಾಯಿಯ ಬೀಜದಲ್ಲಿ ಅನೇಕ ಗುಣಗಳಿದ್ದು ಕಿಡ್ನಿಯಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸುತ್ತದೆ. ಲಿವರ್ ನಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸಿ, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುವವರು ಇದರ ಬೀಜ ತಿಂದರೆ ಸಾಕು, ಗ್ಯಾಸ್ಟ್ರಿಕ್ ಕಡಿಮೆಯಾಗುವುದು. ಪಪ್ಪಾಯಿ ಬೀಜವನ್ನು ಒಣಗಿಸಿ ಉಪಯೋಗಿಸಬೇಕು. ಅಲ್ಲದೆ ಬೀಜವನ್ನು ಚೆನ್ನಾಗಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿದರೆ ಮೊಡವೆ ಕಡಿಮೆಯಾಗುತ್ತದೆ, ಮುಖದ ಹೊಳಪು ಹೆಚ್ಚುವುದು.
{photo-feature}
ದುಂಡು ಮೆಣಸಿನಕಾಯಿಯ ಬೀಜ: ಅನೇಕ ಬಗೆಯ ಮೆಣಸುಗಳಿದ್ದರೂ ದುಂಡು ಮೆಣಸು ಅನೇಕ ಪ್ರಯೋಜವನ್ನು ಹೊಂದಿದೆ. ದುಂಡುಮೆಣಸಿನಲ್ಲಿ ವಿಟಮಿನ್ ಎ, ಸಿ, ಕೆ ಇರುವುದರಿಂದ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ತ್ವಚೆಯ ಯೌವನವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ನಡೆಯುವಂತೆ ಸಹಾಯ ಮಾಡುತ್ತದೆ. ಇಷ್ಟೆಲ್ಲಾ ಉಪಕಾರವಿರುವಾಗ ಇದರ ಬೀಜವನ್ನು ಬಿಸಾಡಬೇಡಿ.
ದಾಳಿಂಬೆ ಬೀಜ: ದಾಳಿಂಬೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಹೆಚ್ಚಿನವರು ಮೃದುವಾದ ಕೆಂಪು ತಿರುಳನ್ನು ಮಾತ್ರ ತಿಂದು ಜ್ಯೂಸ್ ಅನ್ನು ಬಿಸಾಡುತ್ತದೆ. ಆದರೆ ಬೀಜ ತುಂಬಾ ಆರೋಗ್ಯಕರವಾಗಿದ್ದು, ಇದು ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.
ಟೊಮೆಟೊ ಹಣ್ಣಿನ ಬೀಜ: ಟೊಮೆಟೊ ಆರೋಗ್ಯ ಮತ್ತು ಸೌಂದರ್ಯಕ್ಕೆ ಒಳ್ಳೆಯದು. ಟೊಮೆಟೊ ಬೀಜವು ದೇಹವನ್ನು ಸೇರಿದರೆ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ದೇಹದಲ್ಲಿರುವ ಕಲ್ಮಶಗಳನ್ನು ಹೊರಗೆ ಹಾಕುತ್ತದೆ. ಹೃದಯದಲ್ಲಿ ರಕ್ತ ಹೆಪ್ಪು ಗಟ್ಟದಂತೆ ನೋಡಿಕೊಳ್ಳುತ್ತದೆ. ಟೊಮೆಟೊದ ಬೀಜ ಸರಿಯಾಗಿ ಜೀರ್ಣವಾಗುವುದಿಲ್ಲ ಎಂಬ ನಂಬಿಕೆ ಅನೇಕರಲ್ಲಿದೆ. ಆದರೆ ಮಲಬದ್ಧತೆ ಸಮಸ್ಯೆಯನ್ನು ಇದು ನಿವಾರಿಸುತ್ತದೆ.



Click it and Unblock the Notifications