Latest Updates
-
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಇವುಗಳ ಬೀಜ ಬಿಸಾಡಿದರೆ ಆರೋಗ್ಯಕ್ಕೆ ನಷ್ಟ!
ಈ ಲೇಖನದಲ್ಲಿ ಕೆಲವೊಂದು ತರಕಾರಿ ಮತ್ತು ಹಣ್ಣುಗಳ ಬೀಜದ ಉಪಯೋಗವನ್ನು ನೀಡಲಾಗಿದೆ. ದೇಹದ ಆರೋಗ್ಯಕ್ಕೆ ಹೆಚ್ಚಿಸುವ ಆ ಬೀಜಗಳು ಯಾವುವು ಮತ್ತು ಅದರಿಂದ ದೊರೆಯುವ ಪ್ರಯೋಜವೇನು ಎಂದು ತಿಳಿಯಲು ಈ ಫೋಟೊ ಫೀಚರ್ ನೋಡಿ:
ಪಪ್ಪಾಯಿಯ ಬೀಜ: ಪಪ್ಪಾಯಿಯ ಬೀಜವನ್ನು ಖಂಡಿತ ಬಿಸಾಡುತ್ತೇವೆ. ಆದರೆ ಪಪ್ಪಾಯಿಯ ಬೀಜದಲ್ಲಿ ಅನೇಕ ಗುಣಗಳಿದ್ದು ಕಿಡ್ನಿಯಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸುತ್ತದೆ. ಲಿವರ್ ನಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸಿ, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುವವರು ಇದರ ಬೀಜ ತಿಂದರೆ ಸಾಕು, ಗ್ಯಾಸ್ಟ್ರಿಕ್ ಕಡಿಮೆಯಾಗುವುದು. ಪಪ್ಪಾಯಿ ಬೀಜವನ್ನು ಒಣಗಿಸಿ ಉಪಯೋಗಿಸಬೇಕು. ಅಲ್ಲದೆ ಬೀಜವನ್ನು ಚೆನ್ನಾಗಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿದರೆ ಮೊಡವೆ ಕಡಿಮೆಯಾಗುತ್ತದೆ, ಮುಖದ ಹೊಳಪು ಹೆಚ್ಚುವುದು.
{photo-feature}
ದುಂಡು ಮೆಣಸಿನಕಾಯಿಯ ಬೀಜ: ಅನೇಕ ಬಗೆಯ ಮೆಣಸುಗಳಿದ್ದರೂ ದುಂಡು ಮೆಣಸು ಅನೇಕ ಪ್ರಯೋಜವನ್ನು ಹೊಂದಿದೆ. ದುಂಡುಮೆಣಸಿನಲ್ಲಿ ವಿಟಮಿನ್ ಎ, ಸಿ, ಕೆ ಇರುವುದರಿಂದ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ತ್ವಚೆಯ ಯೌವನವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ನಡೆಯುವಂತೆ ಸಹಾಯ ಮಾಡುತ್ತದೆ. ಇಷ್ಟೆಲ್ಲಾ ಉಪಕಾರವಿರುವಾಗ ಇದರ ಬೀಜವನ್ನು ಬಿಸಾಡಬೇಡಿ.
ದಾಳಿಂಬೆ ಬೀಜ: ದಾಳಿಂಬೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಹೆಚ್ಚಿನವರು ಮೃದುವಾದ ಕೆಂಪು ತಿರುಳನ್ನು ಮಾತ್ರ ತಿಂದು ಜ್ಯೂಸ್ ಅನ್ನು ಬಿಸಾಡುತ್ತದೆ. ಆದರೆ ಬೀಜ ತುಂಬಾ ಆರೋಗ್ಯಕರವಾಗಿದ್ದು, ಇದು ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.
ಟೊಮೆಟೊ ಹಣ್ಣಿನ ಬೀಜ: ಟೊಮೆಟೊ ಆರೋಗ್ಯ ಮತ್ತು ಸೌಂದರ್ಯಕ್ಕೆ ಒಳ್ಳೆಯದು. ಟೊಮೆಟೊ ಬೀಜವು ದೇಹವನ್ನು ಸೇರಿದರೆ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ದೇಹದಲ್ಲಿರುವ ಕಲ್ಮಶಗಳನ್ನು ಹೊರಗೆ ಹಾಕುತ್ತದೆ. ಹೃದಯದಲ್ಲಿ ರಕ್ತ ಹೆಪ್ಪು ಗಟ್ಟದಂತೆ ನೋಡಿಕೊಳ್ಳುತ್ತದೆ. ಟೊಮೆಟೊದ ಬೀಜ ಸರಿಯಾಗಿ ಜೀರ್ಣವಾಗುವುದಿಲ್ಲ ಎಂಬ ನಂಬಿಕೆ ಅನೇಕರಲ್ಲಿದೆ. ಆದರೆ ಮಲಬದ್ಧತೆ ಸಮಸ್ಯೆಯನ್ನು ಇದು ನಿವಾರಿಸುತ್ತದೆ.



Click it and Unblock the Notifications
