Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಇವುಗಳ ಬೀಜ ಬಿಸಾಡಿದರೆ ಆರೋಗ್ಯಕ್ಕೆ ನಷ್ಟ!
ಈ ಲೇಖನದಲ್ಲಿ ಕೆಲವೊಂದು ತರಕಾರಿ ಮತ್ತು ಹಣ್ಣುಗಳ ಬೀಜದ ಉಪಯೋಗವನ್ನು ನೀಡಲಾಗಿದೆ. ದೇಹದ ಆರೋಗ್ಯಕ್ಕೆ ಹೆಚ್ಚಿಸುವ ಆ ಬೀಜಗಳು ಯಾವುವು ಮತ್ತು ಅದರಿಂದ ದೊರೆಯುವ ಪ್ರಯೋಜವೇನು ಎಂದು ತಿಳಿಯಲು ಈ ಫೋಟೊ ಫೀಚರ್ ನೋಡಿ:
ಪಪ್ಪಾಯಿಯ ಬೀಜ: ಪಪ್ಪಾಯಿಯ ಬೀಜವನ್ನು ಖಂಡಿತ ಬಿಸಾಡುತ್ತೇವೆ. ಆದರೆ ಪಪ್ಪಾಯಿಯ ಬೀಜದಲ್ಲಿ ಅನೇಕ ಗುಣಗಳಿದ್ದು ಕಿಡ್ನಿಯಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸುತ್ತದೆ. ಲಿವರ್ ನಲ್ಲಿರುವ ಕಲ್ಮಶಗಳನ್ನು ಹೋಗಲಾಡಿಸಿ, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುವವರು ಇದರ ಬೀಜ ತಿಂದರೆ ಸಾಕು, ಗ್ಯಾಸ್ಟ್ರಿಕ್ ಕಡಿಮೆಯಾಗುವುದು. ಪಪ್ಪಾಯಿ ಬೀಜವನ್ನು ಒಣಗಿಸಿ ಉಪಯೋಗಿಸಬೇಕು. ಅಲ್ಲದೆ ಬೀಜವನ್ನು ಚೆನ್ನಾಗಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿದರೆ ಮೊಡವೆ ಕಡಿಮೆಯಾಗುತ್ತದೆ, ಮುಖದ ಹೊಳಪು ಹೆಚ್ಚುವುದು.
{photo-feature}
ದುಂಡು ಮೆಣಸಿನಕಾಯಿಯ ಬೀಜ: ಅನೇಕ ಬಗೆಯ ಮೆಣಸುಗಳಿದ್ದರೂ ದುಂಡು ಮೆಣಸು ಅನೇಕ ಪ್ರಯೋಜವನ್ನು ಹೊಂದಿದೆ. ದುಂಡುಮೆಣಸಿನಲ್ಲಿ ವಿಟಮಿನ್ ಎ, ಸಿ, ಕೆ ಇರುವುದರಿಂದ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ತ್ವಚೆಯ ಯೌವನವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ನಡೆಯುವಂತೆ ಸಹಾಯ ಮಾಡುತ್ತದೆ. ಇಷ್ಟೆಲ್ಲಾ ಉಪಕಾರವಿರುವಾಗ ಇದರ ಬೀಜವನ್ನು ಬಿಸಾಡಬೇಡಿ.
ದಾಳಿಂಬೆ ಬೀಜ: ದಾಳಿಂಬೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಹೆಚ್ಚಿನವರು ಮೃದುವಾದ ಕೆಂಪು ತಿರುಳನ್ನು ಮಾತ್ರ ತಿಂದು ಜ್ಯೂಸ್ ಅನ್ನು ಬಿಸಾಡುತ್ತದೆ. ಆದರೆ ಬೀಜ ತುಂಬಾ ಆರೋಗ್ಯಕರವಾಗಿದ್ದು, ಇದು ದೇಹದ ತೂಕ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.
ಟೊಮೆಟೊ ಹಣ್ಣಿನ ಬೀಜ: ಟೊಮೆಟೊ ಆರೋಗ್ಯ ಮತ್ತು ಸೌಂದರ್ಯಕ್ಕೆ ಒಳ್ಳೆಯದು. ಟೊಮೆಟೊ ಬೀಜವು ದೇಹವನ್ನು ಸೇರಿದರೆ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ದೇಹದಲ್ಲಿರುವ ಕಲ್ಮಶಗಳನ್ನು ಹೊರಗೆ ಹಾಕುತ್ತದೆ. ಹೃದಯದಲ್ಲಿ ರಕ್ತ ಹೆಪ್ಪು ಗಟ್ಟದಂತೆ ನೋಡಿಕೊಳ್ಳುತ್ತದೆ. ಟೊಮೆಟೊದ ಬೀಜ ಸರಿಯಾಗಿ ಜೀರ್ಣವಾಗುವುದಿಲ್ಲ ಎಂಬ ನಂಬಿಕೆ ಅನೇಕರಲ್ಲಿದೆ. ಆದರೆ ಮಲಬದ್ಧತೆ ಸಮಸ್ಯೆಯನ್ನು ಇದು ನಿವಾರಿಸುತ್ತದೆ.



Click it and Unblock the Notifications