Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಅತ್ಯಂತ ಆರೋಗ್ಯಕರ ಅಕ್ಕಿ-ಭಾರತದ ಸ್ವರ್ಣ ಅಕ್ಕಿ!

ಈ ಸ್ವರ್ಣ ಅಕ್ಕಿಯಲ್ಲಿ ಕಡಿಮೆ ಗ್ಲೈಸಿಮಿಕ್ ಇಂಡೆಕ್ಸ್ ಅಥವಾ ಜಿಐ (glycemic index ) ಇರುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಈ ಅಕ್ಕಿಯಿಂದ ತಯಾರಿಸಿದ ಪದಾರ್ಥಗಳ ಸೇವನೆ ತುಂಬಾ ಒಳ್ಳೆಯದು. ಬಾಸುಮತಿ ಅಕ್ಕಿಯಲ್ಲಿ ಜಿಐ ಪ್ರಮಾಣ ಸ್ವರ್ಣ ಅಕ್ಕಿಯಲ್ಲಿರುವುದಕ್ಕಿಂತ ಅಧಿಕವಿದೆ. ಜಿಐ ಡಯಾಬಿಟಿಸ್ ಹೆಚ್ಚಾಗಲು ಒಂದು ಮಖ್ಯ ಕಾರಣ. ಆದ್ದರಿಂದ ಜಿಐ ಕಡಿಮೆ ಇರುವ ಆಹಾರವನ್ನು ತಿಂದರೆ ಮಧುಮೇಹ ಬರದಂತೆ ತಡೆಯಬಹುದು. ಆದ್ದರಿಂದ ಈ ಅಕ್ಕಿ ಆರೋಗ್ಯದ ರಕ್ಷಣೆಗೆ ತುಂಬಾ ಸಹಕಾರಿಯಾಗಿದೆ.
ಈ ಜಿಐ ಎಂದರೇನು?
ನಾವು ಸೇವಿಸುವ ಆಹಾರದಲ್ಲಿನ ಕಾರ್ಬೋಹೈಡ್ರೇಟ್ಸ್ ಪ್ರಮಾಣವನ್ನು ಅಳೆಯುವ ಮಾಪಕವನ್ನು ಜಿಐ ಎನ್ನಲಾಗುವುದು. ಅಧಿಕ ಜಿಐ ಇರುವ ಆಹಾರ ಮಧುಮೇಹಿಗಳಿಗೆ ಹಾಗೂ ಬೊಜ್ಜನ್ನು ಹೊಂದಿರುವವರಿಗೆ ಒಳ್ಳೆಯದಲ್ಲ. ಅಧಿಕ ಜಿಐ ಇರುವ ಆಹಾರ ಪದಾರ್ಥಗಳು ಉದಾಹರಣೆಗೆ ಆಲೂಗೆಡ್ಡೆ ಸೇವಿಸಿದರೆ ರಕ್ತದ ಗ್ಲೂಕೋಸ್ ಪ್ರಮಾಣ ವೇಗವಾಗಿ ಏರುವುದು. ಆದರೆ ಕಡಿಮೆ ಜಿಐ ಇರುವ ಆಹಾರಗಳನ್ನು ಸೇವಿಸಿದರೆ ರಕ್ತದ ಗ್ಲುಕೋಸ್ ಮಟ್ಟವನ್ನು ನಿಧಾನವಾಗಿ ಏರಿಸುತ್ತವೆ, ಇದರಿಂದ ಮಧುಮೇಹಿಗಳಿಗೆ ಯಾವುದೇ ಅಪಾಯವಿಲ್ಲ.
ಇತರ ಅಕ್ಕಿಗಳಲ್ಲಿ ಜಿಐ ಪ್ರಮಾಣ ಅಧಿಕವಿರುವುದರಿಂದ ಅವುಗಳಿಂದ ತಯಾರಿಸಿದ ಅನ್ನವನ್ನು ಮಧುಮೇಹಿಗಳು ತಿನ್ನಬಾರದು. ಈ ಸ್ವರ್ಣ ಅಕ್ಕಿಯ ಅನ್ನವನ್ನು ತಿಂದರೆ ಇದರಲ್ಲಿ ತುಂಬಾ ಕಡಿಮೆ ಜಿಐ ಇದ್ದು, ತುಂಬಾ ನಿಧಾನಕ್ಕೆ ಜೀರ್ಣವಾಗುವುದರಿಂದ , ದೇಹಕ್ಕೆ ಗ್ಲೂಕೋಸ್ ಅಂಶ ನಿಧಾನಕ್ಕೆ ಸೇರುತ್ತದೆ, ಆದ್ದರಿಂದ ಮಧುಮೇಹ ಕಾಯಿಲೆ ಹತ್ತಿರ ಸುಳಿಯಲೂ ಬಿಡುವುದಿಲ್ಲ. ಈ ಅಕ್ಕಿ ಮಧುಮೇಹಿಗಳಿಗೆ ಮಾತ್ರವಲ್ಲ ಇತರರು ಸೇವಿಸಿದರೆ ಮಧುಮೇಹ ಕಾಯಿಲೆಯ ಭಯವಿಲ್ಲದೆ ಆರಾಮವಾಗಿ ಜೀವಿಸಬಹುದು.
ಮಧುಮೇಹ ಕಾಯಿಲೆ ಇರುವವರೆಗೆ ಅನ್ನ ತಿನ್ನದಂತೆ ವೈದ್ಯರು ಹೇಳುತ್ತಾರೆ. ಆದರೆ ಇನ್ನು ಮುಂದೆ ಮಧುಮೇಹಿಗಳಿಗೆ ಅನ್ನ ತಿನ್ನಬೇಕೆಂದು ಅನಿಸಿದಾಗ ಸ್ವರ್ಣ ಅಕ್ಕಿಯಿಂದ ತಯಾರಿಸಿದ ಅನ್ನವನ್ನು ತಿನ್ನಬಹುದು. ಇತರರೂ ಅಷ್ಟೇ ಪಿಜ್ಜಾ, ಬರ್ಗರ್ , ನೂಡಲ್ಸ್ ಅಂತ ತಿನ್ನುವ ಬದಲು ಸ್ವರ್ಣ ಅಕ್ಕಿಯಿಂದ ತಯಾರಿಸಿದ ಆಹಾರವನ್ನು ಸೇವಿಸಿ ಆರೋಗ್ಯವಾಗಿರಿ!
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications