Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗ್ಯಾಸ್ಟ್ರಿಕ್ ಅಲ್ಸರ್ ತರಬಹುದೇ ಕ್ಯಾನ್ಸರ್ ?
ಗ್ಯಾಸ್ಟ್ರಿಕ್ ಸಮಸ್ಯೆ ವಯಸ್ಸಾದವರಿಗಷ್ಟೇ ಅಲ್ಲ, ಈಗೆಲ್ಲಾ ಚಿಕ್ಕ ಪ್ರಾಯದವರಲ್ಲೂ ಕಂಡು ಬರುತ್ತಿದೆ. ಹೊತ್ತಿಗೆ ಸರಿಯಾಗಿ ತಿನ್ನದಿರುವುದು, ಆರೋಗ್ಯಕರವಲ್ಲದ ಜೀವನ ಶೈಲಿ ಇವೆಲ್ಲಾ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾದರೆ ಗ್ಯಾಸ್ಟ್ರಿಕ್ ಅಲ್ಸರ್ ಉಂಟಾಗುವುದು.ಗ್ಯಾಸ್ಟ್ರಿಕ್ ಅಲ್ಸರ್ ಎಂದರೆ ಜಠರದ ಹುಣ್ಣು ಎಂದರ್ಥ. ಇದನ್ನು ಹಾಗೇ ಬಿಟ್ಟರೆ ಹೊಟ್ಟೆಯಲ್ಲಿ ಕ್ಯಾನ್ಸರ್ ಉಂಟಾಗುವುದು ಎಂದು ಇತ್ತೀಚಿಗೆ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ.

ಗ್ಯಾಸ್ಟ್ರಿಕ್ ಅಲ್ಸರ್ ಕ್ಯಾನ್ಸರ್ ಬರಲು ಹೇಗೆ ಕಾರಣವಾಗುತ್ತದೆ ಎಂದು ತಿಳಿಯೋಣ ಬನ್ನಿ.
ಗ್ಯಾಸ್ಟ್ರಿಕ್ ಅಲ್ಸರ್ ಹೆಲಿಕೊಬಾಕ್ಟರ್(helicobacter) ಎಂಬ ಬ್ಯಾಕ್ಟೀರಿಯದಿಂದ ಉಂಟಾಗುತ್ತದೆ. ಈ ಬ್ಯಾಕ್ಟೀರಿಯಾಗಳು ಹೊಟ್ಟೆಯಲ್ಲಿದ್ದರೆ ಬೇಗನೆ ಜಠರದಲ್ಲಿ ಸೋಂಕು ತರುತ್ತದೆ ಇದರಿಂದ ದೇಹದಲ್ಲಿ DNAಕ್ಕೆ ಹಾನಿ ಉಂಟು ಮಾಡುತ್ತದೆ. ಈ ಬ್ಯಾಕ್ಟೀರಿಯಾದಿಂದ ಹೊಟ್ಟೆಗೆ ಸೋಂಕು ಉಂಟಾದರೆ ಸುಲಭವಾಗಿ ನಿವಾರಿಸಲು ಸಾಧ್ಯವಿಲ್ಲ. ಇದರಿಂದ ಹೊಟ್ಟೆಯಲ್ಲಿ ಉರಿ ಕಂಡುಬರುತ್ತದೆ. ಅದನ್ನು ಚಿಕಿತ್ಸೆ ಮಾಡದೆ ಹಾಗೇ ಬಿಟ್ಟರೆ ಕ್ಯಾನ್ಸರ್ ಬರಬಹುದು.
ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡರೆ ಆಸ್ಪಿರಿನ್ ಅಥವಾ ಇತರ ಉರಿನಿವಾರಕ ಮಾತ್ರೆಗಳನ್ನು ವೈದ್ಯರ ಸಲಹೆ ಪಡೆಯದೆ ತೆಗೆದುಕೊಳ್ಳಬಾರದು. ಈ ಮಾತ್ರೆ ಸೇವಿಸುತ್ತಿದ್ದರೆ ಹೊಟ್ಟೆಯಲ್ಲಿರುವ ಅಂಗಗಳು ತನ್ನ ಕಾರ್ಯವನ್ನು ನಿಧಾನವಾಗಿ ಮಾಡಲಾರಂಭಿಸುತ್ತದೆ. ಅಲ್ಲದೆ ಈ ಮಾತ್ರೆಗಳು ದೇಹದಲ್ಲಿ ರಕ್ತ ಸಂಚಾರವನ್ನು ಕಡಿಮೆ ಮಾಡುತ್ತದೆ, ಇದರಿಂದ ಕ್ಯಾನ್ಸರ್ ಕಣಗಳು ಬೆಳೆಯಲು ಅವಕಾಶ ನೀಡಿದಂತಾಗುವುದು.
ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲು ಕಾರಣವಾಗುವ ಅಂಶಗಳು: ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುವವರು ಮದ್ಯಪಾನ, ತಂಬಾಕು ಸೇವನೆ, ಧೂಮಪಾನ ಇವುಗಳು ಹೊಟ್ಟೆಯಲ್ಲಿ ಆಸಿಡ್ ಹೆಚ್ಚು ಮಾಡುವುದರಿಂದ ಇಂತಹ ವಸ್ತುಗಳನ್ನು ಮುಟ್ಟಲು ಹೋಗಬಾರದು. ಒಂದು ವೇಳೆ ನಿಮಗೆ ಹೊಟ್ಟೆಯಲ್ಲಿ ಉರಿ, ವಾಂತಿ, ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಕಂಡು ಪರೀಕ್ಷೆ ಮಾಡಿಸಿಕೊಳ್ಳಿ. ಏಕೆಂದರೆ ಇವೆಲ್ಲವೂ ಕ್ಯಾನ್ಸರ್ ನ ಲಕ್ಷಣಗಳು ಆಗಿದ್ದು ಯಾವುದಕ್ಕೂ ಪರೀಕ್ಷೆ ಮಾಡಿಸುವುದು ಒಳ್ಳೆಯದು. ಪ್ರಾಣಾಯಾಮ ಮಾಡಿ, ಇದು ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗಲು ಸಹಕಾರಿಯಾಗಿದೆ.
ಗ್ಯಾಸ್ಟ್ರಿಕ್ ಅಲ್ಸರ್ ಇದ್ದರೆ ಹೆದರಬೇಡಿ, ಚಿಕಿತ್ಸೆ ಮಾಡಿದರೆ ಗುಣಮುಖವಾಗುವುದು, ಆದರೆ ಇದು ಬಂದರೆ ನಿರ್ಲಕ್ಷ್ಯ ಮಾತ್ರ ಮಾಡಬೇಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications