Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಅಣಬೆ ತಿಂದರೆ ಆರೋಗ್ಯಕ್ಕೆ ನಾನಾ ಲಾಭ!
ಅಣಬೆ ಒಂದು ಬಗೆಯ ಸಸ್ಯ ಆಗಿದ್ದರೂ ಅದನ್ನು ಮಾಂಸಾಹಾರದ ಗುಂಪಿಗೆ ಸೇರಿಸಲಾಗಿದೆ ಆದ್ದರಿಂದ ತುಂಬಾ ಜನರು ಇದನ್ನು ತಿನ್ನುವುದಿಲ್ಲ. ಆದರೆ ಅಣಬೆ ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಅದರಲ್ಲೂ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.

1. ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ: ಪ್ರತಿದಿನ ಒಂದು ಔನ್ಸ್ ನಷ್ಟು ಅಣಬೆ ಸೇವಿಸಿದರೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 64 ರಷ್ಟು ಕಡಿಮೆಯಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ. ಇಂತಹದೇ ಇನ್ನೊಂದು ಅಧ್ಯಯನ, ಸ್ತನ ಕ್ಯಾನ್ಸರ್ ತಗುಲುವ ಸಾಧ್ಯತೆಯನ್ನು ಅಣಬೆ ಶೇಕಡಾ 90 ರಷ್ಟು ಕಡಿಮೆಗೊಳಿಸುತ್ತದೆ ಎಂದೂ ವರದಿ ಮಾಡಿದೆ.
2. ವಿಟಮನ್ ಬಿ2: ಶಕ್ತಿಯನ್ನು ನೀಡಲು ಆಹಾರವನ್ನು ಗ್ಲೂಕೋಸ್ ಆಗಿ ಪರಿವರ್ತನೆ ಮಾಡುವಲ್ಲಿ ವಿಟಮಿನ್ ಬಿ ತುಂಬಾ ಅಗತ್ಯ. ಅಣಬೆಯಲ್ಲಿ ಅತಿ ಹೆಚ್ಚು ವಿಟಮಿನ್ ಬಿ2 ಮತ್ತು ಬಿ3 ಇರುವುದರಿಂದ ದೇಹಕ್ಕೆ ಇದು ತುಂಬಾ ಒಳ್ಳೆಯದು.
3. ಕೊಲೆಸ್ಟ್ರಾಲ್ ಕರಗಿಸುತ್ತೆ: ಅಣಬೆಯಲ್ಲಿ ಬೊಜ್ಜಿನ ಅಂಶವಿಲ್ಲ ಮತ್ತು ಕಡಿಮೆ ಕಾರ್ಬೊ ಹೈಡ್ರೇಡ್ ಹೊಂದಿದೆ. ಅಷ್ಟೇ ಅಲ್ಲ ಇದರಲ್ಲಿ ನಾರಿನಂಶ ಹೆಚ್ಚಿರುವುದರಿಂದ ಬೊಜ್ಜು ಕರಗಿಸುವುದು ಸುಲಭ. ಇದರಲ್ಲಿನ ಕೆಲವು ಎಂಜೈಮು ದೇಹದಲ್ಲಿ ಕೊಲೆಸ್ಟ್ರಾಲ್ ಕರಗಿಸಲು ಸಹಾಯ ಮಾಡುತ್ತದೆ.
4. ಮಧುಮೇಹ: ಇದು ದೇಹದಲ್ಲಿರುವ ಅಧಿಕ ಸಕ್ಕರೆಯಂಶವನ್ನು ಕಡಿಮೆ ಮಾಡುವುದರಿಂದ ಮಧುಮೇಹಿ ಈ ಆಹಾರವನ್ನು ತಿನ್ನುವುದು ಒಳ್ಳೆಯದು.
5. ರೋಗನಿರೋಧಕ ಶಕ್ತಿ: ಇದು ದೇಹಕ್ಕೆ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ. ಇದರಲ್ಲಿನ antibiotic ಅಂಶ ದೇಹ ಇನ್ನಿತರ ಸೋಂಕುಗಳಿಗೆ ತುತ್ತಾಗುವುದನ್ನು ತಡೆಯುತ್ತದೆ.
6. ರಕ್ತಹೀನತೆ: ವಿಟಮಿನ್ ಡಿ ಹೊಂದಿರುವ ಏಕೈಕ ತರಕಾರಿಯೆಂದರೆ ಅಣಬೆ. ಅಷ್ಟೇ ಅಲ್ಲ, ಅಣಬೆಯಲ್ಲಿ ಎಲುಬಿಗೆ ಶಕ್ತಿ ನೀಡುವ ಕ್ಯಾಲ್ಸಿಯಂ, ರಕ್ತಹೀನತೆ ನಿವಾರಿಸುವ ಕಬ್ಬಿಣಾಂಶ ಮತ್ತು ರಕ್ತದೊತ್ತಡ ಕಡಿಮೆ ಮಾಡಲು ಸಹಕರಿಸುವ ಪೊಟಾಶಿಯಂ ಪೂರಕವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications