Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಈ ಸಿಹಿ ಪದಾರ್ಥಗಳನ್ನು ದೂರ ಮಾಡಬೇಡಿ!
ಸಿಹಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದಲ್ಲ ನಿಜ, ಆದರೆ ಹಾಗಂತ ಎಲ್ಲಾ ಬಗೆಯ ಸಿಹಿ ಪದಾರ್ಥಗಳೂ ಆರೋಗ್ಯಕ್ಕೆ ಒಳ್ಳೆಯದಲ್ಲವೆಂದು ಭಾವಿಸಿ ತಿನ್ನದೇ ಇದ್ದರೆ ಆರೋಗ್ಯಕ್ಕೆ ಮೋಸವಾದೀತು! ಹೌದು ಸಿಹಿ ಪದಾರ್ಥಗಳಲ್ಲಿ ಕೆಲವೊಂದು ನೈಸರ್ಗಿಕವಾಗಿ ಸಿಹಿಯಾಗಿರುವ ಹಣ್ಣುಗಳು ಮತ್ತು ಪದಾರ್ಥಗಳು ಆರೋಗ್ಯವನ್ನು ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ಈ ಕೆಳಗಿನ ಸಿಹಿ ಪದಾರ್ಥಗಳನ್ನು ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿದರೆ ದೇಹದ ಸ್ವಾಸ್ಥ್ಯ ಹೆಚ್ಚುವುದು.

1. ಬೆಲ್ಲ: ಸಿಹಿ ಪದಾರ್ಥಗಳನ್ನು ಮಾಡುವಾಗ ಸಕ್ಕರೆ ಬದಲು ಬೆಲ್ಲ ಬಳಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಕಬ್ಬಿನ ಹಾಲಿನಿಂದ ತಯಾರಿಸುವ ಬೆಲ್ಲದಲ್ಲಿ ಕಾರ್ಬೋಹೈಡ್ರೇಟ್ ಮತ್ತು ನಾರಿನಂಶ ಅಧಿಕವಾಗಿರುತ್ತದೆ. ಆದರೆ ಸಕ್ಕರೆಯಲ್ಲಿ ನಾರಿನಂಶ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತದೆ. ನಾರಿನಂಶ ಅಧಿಕವಿರುವ ಆಹಾರದ ಬಳಕೆಯಿಂದ ಆರೋಗ್ಯ ಹೆಚ್ಚುವುದು.
2. ಜೇನು: ಜೇನು ತೂಕವನ್ನು ಕಡಿಮೆ ಮಾಡಲು ತುಂಬಾ ಸಹಕಾರಿಯಾಗಿದೆ. ಅಲರ್ಜಿ ಸೀನು ಅಥವಾ ಕೆಮ್ಮು ಉಂಟಾದರೆ ಜೇನಿಗೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ತುಳಸಿ ರಸ ಹಾಕಿ ಕುಡಿದರೆ ಕೆಮ್ಮು ನಿವಾರಣೆ ಆಗುವುದು, ಈ ಔಷಧಿ ಶೀತಕ್ಕೂ ಕೂಡ ತುಂಬಾ ಒಳ್ಳೆಯದು. ಟೀ ಜೊತೆ ಸಕ್ಕರೆ ಹಾಕಿ ಕುಡಿಯುವ ಬದಲು ಜೇನು ಹಾಕಿ ಕುಡಿಯುವುದು ಒಳ್ಳೆಯದು. ಗ್ರೀನ್ ಟೀಗೆ ಜೇನು ಹಾಕಿ ಕುಡಿದರೆ ಕೆಲವೇ ತಿಂಗಳಿನಲ್ಲಿ ದೇಹದ ತೂಕ ಕಡಿಮೆ ಮಾಡಬಹುದು.
3. ಒಣ ಹಣ್ಣುಗಳು: ಕಡಿಮೆ ಕ್ಯಾಲೋರಿ ಇರುವ ಆಹಾರ ಸೇವಿಸಿದರೆ ದೇಹದ ಆರೋಗ್ಯ ಹೆಚ್ಚುವುದು. ಒಣದ್ರಾಕ್ಷಿ, ಒಣ ಖರ್ಜೂರಗಳ ಸೇವನೆ ಒಳ್ಳೆಯದು. ಕರ್ಜೂರ ತಿಂದರೆ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಂಬಾ ಸುಸ್ತಾದಾಗ 5-6 ಖರ್ಜುರ ತಿಂದರೆ ಸಾಕು, ಸುಸ್ತು ಕಡಿಮೆಯಾಗುವುದು. ಖರ್ಜೂರದಲ್ಲಿ ಅಧಿಕ ಕಬ್ಬಿಣದಂಶವಿರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ತುಂಬಾ ಸಹಕಾರಿಯಾಗಿದೆ.
4. ಹಣ್ಣುಗಳು: ಬಾಳೆ ಹಣ್ಣು, ಮಾವಿನ ಹಣ್ಣು, ಸೇಬು ಇವುಗಳ ಸೇವನೆಯಿಂದ ಆರೋಗ್ಯ ಹೆಚ್ಚುವುದು. ಇವುಗಳ ಫ್ರೂಟ್ ಸಲಾಡ್ ಮಾಡಿ ತಿನ್ನುವುದು, ಜ್ಯೂಸ್ ಮಾಡಿ ಕುಡಿಯುವುದರಿಂದ ಬಾಯಿಗೂ ರುಚಿ, ದೇಹಕ್ಕೂ ಒಳ್ಳೆಯದು. ಆದರೆ ಜ್ಯೂಸ್ ಮಾಡುವಾಗ ಸಕ್ಕರೆ ಬಳಸಬೇಡಿ.
ಸಿಹಿ ತಿಂದರೆ ದಪ್ಪಗಾಗುತ್ತೇವೆ ಎಂಬ ಚಿಂತೆ ಬಿಟ್ಟು, ಈ ಮೇಲಿನ ಸಿಹಿಪದಾರ್ಥಗಳನ್ನು ತಿಂದು ಸಮತೂಕದ ಮೈಕಟ್ಟು ಮತ್ತು ಆರೋಗ್ಯವನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
