Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಈ ಸಿಹಿ ಪದಾರ್ಥಗಳನ್ನು ದೂರ ಮಾಡಬೇಡಿ!
ಸಿಹಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದಲ್ಲ ನಿಜ, ಆದರೆ ಹಾಗಂತ ಎಲ್ಲಾ ಬಗೆಯ ಸಿಹಿ ಪದಾರ್ಥಗಳೂ ಆರೋಗ್ಯಕ್ಕೆ ಒಳ್ಳೆಯದಲ್ಲವೆಂದು ಭಾವಿಸಿ ತಿನ್ನದೇ ಇದ್ದರೆ ಆರೋಗ್ಯಕ್ಕೆ ಮೋಸವಾದೀತು! ಹೌದು ಸಿಹಿ ಪದಾರ್ಥಗಳಲ್ಲಿ ಕೆಲವೊಂದು ನೈಸರ್ಗಿಕವಾಗಿ ಸಿಹಿಯಾಗಿರುವ ಹಣ್ಣುಗಳು ಮತ್ತು ಪದಾರ್ಥಗಳು ಆರೋಗ್ಯವನ್ನು ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ಈ ಕೆಳಗಿನ ಸಿಹಿ ಪದಾರ್ಥಗಳನ್ನು ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿದರೆ ದೇಹದ ಸ್ವಾಸ್ಥ್ಯ ಹೆಚ್ಚುವುದು.

1. ಬೆಲ್ಲ: ಸಿಹಿ ಪದಾರ್ಥಗಳನ್ನು ಮಾಡುವಾಗ ಸಕ್ಕರೆ ಬದಲು ಬೆಲ್ಲ ಬಳಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಕಬ್ಬಿನ ಹಾಲಿನಿಂದ ತಯಾರಿಸುವ ಬೆಲ್ಲದಲ್ಲಿ ಕಾರ್ಬೋಹೈಡ್ರೇಟ್ ಮತ್ತು ನಾರಿನಂಶ ಅಧಿಕವಾಗಿರುತ್ತದೆ. ಆದರೆ ಸಕ್ಕರೆಯಲ್ಲಿ ನಾರಿನಂಶ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತದೆ. ನಾರಿನಂಶ ಅಧಿಕವಿರುವ ಆಹಾರದ ಬಳಕೆಯಿಂದ ಆರೋಗ್ಯ ಹೆಚ್ಚುವುದು.
2. ಜೇನು: ಜೇನು ತೂಕವನ್ನು ಕಡಿಮೆ ಮಾಡಲು ತುಂಬಾ ಸಹಕಾರಿಯಾಗಿದೆ. ಅಲರ್ಜಿ ಸೀನು ಅಥವಾ ಕೆಮ್ಮು ಉಂಟಾದರೆ ಜೇನಿಗೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ತುಳಸಿ ರಸ ಹಾಕಿ ಕುಡಿದರೆ ಕೆಮ್ಮು ನಿವಾರಣೆ ಆಗುವುದು, ಈ ಔಷಧಿ ಶೀತಕ್ಕೂ ಕೂಡ ತುಂಬಾ ಒಳ್ಳೆಯದು. ಟೀ ಜೊತೆ ಸಕ್ಕರೆ ಹಾಕಿ ಕುಡಿಯುವ ಬದಲು ಜೇನು ಹಾಕಿ ಕುಡಿಯುವುದು ಒಳ್ಳೆಯದು. ಗ್ರೀನ್ ಟೀಗೆ ಜೇನು ಹಾಕಿ ಕುಡಿದರೆ ಕೆಲವೇ ತಿಂಗಳಿನಲ್ಲಿ ದೇಹದ ತೂಕ ಕಡಿಮೆ ಮಾಡಬಹುದು.
3. ಒಣ ಹಣ್ಣುಗಳು: ಕಡಿಮೆ ಕ್ಯಾಲೋರಿ ಇರುವ ಆಹಾರ ಸೇವಿಸಿದರೆ ದೇಹದ ಆರೋಗ್ಯ ಹೆಚ್ಚುವುದು. ಒಣದ್ರಾಕ್ಷಿ, ಒಣ ಖರ್ಜೂರಗಳ ಸೇವನೆ ಒಳ್ಳೆಯದು. ಕರ್ಜೂರ ತಿಂದರೆ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಂಬಾ ಸುಸ್ತಾದಾಗ 5-6 ಖರ್ಜುರ ತಿಂದರೆ ಸಾಕು, ಸುಸ್ತು ಕಡಿಮೆಯಾಗುವುದು. ಖರ್ಜೂರದಲ್ಲಿ ಅಧಿಕ ಕಬ್ಬಿಣದಂಶವಿರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ತುಂಬಾ ಸಹಕಾರಿಯಾಗಿದೆ.
4. ಹಣ್ಣುಗಳು: ಬಾಳೆ ಹಣ್ಣು, ಮಾವಿನ ಹಣ್ಣು, ಸೇಬು ಇವುಗಳ ಸೇವನೆಯಿಂದ ಆರೋಗ್ಯ ಹೆಚ್ಚುವುದು. ಇವುಗಳ ಫ್ರೂಟ್ ಸಲಾಡ್ ಮಾಡಿ ತಿನ್ನುವುದು, ಜ್ಯೂಸ್ ಮಾಡಿ ಕುಡಿಯುವುದರಿಂದ ಬಾಯಿಗೂ ರುಚಿ, ದೇಹಕ್ಕೂ ಒಳ್ಳೆಯದು. ಆದರೆ ಜ್ಯೂಸ್ ಮಾಡುವಾಗ ಸಕ್ಕರೆ ಬಳಸಬೇಡಿ.
ಸಿಹಿ ತಿಂದರೆ ದಪ್ಪಗಾಗುತ್ತೇವೆ ಎಂಬ ಚಿಂತೆ ಬಿಟ್ಟು, ಈ ಮೇಲಿನ ಸಿಹಿಪದಾರ್ಥಗಳನ್ನು ತಿಂದು ಸಮತೂಕದ ಮೈಕಟ್ಟು ಮತ್ತು ಆರೋಗ್ಯವನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications







