Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
ಈ ಸಿಹಿ ಪದಾರ್ಥಗಳನ್ನು ದೂರ ಮಾಡಬೇಡಿ!
ಸಿಹಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದಲ್ಲ ನಿಜ, ಆದರೆ ಹಾಗಂತ ಎಲ್ಲಾ ಬಗೆಯ ಸಿಹಿ ಪದಾರ್ಥಗಳೂ ಆರೋಗ್ಯಕ್ಕೆ ಒಳ್ಳೆಯದಲ್ಲವೆಂದು ಭಾವಿಸಿ ತಿನ್ನದೇ ಇದ್ದರೆ ಆರೋಗ್ಯಕ್ಕೆ ಮೋಸವಾದೀತು! ಹೌದು ಸಿಹಿ ಪದಾರ್ಥಗಳಲ್ಲಿ ಕೆಲವೊಂದು ನೈಸರ್ಗಿಕವಾಗಿ ಸಿಹಿಯಾಗಿರುವ ಹಣ್ಣುಗಳು ಮತ್ತು ಪದಾರ್ಥಗಳು ಆರೋಗ್ಯವನ್ನು ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ಈ ಕೆಳಗಿನ ಸಿಹಿ ಪದಾರ್ಥಗಳನ್ನು ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿದರೆ ದೇಹದ ಸ್ವಾಸ್ಥ್ಯ ಹೆಚ್ಚುವುದು.

1. ಬೆಲ್ಲ: ಸಿಹಿ ಪದಾರ್ಥಗಳನ್ನು ಮಾಡುವಾಗ ಸಕ್ಕರೆ ಬದಲು ಬೆಲ್ಲ ಬಳಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಕಬ್ಬಿನ ಹಾಲಿನಿಂದ ತಯಾರಿಸುವ ಬೆಲ್ಲದಲ್ಲಿ ಕಾರ್ಬೋಹೈಡ್ರೇಟ್ ಮತ್ತು ನಾರಿನಂಶ ಅಧಿಕವಾಗಿರುತ್ತದೆ. ಆದರೆ ಸಕ್ಕರೆಯಲ್ಲಿ ನಾರಿನಂಶ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತದೆ. ನಾರಿನಂಶ ಅಧಿಕವಿರುವ ಆಹಾರದ ಬಳಕೆಯಿಂದ ಆರೋಗ್ಯ ಹೆಚ್ಚುವುದು.
2. ಜೇನು: ಜೇನು ತೂಕವನ್ನು ಕಡಿಮೆ ಮಾಡಲು ತುಂಬಾ ಸಹಕಾರಿಯಾಗಿದೆ. ಅಲರ್ಜಿ ಸೀನು ಅಥವಾ ಕೆಮ್ಮು ಉಂಟಾದರೆ ಜೇನಿಗೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ತುಳಸಿ ರಸ ಹಾಕಿ ಕುಡಿದರೆ ಕೆಮ್ಮು ನಿವಾರಣೆ ಆಗುವುದು, ಈ ಔಷಧಿ ಶೀತಕ್ಕೂ ಕೂಡ ತುಂಬಾ ಒಳ್ಳೆಯದು. ಟೀ ಜೊತೆ ಸಕ್ಕರೆ ಹಾಕಿ ಕುಡಿಯುವ ಬದಲು ಜೇನು ಹಾಕಿ ಕುಡಿಯುವುದು ಒಳ್ಳೆಯದು. ಗ್ರೀನ್ ಟೀಗೆ ಜೇನು ಹಾಕಿ ಕುಡಿದರೆ ಕೆಲವೇ ತಿಂಗಳಿನಲ್ಲಿ ದೇಹದ ತೂಕ ಕಡಿಮೆ ಮಾಡಬಹುದು.
3. ಒಣ ಹಣ್ಣುಗಳು: ಕಡಿಮೆ ಕ್ಯಾಲೋರಿ ಇರುವ ಆಹಾರ ಸೇವಿಸಿದರೆ ದೇಹದ ಆರೋಗ್ಯ ಹೆಚ್ಚುವುದು. ಒಣದ್ರಾಕ್ಷಿ, ಒಣ ಖರ್ಜೂರಗಳ ಸೇವನೆ ಒಳ್ಳೆಯದು. ಕರ್ಜೂರ ತಿಂದರೆ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಂಬಾ ಸುಸ್ತಾದಾಗ 5-6 ಖರ್ಜುರ ತಿಂದರೆ ಸಾಕು, ಸುಸ್ತು ಕಡಿಮೆಯಾಗುವುದು. ಖರ್ಜೂರದಲ್ಲಿ ಅಧಿಕ ಕಬ್ಬಿಣದಂಶವಿರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ತುಂಬಾ ಸಹಕಾರಿಯಾಗಿದೆ.
4. ಹಣ್ಣುಗಳು: ಬಾಳೆ ಹಣ್ಣು, ಮಾವಿನ ಹಣ್ಣು, ಸೇಬು ಇವುಗಳ ಸೇವನೆಯಿಂದ ಆರೋಗ್ಯ ಹೆಚ್ಚುವುದು. ಇವುಗಳ ಫ್ರೂಟ್ ಸಲಾಡ್ ಮಾಡಿ ತಿನ್ನುವುದು, ಜ್ಯೂಸ್ ಮಾಡಿ ಕುಡಿಯುವುದರಿಂದ ಬಾಯಿಗೂ ರುಚಿ, ದೇಹಕ್ಕೂ ಒಳ್ಳೆಯದು. ಆದರೆ ಜ್ಯೂಸ್ ಮಾಡುವಾಗ ಸಕ್ಕರೆ ಬಳಸಬೇಡಿ.
ಸಿಹಿ ತಿಂದರೆ ದಪ್ಪಗಾಗುತ್ತೇವೆ ಎಂಬ ಚಿಂತೆ ಬಿಟ್ಟು, ಈ ಮೇಲಿನ ಸಿಹಿಪದಾರ್ಥಗಳನ್ನು ತಿಂದು ಸಮತೂಕದ ಮೈಕಟ್ಟು ಮತ್ತು ಆರೋಗ್ಯವನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications