Latest Updates
-
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ
ಈ ತರಕಾರಿಯ ಸಿಪ್ಪೆ ಬಿಸಾಡಿ ನಷ್ಟ ಮಾಡಿಕೊಳ್ಳಬೇಡಿ!
ಕೆಲವೊಂದು ತರಕಾರಿಗಳ ಸಿಪ್ಪೆಯಲ್ಲಿ ಅಧಿಕ ಪೋಷಕಾಂಶವಿರುತ್ತದೆ. ಆದರೆ ಸಿಪ್ಪೆ ಸುಲಿದು ಬೇಯಿಸಿದಾಗ ಸಿಪ್ಪೆಯಲ್ಲಿರುವ ಪೋಷಕಾಂಶಗಳು ವ್ಯರ್ಥವಾಗುತ್ತದೆ. ಅದರಲ್ಲೂ ಆಲೂಗೆಡ್ಡೆ, ನುಗ್ಗೆ ಕಾಯಿ, ಸೌತೆಕಾಯಿ ಈ ಬಗೆಯ ತರಕಾರಿಗಳನಂತೂ ದಿನನಿತ್ಯದ ಅಡುಗೆಯಲ್ಲಿ ಬಳಸುತ್ತಿರುತ್ತೇವೆ.
ಆದರೆ ಹೆಚ್ಚಿನವರು ಈ ತರಕಾರಿಗಳ ಸಿಪ್ಪೆ ಸುಲಿದು ಬೇಯಿಸುತ್ತಾರೆ. ಆ ರೀತಿ ಸಿಪ್ಪೆ ಸುಲಿದು ಅಡುಗೆ ಮಾಡಿದರೆ ಆಗುವ ನಷ್ಟವೇನು ಎಂದು ತಿಳಿಯಲು ಮುಂದೆ ಓದಿ:

1. ಆಲೂಗೆಡ್ಡೆ: ಆಲೂಗೆಡ್ಡೆಯ ಸಿಪ್ಪೆಯಲ್ಲಿ ಅಧಿಕ ಪೋಷಕಾಂಶ, ನಾರಿನಂಶ ಮತ್ತು ಸತು ಅಧಿಕವಾಗಿ ಇರುತ್ತದೆ. ಅಲ್ಲದೆ ಕರುಳಿನ ಕ್ರಿಯೆಗೆ ಈ ಆಲೂಗೆಡ್ಡೆ ಸಿಪ್ಪೆ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಅಂಶವಿದ್ದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
2. ಸೌತೆಕಾಯಿ: ಸೌತೆಕಾಯಿಯನ್ನು ಕೆಲವರು ಸಿಪ್ಪೆ ತೆಗೆದು, ಮತ್ತೆ ಕೆಲವರು ಸಿಪ್ಪೆ ಸಹಿತ ಅಡುಗೆ ಮಾಡುತ್ತಾರೆ. ಆದರೆ ಸೌತೆಕಾಯಿಯನ್ನು ಸಿಪ್ಪೆ ಸಹಿತ ಹಾಕಿ ಅಡುಗೆ ಮಾಡುವುದು ಸರಿಯಾದ ಕ್ರಮ. ಈ ಸೌತೆಕಾಯಿ ಸಿಪ್ಪೆಗೆ ಕರುಳಿನ ಕ್ಯಾನ್ಸರ್ ಅನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿದೆ.
3. ಕುಂಬಳ ಕಾಯಿ ಮತ್ತು ನುಗ್ಗೆ ಕಾಯಿ: ಈ ತರಕಾರಿಯ ಸಿಪ್ಪೆಯಲ್ಲಿ ಸತುವಿನಂಶ ಅಧಿಕವಿರುತ್ತದೆ. ಈ ಪೋಷಕಾಂಶ ತ್ವಚೆ ಮತ್ತು ಉಗುರಿನ ಆರೋಗ್ಯಕ್ಕೆ ಒಳ್ಳೆಯದು.
4. ಬೀಟ್ ರೂಟ್: ಬೀಟ್ ರೂಟ್ ಸಿಪ್ಪೆಯಲ್ಲಿ antioxidants ಪ್ರಮಾಣ ಅಧಿಕವಾಗಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ಹಸಿಯಾಗಿ ತಿಂದರೆ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು.
5. ಬದನೆಕಾಯಿ: ಬದನೆಕಾಯಿಯಲ್ಲಿ antioxidants ಅಧಿಕವಿದ್ದು ಅದರಲ್ಲೂ ಎಣ್ಣೆ ಬದನೆಯಲ್ಲಿ ಅಧಿಕ ಪೋಷಕಾಂಶವಿದೆ.
ಆದ್ದರಿಂದ ಈ ಮೇಲಿನ ತರಕಾರಿಗಳನ್ನು ಬಳಸುವಾಗ ಸಿಪ್ಪೆ ಬಿಸಾಡಿ ಬಳಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications