Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ದಿನ ಬಳಕೆಯ ಈ ವಸ್ತುಗಳಲ್ಲಿದೆ ರೋಗಗಳ ಪರಿಹಾರ!
ಗಿಡ ಮೂಲಿಕೆಗಳನ್ನು ಬಳಸಿದರೆ ಕಾಯಿಲೆ ಗುಣ ಮುಖವಾಗುವುದರ ಜೊತೆಗೆ ಅತಿ ಮುಖ್ಯ ಪ್ರಯೋನಜವೆಂದರೆ ಇದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಆದ್ದರಿಂದಲೇ ವೈದ್ಯಕೀಯ ವೈಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಆರ್ಯುವೇದದ ಔಷಧಿ ಇವತ್ತಿಗೂ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ.
ದಿನಬಳಕೆಯಲ್ಲಿ ಬಳಸುವ ಕೆಲ ವಸ್ತುಗಳು ಹೇಗೆ ಕಾಯಿಲೆ ಗುಣ ಪಡಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಯೋಣ ಬನ್ನಿ.

ಮಧುಮೇಹಕ್ಕೆ ಮನೆ ಮದ್ದು:
ಕರಿ ಬೇವಿನ ಎಲೆ: ಕರಿ ಬೇವಿನ ಎಲೆಯನ್ನು ದಿನನಿತ್ಯ ಬಳಸುತ್ತಿರುತ್ತೇವೆ. ಈ ಕರಿಬೇವು ಅಡುಗೆಗೆ ರುಚಿ ಮತ್ತು ಸುವಾಸನೆ ಕೊಡುವುದು ಮಾತ್ರವಲ್ಲ ಆರೋಗ್ಯಕ್ಕೆ ಒಳ್ಳೆಯದು. 3 ತಿಂಗಳವರೆಗೆ 8-10 ಕರಿಬೇವಿನ ಎಲೆಯನ್ನು ಪ್ರತಿದಿನ ಬೆಳ್ಳಗ್ಗೆ ತಿಂದರೆ ಮಧುಮೇಹವನ್ನು ತಡೆಗಟ್ಟುತ್ತದೆ ಅಲ್ಲದೆ ಇದು ತೂಕ ಇಳಿಸುವಲ್ಲಿ ತುಂಬಾ ಸಹಕಾರಿಯಾಗಿದೆ.
ಚಕ್ಕೆ: ಚಕ್ಕೆಯನ್ನು ದಿನವೂ ತಿಂದರೆ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಅಲ್ಲದೆ ಪಲಾವ್ ಎಲೆ, ಅರಿಶಿಣ, ಬೆಳ್ಳುಳ್ಳಿ ಕೂಡ ಡಯಾಬಿಟಿಸ್ ಕಾಯಿಲೆಯನ್ನು ಬರದಂತೆ ತಡೆಯುವುದು.
ನೆಲ್ಲಿಕಾಯಿ: ನೆಲ್ಲಿ ಕಾಯಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುವಲ್ಲಿ ಸಹಕರಿಯಾಗಿದೆ. ಹಗಲಕಾಯಿ ಮತ್ತು ನೆಲ್ಲಿಕಾಯಿ ಹಾಕಿ ಜ್ಯೂಸ್ ಮಾಡಿ 2-3 ತಿಂಗಳು ಕುಡಿದರೆ ಉತ್ತಮ ಪರಿಣಾಮವನ್ನು ಪಡೆಯಬಹುದು.
ಕೆಮ್ಮು ಮತ್ತು ಶೀತಕ್ಕೆ ಮನೆ ಮದ್ದು:
ತುಳಸಿ: ತುಳಸಿ ಹಾಕಿ ಟೀ ಮಾಡಿ ಕುಡಿದರೆ ಅಥವಾ 1 ಚಮಚ ತುಳಸಿ ರಸಕ್ಕೆ 1/2 ಚಮಚ ಜೇನುಮತ್ತು 2 ಕಾಳು ಕರಿಮೆಣಸನ್ನು ಪುಡಿ ಮಾಡಿ ಹಾಕಿ ಮಿಶ್ರ ಮಾಡಿ ಕುಡಿಯ ಬೇಕು. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಈ ರೀತಿ ಮಾಡಿದರೆ ಶೀತ ಮತ್ತು ಕೆಮ್ಮ ಕಡಿಮೆಯಾಗುವುದು.
ಶುಂಠಿ: ಕಾಫಿ ಅಥವಾ ಟೀ ಮಾಡುವಾಗ ಸ್ವಲ್ಪ ಶುಂಠಿ ಹಾಕಿ ಕುಡಿದರೆ ಅಥವಾ ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಕುಡಿದರೆ ಕೆಮ್ಮು ನಿವಾರಣೆಯಾಗುತ್ತದೆ.
ಗಂಟಲು ತುರಿತ: ಗಂಟಲಿನಲ್ಲಿ ತುರಿತ ಕಂಡು ಬಂದರೆ ಚಕ್ಕೆ ಟೀ ಮಾಡಿ ಕುಡಿದರೆ ಸಾಕು ಕಮ್ಮಿಯಾಗುವುದು.
ಗಾಯಗಳನ್ನು ಗುಣಪಡಿಸಲು ಮನೆಮದ್ದು:
ಚೆಂಡು ಹೂ: ಚೆಂಡು ಹೂವಿನ ಎಲೆಯನ್ನು ಕಿತ್ತು ಅದರ ರಸ ಹಿಂಡಿ ಗಾಯಕ್ಕೆ ಹಾಕಿದರೆ ಗಾಯ ಗುಣ ಮುಖವಾಗುವುದು.
ಅರಿಶಿಣ: ಅರಿಶಿಣ ಹಾಕಿದರೆ ಕೂಡ ಗಾಯ ಬೇಗನೆ ಗುಣಮುಖವಾಗುತ್ತದೆ. ಹಳ್ಳಿ ಕಡೆಗಳಲ್ಲಿ ಸಣ್ಣ ಪುಟ್ಟ ಗಾಯಗಳಿಗೆ ಆಸ್ಪತ್ರೆಗೆ ಹೋಗದೆ ಇದರಿಂದಲೇ ಗುಣಪಡಿಸುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









