Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ರೇಡಿಯೊ ಥೆರಪಿಯ ಅಡ್ಡಪರಿಣಾಮ ತಡೆಗಟ್ಟುವುದು ಹೇಗೆ?

1. ಬಾಯಿ ಮತ್ತು ಹಲ್ಲುಗಳ ಶುಚಿತ್ವ: ಕ್ಯಾನ್ಸರ್ ಕಾಯಿಲೆ ಇರುವವರು ಅದರಲ್ಲೂ ಶ್ವಾಸಕೋಶದ ಕ್ಯಾನ್ಸರ್ ಗೆ ರೇಡಿಯೊ ಥೆರಪಿ ಚಿಕಿತ್ಸೆ ಪಡೆದಾಗ ವಿಕಿರಣಗಳು ಗಂಟಲಿನ ಶ್ವಾಸ ನಾಳ ಮತ್ತು ಧ್ವನಿ ಪೆಟ್ಟಿಗೆ ಮೇಲೆ ಬೀಳುತ್ತದೆ. ಈ ಸಮಯದಲ್ಲಿ ಬಾಯಿ ಶುಚಿತ್ವ ಮಾಡದಿದ್ದರೆ ಅಡ್ಡಪರಿಣಾಮ ಉಂಟಾಗುವುದು. ಆದ್ದರಿಂದ ಈ ಚಿಕಿತ್ಸೆ ಪಡೆದ ನಂತರ ಹಲ್ಲು ಮತ್ತು ಬಾಯಿಯನ್ನು ತುಂಬಾ ಶುಚಿಯಾಗಿ ಇಟ್ಟುಕೊಳ್ಳಬೇಕು.
2. ತುಂಬಾ ಬಿಸಿ ಅಥವಾ ತಣ್ಣನೆಯ ನೀರು ಕುಡಿಯಬಾರದು: ಅದರಲ್ಲೂ ತಲೆ ಮತ್ತು ಗಂಟಲಿಗೆ ರೇಡಿಯೊ ಥೆರಪಿ ಚಿಕಿತ್ಸೆ ಪಡೆದವರು ತುಂಬಾ ಬಿಸಿಯಾದ ಮತ್ತು ತಣ್ಣನೆಯ ನೀರು ಅಥವಾ ಆಹಾರ ಸ್ವಲ್ಪ ಸಮಯದವರೆಗೆ ತೆಗೆದುಕೊಳ್ಳಬಾರದು. ಏಕೆಂದರೆ ವಿಕಿರಣಗಳು ಆ ಭಾಗದ ಮೇಲೆ ಬಿದ್ದಿರುವುದರಿಂದ ಆ ಭಾಗ ತುಂಬಾ ಸೂಕ್ಷ್ಮವಾಗಿರುತ್ತದೆ.ಈ ಸಮಯದಲ್ಲಿ ಬಿಸಿ ಆಹಾರ ಬಾಯಿಗೆ ಮುಟ್ಟಿದರೆ ಬಾಯಲ್ಲಿ ಹುಣ್ಣುಗಳು ಉಂಟಾಗುತ್ತವೆ.
3. ತುಂಬಾ ಬೆವರಬಾರದು: ರೇಡಿಯೊ ಥೆರಪಿ ಪಡೆದ ಮೇಲೆ ಸಾಮಾನ್ಯವಾಗಿ ಒಂದು ವಾರದ ನಂತರ ವಿಪರೀತ ಬೆವರಲಾರಂಭಿಸುತ್ತದೆ. ಈ ರೀತಿ ತುಂಬಾ ಬೆವರು ಬರದಂತೆ ನೋಡಿಕೊಳ್ಳುವುದು ಒಳ್ಳೆಯದು. ಏಕೆಂದರೆ ವಿಕಿರಣಗಳ ಪ್ರಭಾವ ತ್ವಚೆಯಲ್ಲಿರುವುದರಿಂದ ಬೆವರು ಬಂದರೆ ಚರ್ಮದ ಅಲರ್ಜಿ ಉಂಟಾಗುತ್ತದೆ.
4. ಸೂರ್ಯನ ಬೆಳಕಿಗೆ ಹೋಗಬೇಡಿ: ವಿಕಿರಣಗಳ ಚಿಕಿತ್ಸೆ ಪಡೆದ ನಂತರ ಸೂರ್ಯನ ಬೆಳಕು ನೇರವಾಗಿ ಮೈ ಮೇಲೆ ಬೀಳದಂತೆ ಎಚ್ಚರಿಕೆವಹಿಸಬೇಕು. ಹೊರಗಡೆ ಹೋಗುವಾಗ ಕೊಡೆ ಹಿಡ್ಕೊಂಡು ಹೋಗಬೇಕು.
5. ಪೋಷಕಾಂಶಗಳು: ಕ್ಯಾನ್ಸರ್ ಚಿಕಿತ್ಸೆ ಪಡೆದವರಲ್ಲಿ ಹೆಚ್ಚಿನವರು ಮಾನಸಿಕವಾಗಿ ಕುಗ್ಗಿರುತ್ತಾರೆ. ಈ ಸಮಯದಲ್ಲಿ ಅವರಿಗೆ ಆತ್ಮವಿಶ್ವಾಸ ತುಂಬಬೇಕು ಮತ್ತು ಉತ್ತಮ ಪೋಷಕಾಂಶವಿರುವ ಆಹಾರಗಳ ಸೇವನೆ ಅಗತ್ಯ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications