Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಹಣ್ಣುಗಳಿಂದ ಅಜೀರ್ಣ ಸಮಸ್ಯೆ ಉಂಟಾಗದಿರಲು ಈ ವಿಧಾನ
ಹಣ್ಣುಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿದಿರುವ ವಿಷಯ. ಆದರೆ ಹಣ್ಣುಗಳನ್ನು ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಕೆಲವೊಂದು ಹಣ್ಣುಗಳನ್ನು ತಿಂದರೆ ಅದು ಗ್ಯಾಸ್ ಸಮಸ್ಯೆಯನ್ನು ಉತ್ಪತ್ತಿ ಮಾಡುತ್ತದೆ! ಇದು ಮಾವಿನ ಹಣ್ಣಿನ ಕಾಲವಾಗಿದ್ದು ಅದನ್ನು ಮಿತಿಯಲ್ಲಿ ತಿನ್ನಬೇಕು. ಮಿತಿ ಮೀರಿ ತಿಂದರೆ ಅಜೀರ್ಣ ಸಮಸ್ಯೆ, ಹೊಟ್ಟೆ ನೋವು ಮುಂತಾದ ತೊಂದರೆಗಳು ಕಾಣಿಸಿಕೊಳ್ಳವುದು. ಆದ್ದರಿಂದ ಹಣ್ಣುಗಳನ್ನು ತಿಂದು ಆರೋಗ್ಯ ಕಳೆದು ಕೊಳ್ಳದೆ ಆರೋಗ್ಯ ಹೆಚ್ಚಿಸಿಕೊಳ್ಳುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ:

ಮಾವಿನ ಹಣ್ಣು: ಮಾವಿನ ಹಣ್ಣು ನೋಡುವಾಗ ಬಾಯಲ್ಲಿ ನೀರೂರುವುದು ಸಹಜ. ಹಾಗಂತ ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಏಕೆಂದರೆ ಇದರಲ್ಲಿ ಅಧಿಕ ನಾರಿನಂಶವಿರುವುದರಿಂದ ಜೀರ್ಣಕ್ರಿಯೆಗೆ ಕಷ್ಟವಾಗುತ್ತದೆ. ಜೀರ್ಣಕ್ರಿಯೆಗೆ ನಾರಿನಂಶ ಅಗತ್ಯ, ಆದರೆ ಮಿತಿಮೀರಿ ನಾರಿನಂಶ ಹೊಟ್ಟೆಯನ್ನು ಸೇರಿದರೆ ತೊಂದರೆ ಉಂಟಾಗುವುದ ಖಚಿತ.
ಮಾವಿನ ಹಣ್ಣು ತಿಂದಾಗ ಈ ಮೇಲೆ ಹೇಳಿದಂತಹ ತೊಂದರೆ ಉಂಟಾಗದಿರಲು ಈ ರೀತಿ ಮಾಡಿ:
ಮಾವಿನ ಹಣ್ಣಿನ ತುದಿಯಲ್ಲಿ ಮತ್ತು ತೊಟ್ಟಿನ ಕಡೆ ಸ್ವಲ್ಪ ಕತ್ತರಿಸಿ ನಂತರ ನೀರಿನಲ್ಲಿ 10-15 ನಿಮಿಷ ಮುಳುಗಿಸಿ ಇಡಬೇಕು. ಈ ರೀತಿ ಮಾಡಿದರೆ ಹಣ್ಣಿನಿಂದ ಹಾನಿಕಾರಕ ಗ್ಯಾಸ್ ಉತ್ಪತ್ತಿಯಾಗುವುದನ್ನು ತಡೆಯಬಹುದು.
ಸೇಬು: ದಿನಾ ಒಂದು ಸೇಬು ತಿಂದು ಕಾಯಿಲೆ ದೂರವಿಡಿ ಅನ್ನುವ ಸ್ಲೋಗನ್ ಇದೆ. ಆದರೆ ಕಾಯಿಲೆಯನ್ನು ದೂರವಿಡುವ ಗುಣವಿರುವ ಸೇಬು ಕೆಲವೊಮ್ಮೆ ಅಜೀರ್ಣ ಉಂಟಾಗಲು ಕಾರಣವಾಗುವುದು! ಸೇಬಿನಲ್ಲಿ ಅಧಿಕ ನಾರಿನಂಶ ಮತ್ತು ಕಾರ್ಬೋಹೈಡ್ರೇಟ್ ಅಂಶವಿದ್ದು ಜೀರ್ಣಕ್ರಿಯೆ ಸುಲಭವಾಗಿ ಆಗುವುದಿಲ್ಲ. ಸೇಬು ಹಾಗೇ ತಿನ್ನಬಹುದು, ಆದರೆ ಮಕ್ಕಳಲ್ಲಿ ಅಜೀರ್ಣ ತರಬಹುದು. ಆದ್ದರಿಂದ ಸೇಬನ್ನು ಬೇಯಿಸಿ ತಿಂದರೆ ತಿಂದು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
ಪೀಚ್, ಪಿಯರ್ಸ್ ಹಣ್ಣು: ಈ ಹಣ್ಣುಗಳು ಸ್ವಾಭಾವಿಕವಾಗಿ ಸಿಹಿಯಾಗಿರುತ್ತದೆ. ಇದರಲ್ಲಿ ನಾರಿನಂಶವಿದ್ದು ಅದು ಈ ಆಹಾರಗಳನ್ನು ತಿಂದಾಗ ಹೊಟ್ಟೆಯನ್ನು ಸೇರಿ ಜೀರ್ಣಕ್ರಿಯೆ ಸುಲಭವಾಗಿ ನಡೆಯುವುದಿಲ್ಲ. ಆದ್ದರಿಂದ ಈ ಹಣ್ಣುಗಳನ್ನು ತಿನ್ನುವ ಮೊದಲು ಸಾಕಷ್ಟು ನೀರು ಕುಡಿದು ನಂತರ ತಿಂದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











