Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಹಣ್ಣುಗಳಿಂದ ಅಜೀರ್ಣ ಸಮಸ್ಯೆ ಉಂಟಾಗದಿರಲು ಈ ವಿಧಾನ
ಹಣ್ಣುಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿದಿರುವ ವಿಷಯ. ಆದರೆ ಹಣ್ಣುಗಳನ್ನು ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಕೆಲವೊಂದು ಹಣ್ಣುಗಳನ್ನು ತಿಂದರೆ ಅದು ಗ್ಯಾಸ್ ಸಮಸ್ಯೆಯನ್ನು ಉತ್ಪತ್ತಿ ಮಾಡುತ್ತದೆ! ಇದು ಮಾವಿನ ಹಣ್ಣಿನ ಕಾಲವಾಗಿದ್ದು ಅದನ್ನು ಮಿತಿಯಲ್ಲಿ ತಿನ್ನಬೇಕು. ಮಿತಿ ಮೀರಿ ತಿಂದರೆ ಅಜೀರ್ಣ ಸಮಸ್ಯೆ, ಹೊಟ್ಟೆ ನೋವು ಮುಂತಾದ ತೊಂದರೆಗಳು ಕಾಣಿಸಿಕೊಳ್ಳವುದು. ಆದ್ದರಿಂದ ಹಣ್ಣುಗಳನ್ನು ತಿಂದು ಆರೋಗ್ಯ ಕಳೆದು ಕೊಳ್ಳದೆ ಆರೋಗ್ಯ ಹೆಚ್ಚಿಸಿಕೊಳ್ಳುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ:

ಮಾವಿನ ಹಣ್ಣು: ಮಾವಿನ ಹಣ್ಣು ನೋಡುವಾಗ ಬಾಯಲ್ಲಿ ನೀರೂರುವುದು ಸಹಜ. ಹಾಗಂತ ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಏಕೆಂದರೆ ಇದರಲ್ಲಿ ಅಧಿಕ ನಾರಿನಂಶವಿರುವುದರಿಂದ ಜೀರ್ಣಕ್ರಿಯೆಗೆ ಕಷ್ಟವಾಗುತ್ತದೆ. ಜೀರ್ಣಕ್ರಿಯೆಗೆ ನಾರಿನಂಶ ಅಗತ್ಯ, ಆದರೆ ಮಿತಿಮೀರಿ ನಾರಿನಂಶ ಹೊಟ್ಟೆಯನ್ನು ಸೇರಿದರೆ ತೊಂದರೆ ಉಂಟಾಗುವುದ ಖಚಿತ.
ಮಾವಿನ ಹಣ್ಣು ತಿಂದಾಗ ಈ ಮೇಲೆ ಹೇಳಿದಂತಹ ತೊಂದರೆ ಉಂಟಾಗದಿರಲು ಈ ರೀತಿ ಮಾಡಿ:
ಮಾವಿನ ಹಣ್ಣಿನ ತುದಿಯಲ್ಲಿ ಮತ್ತು ತೊಟ್ಟಿನ ಕಡೆ ಸ್ವಲ್ಪ ಕತ್ತರಿಸಿ ನಂತರ ನೀರಿನಲ್ಲಿ 10-15 ನಿಮಿಷ ಮುಳುಗಿಸಿ ಇಡಬೇಕು. ಈ ರೀತಿ ಮಾಡಿದರೆ ಹಣ್ಣಿನಿಂದ ಹಾನಿಕಾರಕ ಗ್ಯಾಸ್ ಉತ್ಪತ್ತಿಯಾಗುವುದನ್ನು ತಡೆಯಬಹುದು.
ಸೇಬು: ದಿನಾ ಒಂದು ಸೇಬು ತಿಂದು ಕಾಯಿಲೆ ದೂರವಿಡಿ ಅನ್ನುವ ಸ್ಲೋಗನ್ ಇದೆ. ಆದರೆ ಕಾಯಿಲೆಯನ್ನು ದೂರವಿಡುವ ಗುಣವಿರುವ ಸೇಬು ಕೆಲವೊಮ್ಮೆ ಅಜೀರ್ಣ ಉಂಟಾಗಲು ಕಾರಣವಾಗುವುದು! ಸೇಬಿನಲ್ಲಿ ಅಧಿಕ ನಾರಿನಂಶ ಮತ್ತು ಕಾರ್ಬೋಹೈಡ್ರೇಟ್ ಅಂಶವಿದ್ದು ಜೀರ್ಣಕ್ರಿಯೆ ಸುಲಭವಾಗಿ ಆಗುವುದಿಲ್ಲ. ಸೇಬು ಹಾಗೇ ತಿನ್ನಬಹುದು, ಆದರೆ ಮಕ್ಕಳಲ್ಲಿ ಅಜೀರ್ಣ ತರಬಹುದು. ಆದ್ದರಿಂದ ಸೇಬನ್ನು ಬೇಯಿಸಿ ತಿಂದರೆ ತಿಂದು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
ಪೀಚ್, ಪಿಯರ್ಸ್ ಹಣ್ಣು: ಈ ಹಣ್ಣುಗಳು ಸ್ವಾಭಾವಿಕವಾಗಿ ಸಿಹಿಯಾಗಿರುತ್ತದೆ. ಇದರಲ್ಲಿ ನಾರಿನಂಶವಿದ್ದು ಅದು ಈ ಆಹಾರಗಳನ್ನು ತಿಂದಾಗ ಹೊಟ್ಟೆಯನ್ನು ಸೇರಿ ಜೀರ್ಣಕ್ರಿಯೆ ಸುಲಭವಾಗಿ ನಡೆಯುವುದಿಲ್ಲ. ಆದ್ದರಿಂದ ಈ ಹಣ್ಣುಗಳನ್ನು ತಿನ್ನುವ ಮೊದಲು ಸಾಕಷ್ಟು ನೀರು ಕುಡಿದು ನಂತರ ತಿಂದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
