Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಹಣ್ಣುಗಳಿಂದ ಅಜೀರ್ಣ ಸಮಸ್ಯೆ ಉಂಟಾಗದಿರಲು ಈ ವಿಧಾನ
ಹಣ್ಣುಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿದಿರುವ ವಿಷಯ. ಆದರೆ ಹಣ್ಣುಗಳನ್ನು ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಕೆಲವೊಂದು ಹಣ್ಣುಗಳನ್ನು ತಿಂದರೆ ಅದು ಗ್ಯಾಸ್ ಸಮಸ್ಯೆಯನ್ನು ಉತ್ಪತ್ತಿ ಮಾಡುತ್ತದೆ! ಇದು ಮಾವಿನ ಹಣ್ಣಿನ ಕಾಲವಾಗಿದ್ದು ಅದನ್ನು ಮಿತಿಯಲ್ಲಿ ತಿನ್ನಬೇಕು. ಮಿತಿ ಮೀರಿ ತಿಂದರೆ ಅಜೀರ್ಣ ಸಮಸ್ಯೆ, ಹೊಟ್ಟೆ ನೋವು ಮುಂತಾದ ತೊಂದರೆಗಳು ಕಾಣಿಸಿಕೊಳ್ಳವುದು. ಆದ್ದರಿಂದ ಹಣ್ಣುಗಳನ್ನು ತಿಂದು ಆರೋಗ್ಯ ಕಳೆದು ಕೊಳ್ಳದೆ ಆರೋಗ್ಯ ಹೆಚ್ಚಿಸಿಕೊಳ್ಳುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ:

ಮಾವಿನ ಹಣ್ಣು: ಮಾವಿನ ಹಣ್ಣು ನೋಡುವಾಗ ಬಾಯಲ್ಲಿ ನೀರೂರುವುದು ಸಹಜ. ಹಾಗಂತ ಮಿತಿಮೀರಿ ತಿಂದರೆ ಅಜೀರ್ಣ ಸಮಸ್ಯೆ ಉಂಟಾಗುವುದು. ಏಕೆಂದರೆ ಇದರಲ್ಲಿ ಅಧಿಕ ನಾರಿನಂಶವಿರುವುದರಿಂದ ಜೀರ್ಣಕ್ರಿಯೆಗೆ ಕಷ್ಟವಾಗುತ್ತದೆ. ಜೀರ್ಣಕ್ರಿಯೆಗೆ ನಾರಿನಂಶ ಅಗತ್ಯ, ಆದರೆ ಮಿತಿಮೀರಿ ನಾರಿನಂಶ ಹೊಟ್ಟೆಯನ್ನು ಸೇರಿದರೆ ತೊಂದರೆ ಉಂಟಾಗುವುದ ಖಚಿತ.
ಮಾವಿನ ಹಣ್ಣು ತಿಂದಾಗ ಈ ಮೇಲೆ ಹೇಳಿದಂತಹ ತೊಂದರೆ ಉಂಟಾಗದಿರಲು ಈ ರೀತಿ ಮಾಡಿ:
ಮಾವಿನ ಹಣ್ಣಿನ ತುದಿಯಲ್ಲಿ ಮತ್ತು ತೊಟ್ಟಿನ ಕಡೆ ಸ್ವಲ್ಪ ಕತ್ತರಿಸಿ ನಂತರ ನೀರಿನಲ್ಲಿ 10-15 ನಿಮಿಷ ಮುಳುಗಿಸಿ ಇಡಬೇಕು. ಈ ರೀತಿ ಮಾಡಿದರೆ ಹಣ್ಣಿನಿಂದ ಹಾನಿಕಾರಕ ಗ್ಯಾಸ್ ಉತ್ಪತ್ತಿಯಾಗುವುದನ್ನು ತಡೆಯಬಹುದು.
ಸೇಬು: ದಿನಾ ಒಂದು ಸೇಬು ತಿಂದು ಕಾಯಿಲೆ ದೂರವಿಡಿ ಅನ್ನುವ ಸ್ಲೋಗನ್ ಇದೆ. ಆದರೆ ಕಾಯಿಲೆಯನ್ನು ದೂರವಿಡುವ ಗುಣವಿರುವ ಸೇಬು ಕೆಲವೊಮ್ಮೆ ಅಜೀರ್ಣ ಉಂಟಾಗಲು ಕಾರಣವಾಗುವುದು! ಸೇಬಿನಲ್ಲಿ ಅಧಿಕ ನಾರಿನಂಶ ಮತ್ತು ಕಾರ್ಬೋಹೈಡ್ರೇಟ್ ಅಂಶವಿದ್ದು ಜೀರ್ಣಕ್ರಿಯೆ ಸುಲಭವಾಗಿ ಆಗುವುದಿಲ್ಲ. ಸೇಬು ಹಾಗೇ ತಿನ್ನಬಹುದು, ಆದರೆ ಮಕ್ಕಳಲ್ಲಿ ಅಜೀರ್ಣ ತರಬಹುದು. ಆದ್ದರಿಂದ ಸೇಬನ್ನು ಬೇಯಿಸಿ ತಿಂದರೆ ತಿಂದು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
ಪೀಚ್, ಪಿಯರ್ಸ್ ಹಣ್ಣು: ಈ ಹಣ್ಣುಗಳು ಸ್ವಾಭಾವಿಕವಾಗಿ ಸಿಹಿಯಾಗಿರುತ್ತದೆ. ಇದರಲ್ಲಿ ನಾರಿನಂಶವಿದ್ದು ಅದು ಈ ಆಹಾರಗಳನ್ನು ತಿಂದಾಗ ಹೊಟ್ಟೆಯನ್ನು ಸೇರಿ ಜೀರ್ಣಕ್ರಿಯೆ ಸುಲಭವಾಗಿ ನಡೆಯುವುದಿಲ್ಲ. ಆದ್ದರಿಂದ ಈ ಹಣ್ಣುಗಳನ್ನು ತಿನ್ನುವ ಮೊದಲು ಸಾಕಷ್ಟು ನೀರು ಕುಡಿದು ನಂತರ ತಿಂದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications