Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಅಸಿಡಿಟಿ ಸಮಸ್ಯೆಗೆ 8 ಉತ್ತಮ ಪರಿಹಾರ

ಅಸಿಡಿಟಿ ಮುಖ್ಯವಾಗಿ ಕಡಿಮೆ ನಾರಿನಂಶವಿರುವ ಆಹಾರಗಳ ಸೇವನೆ, ಮಾನಸಿಕ ಮತ್ತು ಕೆಲಸದ ಒತ್ತಡ, ಮದ್ಯಪಾನ ಮತ್ತು ಧೂಮಪಾನದಿಂದ ಅಥವಾ ಖಾರಪದಾರ್ಥಗಳನ್ನು ತಿನ್ನುವುದು, ಕುರುಕಲು ತಿಂಡಿಗಳು, ಅಧಿಕ ಎಣ್ಣೆ ಪದಾರ್ಥ, ಬೆಳಗಿನ ತಿಂಡಿ ಬಿಡುವುದು ಅಥವಾ ಊಟ ಬಿಡುವುದು ಈ ಎಲ್ಲಾ ಕಾರಣಗಳಿಂದ ಉಂಟಾಗುತ್ತದೆ.
ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡರೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಉತ್ತಮವಾದ ಪ್ರಯೋಜನ ದೊರೆಯುತ್ತದೆ.
1. ಈ ಅಸಿಡಿಟಿ ಕಾಯಿಲೆಗೆ ಆರ್ಯುವೇದದಲ್ಲಿ ನೀಡುವ ಔಷಧಿ ಅಂದರೆ ಗುಲ್ಕಾನ್. ಇದನ್ನು ನಾಡ ಔಷಧಿ ಎಂದು ಕೂಡ ಹೇಳಬಹುದು. ಇದನ್ನು ತಿಂದರೆ ರಕ್ತ ಶುದ್ಧವಾಗುತ್ತದೆ, ಸ್ನಾಯುಗಳ ನೋವು ಕಡಿಮೆಯಾಗುತ್ತೆ. ಇದರಲ್ಲಿ ಕ್ಯಾಲ್ಸಿಯಂ ಮತ್ತು antioxidant ಪ್ರಮಾಣ ಅಧಿಕವಿರುವುದರಿಂದ ಸಂಧಿವಾತ ಮತ್ತು ಪಿತ್ತಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.
2. ಅಸಿಡಿಟಿ ಹೆಚ್ಚಾದರೆ ಮಲದಲ್ಲಿ ರಕ್ತ ಬರುವುದು, ಆದ್ದರಿಂದ ಅಸಿಡಿಟಿ ಕಾಣಿಸಿದರೆ ಮೊಸರನ್ನ ಊಟ ಮತ್ತು ಬಾಳೆಹಣ್ಣು ಸೇವನೆ ಒಳ್ಳೆಯದು.
3. ಅಸಿಡಿಟಿ ಮತ್ತು ಹೃದಯದ ಉರಿ ಕಡಿಮೆಯಾಗಲು ಖರ್ಜೂರ ಸಹಾಯಮಾಡುತ್ತದೆ
4. ಆಲೀವ್ ಎಲೆಯಲ್ಲಿ anti-inflammatory ಗುಣವಿರುವುದರಿಂದ ಅಸಿಡಿಟಿ ಮತ್ತು ಗ್ಯಾಸ್ಟ್ರಿಕ್, ಹೊಟ್ಟೆ ಉರಿ ಹಾಗೂ ಹೊಟ್ಟೆ ನೋವಿನಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
5. ಅಸಿಡಿಟಿ ಕಾಣಿಸಿಕೊಂಡರೆ ಸ್ವಲ್ಪ ಜೀರಿಗೆ ಬಾಯಿಗೆ ಹಾಕಿಕೊಂಡರೆ ಸಾಕು ಗುಣಮುಖವಾಗುವುದು.
6. ಅಸಿಡಿಟಿ ಇದ್ದವರು ಒಂದು ಲೋಟ ನೀರಿಗೆ ಒಂದು ತುಂಡು ಬೆಲ್ಲ ಹಾಕಿ ಕರಗಿಸಿ ಊಟವಾದ ಮೇಲೆ ಕುಡಿಯುವುದು ಒಳ್ಳೆಯದು.
7. ಗ್ಯಾಸ್ಟ್ರಿಕ್, ಅಸಿಡಿಟಿ, ಅಜೀರ್ಣ ಮುಂತಾದ ಕಾರಣದಿಂದ ಹೊಟ್ಟೆ ನೋವು ಬಂದಾಗ ಬಿಸಿ ನೀರಿನೊಂದಿಗೆ ಓಮು ಕಾಳನ್ನು ತಿನ್ನುವುದರಿಂದ ಉಪಶಮನಗೊಳ್ಳುತ್ತದೆ.
8. ಒಂದು ಹಿಡಿ ಪಾಲಕ್ ಸೊಪ್ಪು, ಸಣ್ಣ ಹಸಿ ಶುಂಠಿ, ಒಂದು ಹಿಡಿ ಕೊತ್ತಂಬರಿ, ಜೀರಿಗೆ 1 ಚಮಚ ಈ ಪದಾರ್ಥಗಳನ್ನು ಮಿಕ್ಸಿಯಲ್ಲಿ ಹಾಕಿ ಎರಡು ಗ್ಲಾಸ್ ನೀರು ಹಾಕಿ ಚೆನ್ನಾಗಿ ಜ್ಯೂಸ್ ಮಾಡಬೇಕು. ಒಂದು ಬಿಳಿ ಬಟ್ಟೆಯಲ್ಲಿ ಜ್ಯೂಸ್ ಅನ್ನು ಸೋಸಿ, ಲಿಂಬೆ ಹಣ್ಣಿನ ರಸ ಸೇರಿಸಿ ಕುಡಿದರೆ ಅಸಿಡಿಟಿ ಕಡಿಮೆಯಾಗುವುದು. ಸಿದ್ಧಪಡಿಸಿದ ಗ್ರೀನ್ ಜ್ಯೂಸ್ ಅನ್ನು ಬಹಳ ಹೊತ್ತು ಇಡಬಾರದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications