Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಮಳೆಗಾಲದಲ್ಲಿ ಆರೋಗ್ಯ ರಕ್ಷಣೆ ಹೇಗೆ?

ಹೊರಗಡೆ ತಿನ್ನದಿರುವುದು: ಬೀದಿ ಬದಿಯ ತಿಂಡಿಗಳನ್ನು ಈ ಸಮಯದಲ್ಲಿ ಆದಷ್ಟು ತಿನ್ನದಿರುವುದು ಒಳ್ಳೆಯದು. ಆದರೆ ಮಳೆಗಾಲದಲ್ಲಿ ಇಂತಹ ತಿಂಡಿಗಳನ್ನು, ಕರಿದ ತಿಂಡಿಗಳನ್ನು ತಿನ್ನಬೇಕೆನಿಸುವುದು ಸಹಜ, ಆದರೆ ಈ ಬೀದಿ ಬದಿಯಲ್ಲಿರುವ ತಿಂಡಿಗಳಲ್ಲಿ ಬ್ಯಾಕ್ಟೀರಿಯಾಗಳು ಕೂರುವುದು ಹೆಚ್ಚು. ಡಯೆರಿಯಾ, ಕಾಲರ ಮುಂತಾದ ರೋಗಗಳು ಕಶ್ಮಲ ನೀರು ಕುಡಿಯುವುದರಿಂದ ಬರುತ್ತದೆ, ಬೀದಿ ಬದಿಯ ಗಾಡಿಗಳಲ್ಲಿ ಸ್ವಲ್ಪ ನೀರು ಇಟ್ಟು ಅದರಲ್ಲಿಯೇ ಪ್ಲೇಟ್ ತೊಳೆದು ಮಸಾಲಪುರಿ, ಪಾನಿಪುರಿ ಕೊಡುತ್ತಿರುತ್ತಾರೆ. ಇಂತಹ ತಿಂಡಿಗಳನ್ನು ತಿಂದರೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚು.
ಹಸಿರು ಮತ್ತು ಬಣ್ಣದ ತರಕಾರಿ: ಹಸಿರು ಸೊಪ್ಪು ಮತ್ತು ಅನೇಕ ಬಗೆಯ ತರಕಾರಿಗಳನ್ನು ಈ ಸಮಯದಲ್ಲಿ ಹೆಚ್ಚಾಗಿ ಸೇವಿಸಬೇಕು. ಈ ತರಕಾರಿಗಳನ್ನು ಕುಯ್ದು ಬಿಸಿನೀರಿನಲ್ಲಿ ತೊಳೆದು ನಂತರ ಅಡುಗೆಗೆ ಬಳಸಿದರೆ ಒಳ್ಳೆಯದು.
ಮಳೆಯಲ್ಲಿ ಒದ್ದೆಯಾದರೆ ತಕ್ಷಣ ಸ್ನಾನ ಮಾಡಿ: ಮಳೆ ಬರಲ್ಲ ಅಂತ ಹೊರಗೆ ಹೋಗಿರುತ್ತೇವೆ, ಆಗ ಇದ್ದಕಿದ್ದ ಹಾಗೇ ಮಳೆ ಬಂದರೆ ಪೂರ್ತಿ ಒದ್ದೆಯಾಗುತ್ತೇವೆ, ಈ ರೀತಿ ಒದ್ದೆಯಾದರೆ ತಲೆ ಒರೆಸಿ ಸುಮ್ಮನೆ ಕೂರುವ ಬದಲು ಮನೆಗೆ ಬಂದ ಕೂಡಲೇ ನೀರನ್ನು ಬಿಸಿ ಮಾಡಿ ಸ್ನಾನ ಮಾಡಬೇಕು. ಬಟ್ಟೆ ಒದ್ದೆಯಾಗಿದ್ದರೆ ಕೂಡಲೇ ಬದಲಾಯಿಸಬೇಕು.
ತಾಜಾ ಮೀನು ಮಾತ್ರ ತಿನ್ನಬೇಕು: ಮೀನು ಕೊಳ್ಳುವುದಾದರೆ ತಾಜಾ ಮೀನು ಮಾತ್ರಕೊಳ್ಳಬೇಕು. ಫ್ರಿಜ್ ನಲ್ಲಿಟ್ಟ ಮೀನು ಈ ಸಮಯದಲ್ಲಿ ಕೊಳ್ಳದಿರುವುದು ಒಳ್ಳೆಯದು, ಒಣಗಿದ ಮೀನು ಕೊಳ್ಳುವುದಾದರೆ ಅದರಲ್ಲಿ ತೇವಾಂಶವಿರಬಾರದು.
ನೀರನ್ನು ಹೆಚ್ಚು ಕುಡಿಯಬೇಕು: ಕೆಲವರು ಮಳೆಗಾಲದಲ್ಲಿ ಹೆಚ್ಚಾಗಿ ಬಾಯಾರಿಕೆಯಾಗದಿರುವುದರಿಂದ ತುಂಬ ಕಡಿಮೆ ನೀರು ಕುಡಿಯುತ್ತಾರೆ, ಆದರೆ ಯಾವುದೇ ಕಾಲವಾಗಿರಲಿ ಆರೋಗ್ಯಕರವಾಗಿರಲು ಪ್ರತಿದಿನ 8-10 ಗ್ಲಾಸ್ ನೀರು ಕುಡಿಯುವುದು ಅವಶ್ಯಕ. ನೀರನ್ನು ಬಿಸಿ ಮಾಡಿ ಕುಡಿಯುವುದು ಒಳ್ಳೆಯದು. ಅಲ್ಲದೆ ಈ ಸಮಯದಲ್ಲಿ ಕಷಾಯ ಮತ್ತು ಹರ್ಬಲ್ ಟೀ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿ ಕಾಯಿಲೆ ಬರುವುದನ್ನು ತಡೆಯಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications