Latest Updates
-
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ!
ಮಳೆಗಾಲದಲ್ಲಿ ಆರೋಗ್ಯ ರಕ್ಷಣೆ ಹೇಗೆ?

ಹೊರಗಡೆ ತಿನ್ನದಿರುವುದು: ಬೀದಿ ಬದಿಯ ತಿಂಡಿಗಳನ್ನು ಈ ಸಮಯದಲ್ಲಿ ಆದಷ್ಟು ತಿನ್ನದಿರುವುದು ಒಳ್ಳೆಯದು. ಆದರೆ ಮಳೆಗಾಲದಲ್ಲಿ ಇಂತಹ ತಿಂಡಿಗಳನ್ನು, ಕರಿದ ತಿಂಡಿಗಳನ್ನು ತಿನ್ನಬೇಕೆನಿಸುವುದು ಸಹಜ, ಆದರೆ ಈ ಬೀದಿ ಬದಿಯಲ್ಲಿರುವ ತಿಂಡಿಗಳಲ್ಲಿ ಬ್ಯಾಕ್ಟೀರಿಯಾಗಳು ಕೂರುವುದು ಹೆಚ್ಚು. ಡಯೆರಿಯಾ, ಕಾಲರ ಮುಂತಾದ ರೋಗಗಳು ಕಶ್ಮಲ ನೀರು ಕುಡಿಯುವುದರಿಂದ ಬರುತ್ತದೆ, ಬೀದಿ ಬದಿಯ ಗಾಡಿಗಳಲ್ಲಿ ಸ್ವಲ್ಪ ನೀರು ಇಟ್ಟು ಅದರಲ್ಲಿಯೇ ಪ್ಲೇಟ್ ತೊಳೆದು ಮಸಾಲಪುರಿ, ಪಾನಿಪುರಿ ಕೊಡುತ್ತಿರುತ್ತಾರೆ. ಇಂತಹ ತಿಂಡಿಗಳನ್ನು ತಿಂದರೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚು.
ಹಸಿರು ಮತ್ತು ಬಣ್ಣದ ತರಕಾರಿ: ಹಸಿರು ಸೊಪ್ಪು ಮತ್ತು ಅನೇಕ ಬಗೆಯ ತರಕಾರಿಗಳನ್ನು ಈ ಸಮಯದಲ್ಲಿ ಹೆಚ್ಚಾಗಿ ಸೇವಿಸಬೇಕು. ಈ ತರಕಾರಿಗಳನ್ನು ಕುಯ್ದು ಬಿಸಿನೀರಿನಲ್ಲಿ ತೊಳೆದು ನಂತರ ಅಡುಗೆಗೆ ಬಳಸಿದರೆ ಒಳ್ಳೆಯದು.
ಮಳೆಯಲ್ಲಿ ಒದ್ದೆಯಾದರೆ ತಕ್ಷಣ ಸ್ನಾನ ಮಾಡಿ: ಮಳೆ ಬರಲ್ಲ ಅಂತ ಹೊರಗೆ ಹೋಗಿರುತ್ತೇವೆ, ಆಗ ಇದ್ದಕಿದ್ದ ಹಾಗೇ ಮಳೆ ಬಂದರೆ ಪೂರ್ತಿ ಒದ್ದೆಯಾಗುತ್ತೇವೆ, ಈ ರೀತಿ ಒದ್ದೆಯಾದರೆ ತಲೆ ಒರೆಸಿ ಸುಮ್ಮನೆ ಕೂರುವ ಬದಲು ಮನೆಗೆ ಬಂದ ಕೂಡಲೇ ನೀರನ್ನು ಬಿಸಿ ಮಾಡಿ ಸ್ನಾನ ಮಾಡಬೇಕು. ಬಟ್ಟೆ ಒದ್ದೆಯಾಗಿದ್ದರೆ ಕೂಡಲೇ ಬದಲಾಯಿಸಬೇಕು.
ತಾಜಾ ಮೀನು ಮಾತ್ರ ತಿನ್ನಬೇಕು: ಮೀನು ಕೊಳ್ಳುವುದಾದರೆ ತಾಜಾ ಮೀನು ಮಾತ್ರಕೊಳ್ಳಬೇಕು. ಫ್ರಿಜ್ ನಲ್ಲಿಟ್ಟ ಮೀನು ಈ ಸಮಯದಲ್ಲಿ ಕೊಳ್ಳದಿರುವುದು ಒಳ್ಳೆಯದು, ಒಣಗಿದ ಮೀನು ಕೊಳ್ಳುವುದಾದರೆ ಅದರಲ್ಲಿ ತೇವಾಂಶವಿರಬಾರದು.
ನೀರನ್ನು ಹೆಚ್ಚು ಕುಡಿಯಬೇಕು: ಕೆಲವರು ಮಳೆಗಾಲದಲ್ಲಿ ಹೆಚ್ಚಾಗಿ ಬಾಯಾರಿಕೆಯಾಗದಿರುವುದರಿಂದ ತುಂಬ ಕಡಿಮೆ ನೀರು ಕುಡಿಯುತ್ತಾರೆ, ಆದರೆ ಯಾವುದೇ ಕಾಲವಾಗಿರಲಿ ಆರೋಗ್ಯಕರವಾಗಿರಲು ಪ್ರತಿದಿನ 8-10 ಗ್ಲಾಸ್ ನೀರು ಕುಡಿಯುವುದು ಅವಶ್ಯಕ. ನೀರನ್ನು ಬಿಸಿ ಮಾಡಿ ಕುಡಿಯುವುದು ಒಳ್ಳೆಯದು. ಅಲ್ಲದೆ ಈ ಸಮಯದಲ್ಲಿ ಕಷಾಯ ಮತ್ತು ಹರ್ಬಲ್ ಟೀ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿ ಕಾಯಿಲೆ ಬರುವುದನ್ನು ತಡೆಯಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











