Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಹೆಚ್ಚುತ್ತಿರುವ ಮೂಲವ್ಯಾಧಿಗೆ ಜೀವನಶೈಲಿ ಕಾರಣ!

ಮೂಲವ್ಯಾಧಿಯ ಆರಂಭದಲ್ಲಿ ಮಲವಿಸರ್ಜನೆಯ ಸಮಯದಲ್ಲಿ ಸ್ವಲ್ಪ ರಕ್ತಸ್ರಾವ ಗೋಚರಿಸುತ್ತದೆ. ಈ ತರಹದ ಸ್ಥಿತಿ ಬಹುಕಾಲ ಹಾಗೆಯೇ ಮುಂದುವರಿಯಬಹುದು. ಕೆಲಕಾಲದ ನಂತರ ಉಬ್ಬಿದ ರಕ್ತನಾಳಗಳು ಮಲವಿಸರ್ಜನೆಯ ಕಾಲದಲ್ಲಿ ಹೊರಚಾಚಲ್ಪಡುತ್ತವೆ. ಅನಂತರ ಒಳಸೇರಿಕೊಳ್ಳುತ್ತವೆ. ಕಾಯಿಲೆ ಮುಂದುವರೆದಂತೆ ರಕ್ತನಾಳಗಳು ಗುಂಪಿನ ಗಾತ್ರ ಕುಗ್ಗುವುದಿಲ್ಲ ಮತ್ತು ಅವು ತಂತಾನೇ ಒಳಸೇರಿಕೊಳ್ಳುವುದಿಲ್ಲ.
ಬಹುಕಾಲದಿಂದ ಮಲಬದ್ಧತೆಯಿಂದ ನರಳುವವರಲ್ಲಿ ಗಟ್ಟಿಯಾದ ಮಲ ಗುದದ್ವಾರದ ಮೂಲಕ ಹೊರಬರುವಾಗ ಅದು ಯಾವ ಸ್ನಾಯುವಿನ ಆಧಾರವನ್ನು ಪಡೆಯದೇ ಗುದನಾಳದ ಅಂತ್ಯ ಭಾಗವನ್ನು ಗೀಚುವಂತೆ ಅಂದರೆ ಸೀಳುವಂತೆ ಮಾಡುತ್ತದೆ. ಈ ರೀತಿ ಉಂಟಾದಾಗ ಆಗ ಅಲ್ಲಿನ ಚರ್ಮ ಬಿರುಕುಗೊಳ್ಳುವುದು. ಇದನ್ನು ಫಿಶ್ ಎಂದು ಕರೆಯಲಾಗುವುದು. ಈ ರೀತಿ ಉಂಟಾದಾಗ ತುಂಬಾ ನೋವು ಉಂಟಾಗುತ್ತದೆ. ನಂತರ ಮಲವಿಸರ್ಜನೆಗೆ ಹೋದಾಗಲೆಲ್ಲ ನೋವು ಬರುತ್ತಾ ಇರುತ್ತದೆ. ಈ ರೀತಿ ನೋವು ತಡೆಯಲು ಕೆಲವರು ಮಲವಿಸರ್ಜನೆಯನ್ನು ಹತ್ತಿಕ್ಕಲಾರಂಭಿಸುತ್ತಾರೆ. ಈ ರೀತಿ ಮಾಡಿದರೆ ಸಮಸ್ಯೆ ಮತ್ತಷ್ಟು ಗಂಭೀರವಾಗುವುದು.
ಮೂಲವ್ಯಾಧಿ ಮತ್ತು ಫಿಶ್ಗೆ ಪ್ರಮುಖ ಕಾರಣ ಮಲಬದ್ಧತೆ. ಆದ್ದರಿಂದ ಮಲಬದ್ಧತೆ ಸಮಸ್ಯೆ ಉಂಟಾದರೆ ನಿರ್ಲಕ್ಷ್ಯ ಮಾಡದೆ ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಂಡು ಸರಿಪಡಿಸಬೇಕು. ಈ ರೀತಿ ಮಾಡಿದರೆ ಮೂಲವ್ಯಾಧಿ ಸಮಸ್ಯೆ ಉಂಟಾಗದಂತೆ ತಡೆಯಬಹುದು. ಕರುಳಿನ ಚಲನೆ (bowel movements) ಸರಿಯಾಗಿದ್ದಲ್ಲಿ ಮಲವಿಸರ್ಜನೆ ಸರಿಯಾಗಿ ಆಗುತ್ತದೆ.
ನಮ್ಮ ಆಹಾರಕ್ರಮಯಂತೂ ಸಂಪೂರ್ಣವಾಗಿ ಬದಲಾಗುತ್ತಿದೆ. ಫಾಸ್ಟ್ ಫುಡ್ ಹೆಚ್ಚಾಗಿ ಸೇವಿಸುತ್ತೇವೆ. ಈ ಆಹಾರದಲ್ಲಿ ಹೆಚ್ಚು ನಾರಿನಂಶವಿರುವುದಿಲ್ಲ. ನಾರಿನಂಶ ಹೆಚ್ಚು ಇರುವುದಿಲ್ಲ. ಅಲ್ಲದೆ ನಮ್ಮಲ್ಲಿ ಈಗ ಕಂಪ್ಯೂಟರ್ ಬಳಕೆ ಹೆಚ್ಚಾಗಿರುವುದರಿಂದ ಓಡಾಡದೆ 8-10 ಗಂಟೆ 8 ಗಂಟೆ ಒಂದೇ ಕಡೆ ಕುಳಿತು ಕೆಲಸ ಮಾಡುತ್ತೇವೆ. ಕೆಲಸದಲ್ಲಿ ನಮಗೆ ದೈಹಿಕ ಶ್ರಮ ಅತ್ಯಂತ ಕಡಿಮೆ. ಮಾನಸಿಕವಾಗಿ ಒತ್ತಡ ಹೆಚ್ಚು. ನಮ್ಮ ದೈಹಿಕ ಶ್ರಮಕ್ಕೆ ನಾವು ತೆಗೆದುಕೊಳ್ಳುತ್ತಿರುವ ಆಹಾರವೇ ಹೆಚ್ಚು. ಎರಡು ಗಂಟೆಗೊಮ್ಮೆ 5-10 ನಿಮಿಷ ಓಡಾಡಿ ಕುಳಿತುಕೊಳ್ಳುವುದು ಒಳ್ಳೆಯದು. ಪ್ರತಿದಿನ ನಿಯಮಿತವಾಗಿ ಅರ್ಧಗಂಟೆ ವ್ಯಾಯಾಮ ಇಲ್ಲವೇ ಒಂದು ಗಂಟೆ ನಡಿಗೆ ರೂಢಿಸಿಕೊಳ್ಳಬೇಕು. ಇದರಿಂದ ಉದರದ ಮಾಂಸಖಂಡಗಳಿಗೆ ವ್ಯಾಯಾಮ ಆಗುತ್ತದೆ. ಕರುಳಿನ ಚಲನೆ ಹೆಚ್ಚುತ್ತದೆ.
ಮೂಲವ್ಯಾಧಿ ಇರುವವರಿಗೆ ಆಗಾಗ ತುರಿಕೆ ಉಟಾಗುತ್ತದೆ. ಆಗ ಕೆರೆದುಕೊಳ್ಳಬಾರದು ಏಕೆಂದರೆ ಉಗುರು ತಾಗಿದರೆ ಅಲ್ಲಿನ ಮೃದು ಚರ್ಮ ಬಿರುಕುಬಿಡಬಹುದು. ಗುದದ್ವಾರದ ಸ್ವಚ್ಛತೆ ಬಹಳ ಮುಖ್ಯ. ತುರಿಕೆಯಾದಾಗ ಬಿಸಿನೀರನ್ನು ಹಾಕಿಕೊಂಡರೆ ತುರಿಕೆ ಕಡಿಮೆಯಾಗುವುದು. ಇದು ಇರುವವರು ಒಂದು ಅಗಲವಾದ ಟಬ್ನಲ್ಲಿ ಬಿಸಿನೀರು ಹಾಕಿ ಕುಳಿತುಕೊಳ್ಳಬೇಕು. ಹೀಗೆ ಕುಳಿತುಕೊಳ್ಳುವುದರಿಂದ ನೋವು ಕಡಿಮೆಯಾಗುತ್ತದೆ. ರಕ್ತನಾಳಗಳಲ್ಲಿ ರಕ್ತ ಹರಿಯುವಿಕೆ ಹೆಚ್ಚಾಗಿ ಸಲೀಸಾಗುತ್ತದೆ.
ಮಹಿಳೆಯರು ಗಮನಿಸಬೇಕಾದ ಅಂಶ – ಮಹಿಳೆಯರಲ್ಲಿ ಮೂತ್ರದ್ವಾರ, ಜನನಾಂಗ ಮತ್ತು ಗುದದ್ವಾರ ಮೂರು ಒಂದೇ ಕಡೆ ಇರುವುದರಿಂದ ಸ್ವಚ್ಛತೆ ಮತ್ತು ಎಚ್ಚರಿಕೆ ಬಹಳ ಮುಖ್ಯ. ಪ್ರತಿಬಾರಿ ಮೂತ್ರ ಮತ್ತು ಮಲವಿಸರ್ಜನೆ ಸಮಯದಲ್ಲಿ ಮೂತ್ರದ್ವಾರ, ಜನನಾಂಗ ಸ್ವಚ್ಛಗೊಳಿಸಿಕೊಂಡು ನಂತರ ಗುದದ್ವಾರ ಸ್ವಚ್ಛಗೊಳಿಸಿಕೊಳ್ಳಬೇಕು. ಚಿಕ್ಕಮಕ್ಕಳಿರುವಾಗಲೇ ತಾಯಂದಿರು ಈ ರೂಢಿ ಕಲಿಸಬೇಕು. ಅನೇಕರು ತಪ್ಪು ಮಾಡುತ್ತಾರೆ. ಗುದದ್ವಾರ ಸ್ವಚ್ಛಗೊಳಿಸಿಕೊಂಡ ನಂತರವೇ ಜನನಾಂಗ, ಮೂತ್ರದ್ವಾರ ಸ್ವಚ್ಛಗೊಳಿಸುತ್ತಾರೆ. ಒಳ ಉಡುಪುಗಳನ್ನು ಬಿಸಿ ನೀರಿನಲ್ಲಿ ತೊಳೆದು ಬಿಸಿಲಿಗೆ ಒಣಗಿಸಬೇಕು. ಬಿಸಿಲಿಲ್ಲದಿದ್ದಾಗ ಇಸ್ತ್ರಿ ಮಾಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications