Latest Updates
-
ವಿಶ್ವ ಸೈಕಲ್ ದಿನ: ಫಿಟ್ನೆಸ್ ಮತ್ತು ಟ್ರಾಫಿಕ್ ಸಮಸ್ಯೆಗೆ ಸೈಕ್ಲಿಂಗ್ಗಿಂತ ಉತ್ತಮ ಪರಿಹಾರವಿದೆಯೇ? -
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು!
ಈ ರೀತಿಯ ಮರೆವು ತರುವುದು ಅಪಾಯ!

ಈ ರೀತಿಯ ಮರೆವಿನ ಕಾಯಿಲೆ ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ, ಕೆಲವರಿಗೆ ಚಿಕ್ಕ ಪ್ರಾಯದಲ್ಲಿಯೇ ಕಂಡು ಬರುವುದು. ಈ ಕೆಳಗಿನಂತೆ ಉಂಟಾಗುತ್ತಿದ್ದರೆ ಅವು ಅಲ್ಜೈಮರ್ಸ್ ಕಾಯಿಲೆಯ ಲಕ್ಷಣಗಳಾಗಿವೆ.
1. ದಿನದಿಂದ ದಿನಕ್ಕೆ ಮರೆವು ಹೆಚ್ಚಾಗುವುದು. ಇಟ್ಟ ವಸ್ತುಗಳು ತಕ್ಷಣ ನೆನೆಪಿಗೆ ಬರದಿರುವುದು, ಎಲ್ಲಿಗೋ ಹೊರಟಿರುತ್ತೇವೆ, ಆದರೆ ಮಧ್ಯ ದಾರಿಯವರೆಗೆ ಬಂದ ಮೇಲೆ ಎಲ್ಲಿಗೆ ಹೋಗಬೇಕೆನ್ನುವುದು ಮರೆತು ಹೋಗುವುದು.
2. ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿರುವುದು. ತುಂಬಾ ಪರಿಚಿತರ ಹೆಸರು ಮೆರೆತು ಹೋಗುವುದು. ಗೊತ್ತಿರುವ ಕೆಲಸವನ್ನು ಮರೆಯುವುದು, ದಿನಾ ಓಡಾಡುವ ರೋಡ್ ನಲ್ಲಿ ಕೆಲವೊಮ್ಮೆ ದಾರಿ ಮರೆತು ಹೋಗುವುದು, ಡ್ರೈವಿಂಗ್ ಮಾಡುವಾಗ ಅದೇ ರಸ್ತೆಯಲ್ಲಿ ಅನೇಕ ಬಾರಿ ಹೋಗಿದ್ದರೂ ಕೂಡ ಆ ರಸ್ತೆಯಲ್ಲಿ ಚಾಲನೆ ಮಾಡುವಾಗ ಚಾಲನೆ ತಪ್ಪುವುದು, ದಿನಾ ಆಡುತ್ತಿರುವ ಆಟದ ನಿಯಮಗಳು ಮರೆತು ಹೋಗುವುದು.
3. ಈ ಕಾಯಿಲೆಯಿಂದ ದೃಷ್ಟಿ ಸಮಸ್ಯೆ ಕಂಡು ಬರುವುದು. ಓದಲು ಅಥವಾ ದೂರದಲ್ಲಿರುವ ವಸ್ತುಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ರೂಮಿನಲ್ಲಿರುವ ಕನ್ನಡಿಯಲ್ಲಿ ತಮ್ಮದೇ ಪ್ರತಿಬಿಂಬ ನೋಡಿ ಬೇರೆ ಯಾರೊ ಇದ್ದಾರೆ ಎಂದು ಭಾವಿಸುವುದು ಇವೆಲ್ಲಾ ಈ ಕಾಯಿಲೆಯ ಲಕ್ಷಣವಾಗಿದೆ.
4. ಈ ರೀತಿ ಕಾಯಿಲೆ ಬಂದವರು ಮಾತನಾಡುತ್ತಿರುವಾಗಲೇ ತಕ್ಷಣ ಮಾತು ನಿಲ್ಲಿಸುತ್ತಾರೆ, ನಂತರ ಮಾತನ್ನು ಹೇಗೆ ಮುಂದುವರೆಸಬೇಕೆಂದು ಮರೆತು ಹೋಗಿ ತಲೆಯಲ್ಲಿ ಏನೂ ಹೊಳೆಯದೆ ಖಾಲಿ ಆದಂತೆ ಅನಿಸುತ್ತದೆ.
5. ಈ ರೀತಿ ಕಾಯಿಲೆ ಬಂದರೆ ಯಾವುದೇ ವಿಷಯದಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವಿರುವುದಿಲ್ಲ. ಏಕೆಂದರೆ ಆಲೋಚನೆ ಶಕ್ತಿ ಕಡಿಮೆಯಾಗಿ ಮರೆವು ಜಾಸ್ತಿ ಆಗುತ್ತದೆ.
6. ಈ ರೀತಿ ಕಾಯಿಲೆ ಉಂಟಾದರೆ ನಿಧಾನಕ್ಕೆ ತಮ್ಮ ಹವ್ಯಾಸ, ಸಾಮಾಜಿಕ ಚಟುವಟಿಕೆಗಳನ್ನು ನಿಲ್ಲಿಸುತ್ತಾರೆ. ಏಕೆಂದರೆ ಅವರಿಗೆ ತಮ್ಮ ಹವ್ಯಾಸದ ಬಗ್ಗೆ ನೆನಪು ಇರುವುದಿಲ್ಲ.
7. ಈ ಕಾಯಿಲೆ ಬಂದರೆ ಮನಸ್ಸಿನಲ್ಲಿ ಗೊಂದಲ, ಸಂಶಯ, ಖಿನ್ನತೆ ಕಾಣಿಸಿಕೊಳ್ಳುತ್ತದೆ. ಮನೆಯವರ ಜೊತೆಗೆ, ಕೆಲಸದ ಜಾಗದಲ್ಲಿ, ಸ್ನೇಹಿತರ ಜೊತೆ ಬೆರೆಯಲು ಇಷ್ಟಪಡುವುದಿಲ್ಲ. ಅಲ್ಲದೆ ಮನಸ್ಸಿನಲ್ಲಿ ಅಭದ್ರತೆ ಭಾವನೆ ಉಂಟಾಗುತ್ತದೆ.
ಈ ರೀತಿಯ ಕಾಯಿಲೆಯನ್ನು ಮೊದಲನೇ ಹಂತದಲ್ಲಿ ಗುರುತಿಸಿದರೆ, ವೈದ್ಯರನ್ನು ಕಂಡು ಚಿಕಿತ್ಸೆಯನ್ನು ಪಡೆದು, ಮೆದುಳಿನ ಸಾಮರ್ಥ್ಯ ಹೆಚ್ಚಿಸುವ ಅಭ್ಯಾಸಗಳನ್ನು ಮಾಡಿದರೆ ನೆನಪಿನ ಶಕ್ತಿಯನ್ನು ಉಳಿಸಿಕೊಳ್ಳಬಹುದು.
ಮೆದುಳಿನ ಸಾಮರ್ಥ್ಯ ಹೆಚ್ಚಿಸುವ ಆಹಾರಗಳ ಬಗ್ಗೆ ತಿಳಿಯಲು ಮುಂದೆ ನೋಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications