Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಖಿನ್ನತೆಯನ್ನು ಗುಣ ಪಡಿಸದಿದ್ದರೆ ಜೀವಕ್ಕೆ ಅಪಾಯ
ಹಳ್ಳಿಯವರಿಗಿಂತ ನಗರ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಕೆಲಸದ ಒತ್ತಡ, ಒಂಟಿತನ, ಮೋಸ, ಆರ್ಥಿಕ ಸಮಸ್ಯೆ ಇವೆಲ್ಲಾ ಮಾನಸಿಕ ಸಮಸ್ಯೆ ಉಂಟಾಗಲು ಪ್ರಮುಖ ಕಾರಣಗಳಾಗಿವೆ.
ಈ ರೀತಿ ಉಂಟಾದರೆ ಖಿನ್ನತೆ, ಸುಸ್ತು, ನಿರಾಸೆ, ನಿರಾಸಕ್ತಿ ಉಂಟಾಗುತ್ತದೆ. ಈ ರೀತಿ ಒಂದು ಅಥವಾ ಎರಡು ದಿನವಿದ್ದರೆ ಸರಿ, ಆದರೆ ಇದೇ ಖಿನ್ನತೆ ತುಂಬಾ ದಿನಗಳವರೆಗೆ ಇದ್ದರೆ ಆ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಳ್ಳಬಹುದು. ಆದ್ದರಿಂದ ನಮ್ಮ ಮನೆಯಲ್ಲಿ ಯಾರಾದರೂ ಅಥವಾ ನಮ್ಮ ಗೆಳೆಯರು ಖಿನ್ನತೆಯಲ್ಲಿದ್ದರೆ ಮೊದಲನೇ ಹಂತದಲ್ಲಿಯೇ ಅವರನ್ನು ಅದರಿಂದ ಹೊರತರಲು ಶ್ರಮಿಸಬೇಕು. ಇಲ್ಲದಿದ್ದರೆ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಬಹುದು ಅಥವಾ ಏನಾದರೂ ಅನಾಹುತ ಮಾಡಿಕೊಳ್ಳಬಹುದು.

ಕಾರಣ ತಿಳಿದುಕೊಳ್ಳಲು ಪ್ರಯತ್ನಿಸಿ: ಅವರು ಈ ರೀತಿ ಖಿನ್ನತೆಯಿಂದ ಇರಲು ಕಾರಣವೇನು ಎಂದು ತಿಳಿದುಕೊಳ್ಳಲು ಪ್ರಯತ್ನಿಸಿ. ಅವರು ಹೇಳದಿದ್ದರೂ ಹೇಗಾದರೂ ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. ಕಾರಣ ತಿಳಿದರೆ ಅದಕ್ಕೆ ಪರಿಹಾರ ಹುಡುಕುವುದು ಸುಲಭವಾಗುತ್ತದೆ.
ನೈಜತೆಯನ್ನು ಒಪ್ಪಿಕೊಳ್ಳಲು ಹೇಳಿ: ಕೆಲವೊಂದು ಆಘಾತಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದಾಗ ಖಿನ್ನತೆ ಉಂಟಾಗಬಹುದು. ಆಗ ಅವರಿಗೆ ಇದೇ ವಾಸ್ತವೆಂದು ಮನವೊಲೆಸಿ.
ಕೌನ್ಸಿಲಿಂಗ್ ಕೊಡಿಸಿ: ನಿಮಗೆ ಅವರ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗದಿದ್ದರೆ ಕೌನ್ಸಿಲಿಂಗ್ ಕೊಡಿಸಿ. ಬರೀ ಮಾತ್ರೆ ನುಂಗುವುದರಿಂದ ಪ್ರಯೋಜನವಿಲ್ಲ, ಈ ಸಮಯದಲ್ಲಿ ಅವರಿಗೆ ಭಾವನಾತ್ಕವಾದ ಬೆಂಬಲ (ಸಪೋರ್ಟ್) ನೀಡಬೇಕು.
ಸ್ಥಳ ಬದಲಾವಣೆ: ಆ ಸ್ಥಳದಿಂದ ಅವರನ್ನು ಪ್ರಕೃತಿ ರಮಣೀಯ ಸ್ಥಳಗಳಿಗೆ ಕೊಂಡೊಯ್ಯಿರಿ. ಇದರಿಂದ ಅವರಿಗೊಂದು ಚೇಂಜ್ ದೊರೆಯುತ್ತದೆ, ಅವರ ಮಾನಸಿಕ ಸ್ಥಿತಿಯೂ ಸುಧಾರಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
