Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಸಣ್ಣ ಪುಟ್ಟ ಕಾಯಿಲೆಗಳಿಗೆ ರಾಮಬಾಣವಾದ ಆಹಾರಗಳು
ಕೆಲವೊಂದು ಆಹಾರಗಳು ನಮ್ಮಲ್ಲಿ ಕಂಡು ಬರುವ ಚಿಕ್ಕ ಪುಟ್ಟ ಕಾಯಿಲೆಗಳನ್ನು ದೂರ ಮಾಡುವಲ್ಲಿ ತುಂಬಾ ಪ್ರಯೋಜನಕಾರಿಯಾಗಿರುತ್ತದೆ. ಉದಾಹರಣೆಗೆ ಪ್ರಯಾಣ ಮಾಡುವಾಗ ವಾಂತಿ ಬರುವ ಅನುಭವ ಉಂಟಾದರೆ ನಿಂಬೆ ಹಣ್ಣನ್ನು ಮೂಸಿದರೆ ಸಾಕು. ಅದರ ವಾಸನೆಗೆ ವಾಂತಿ ಬರುವುದಿಲ್ಲ.
ಹೀಗೆ ನಾವು ದಿನ ನಿತ್ಯ ಬಳಸುವ ಅನೇಕ ಆಹಾರಗಳು ಔಷಧೀಯ ಗುಣವನ್ನು ಹೊಂದಿರುತ್ತವೆ. ಇಲ್ಲಿ ನಾವು ಕೆಲವು ಆಹಾರಗಳ ಬಗ್ಗೆ ಹೇಳಲಾಗಿದೆ. ಸಣ್ಣ ಪುಟ್ಟ ಕಾಯಿಲೆಗಳನ್ನು ನಿವಾರಿಸುವಲ್ಲಿ ಅವು ನಿಮ್ಮ ಸಹಕಾರಿಯಾಗುತ್ತವೆ.

ಶುಂಠಿ
ಅಜೀರ್ಣ ಸಮಸ್ಯೆಯಿದ್ದರೆ, ಕೆಮ್ಮು ಕಾಣಿಸಿಕೊಂಡರೆ ಒಂದು ಚಮಚ ಶುಂಠಿ ರಸ ಕುಡಿದರೆ ಸಾಕು ಗುಣಮುಖವಾಗುವುದು. ತುಂಬಾ ಕೆಮ್ಮುತ್ತಿದ್ದರೆ ಒಂದು ತುಂಡು ಶುಂಠಿಯನ್ನು ಕತ್ತರಿಸಿ ಬಾಯಿಯಲ್ಲಿ ಇಟ್ಟುಕೊಂಡರೆ ಕೆಮ್ಮು ಸ್ವಲ್ಪ ಕಮ್ಮಿಯಾಗುತ್ತದೆ.

ಜೇನು
ಗಾಯವಾದರೆ ಆ ಭಾಗಕ್ಕೆ ಜೇನು ಹಚ್ಚಿದರೆ ಸಾಕು ತಕ್ಷಣ ಗುಣಮುಖವಾಗುವುದು. ಜೇನಿನಲ್ಲಿ antiseptic ಗುಣವಿದೆ.

ಮೆಣಸು
ಮೆಣಸಿನಲ್ಲಿರುವ capciasin ಅಂಶ ಸಂಧಿನೋವು ಗುಣಪಡಿಸುತ್ತದೆ. ದೇಹದ ತೂಕ ಕಡಿಮೆ ಮಾಡುತ್ತೆ. ಹಾಗಂತ ತುಂಬಾ ಖಾರ ತಿಂದರೆ ಹೊಟ್ಟೆ ಉರಿ ಕಾಣಿಸಿಕೊಳ್ಳಬಹುದು.

ಹಾಗಾಲಕಾಯಿ
ಹಾಗಾಲಕಾಯಿ ದೇಹದಲ್ಲಿರುವ ಇನ್ಸುಲಿನ್ ಪ್ರಮಾಣವನ್ನು ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುತ್ತದೆ. ಮಧುಮೇಹಿಗಳು ಇದನ್ನು ತಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿಕೊಂಡರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಆಲೀವ್ ಎಣ್ಣೆ
ಆಲೀವ್ ಎಣ್ಣೆಯನ್ನು ತಲೆ ಬುಡಕ್ಕೆ ಹಚ್ಚಿ ಮಸಾಜ್ ಮಾಡಿದರೆ ತಲೆ ತುರಿಕೆ ಸಮಸ್ಯೆಯನ್ನು ಹೋಗಲಾಡಿಸಬಹುದು.

ಬಾಳೆ ಹಣ್ಣು
ಚರ್ಮದ ಮೇಲೆ ಚಿಕ್ಕ-ಚಿಕ್ಕ ಗಂಟು (ನರೂಲಿ) ಕಂಡು ಬಂದರೆ ತ್ವಚೆ ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದು. ಬಾಳೆ ಹಣ್ಣನ್ನು ದಿನಾ ಆ ಭಾಗಕ್ಕೆ ಹಚ್ಚುತ್ತಾ ಬಂದರೆ ಸಂಪೂರ್ಣವಾಗಿ ಗುಣ ಪಡಿಸಬಹುದು.

ಟೀ
ಕೆಲವರ ಪಾದ ವಿಪರೀತ ಬೆವರಿ ದುರ್ಗಂಧ ಬೀರುತ್ತದೆ. ಇದು ಹಾರ್ಮೋನಲ್ ವ್ಯತ್ಯಾಸದಿಂದ ಕೂಡ ಉಂಟಾಗುತ್ತದೆ. ಅಂತಹವರು ಬ್ಲ್ಯಾಕ್ ಟೀ ಮಾಡಿ ಅದರಲ್ಲಿ ಸ್ವಲ್ಪ ಹೊತ್ತು ಇಟ್ಟರೆ ಆ ರೀತಿ ಪಾದ ದುರ್ನಾತ ಬೀರುವುದನ್ನು ತಡೆಗಟ್ಟಬಹುದು.

ನಿಂಬೆ ಹಣ್ಣು
ವಾಂತಿ ಬರುವಂತೆ ಅನಿಸಿದರೆ ನಿಂಬೆ ಹಣ್ಣಿನ ವಾಸನೆ ಗ್ರಹಿಸಿದರೆ ಸಾಕು ವಾಂತಿ ಬರುವುದಿಲ್ಲ. ಸುಸ್ತಾದಾಗ ಒಂದು ಲೋಟ ನಿಂಬೆ ಪಾನಕ ಕುಡಿದರೆ ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ.

ಹಾಲು
ಸನ್ ಟ್ಯಾನ್ ಉಂಟಾದರೆ ಹಾಲನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಹೊತ್ತು ಮುಖ ತೊಳೆದರೆ ಸಾಕು ಬೇಗನೆ ಸನ್ ಟ್ಯಾನ್ ಕಡಿಮೆಯಾಗುವುದು.

ಕಲ್ಲಂಗಡಿ
ನಿರ್ಜಲೀಕರಣ ಉಂಟಾದರೆ ಕಲ್ಲಂಗಡಿ ಹಣ್ಣನ್ನು ತಿಂದರೆ ಸಾಕು ದೇಹದಲ್ಲಿ ನೀರಿನಂಶವನ್ನು ಕಾಪಾಡಿಕೊಳ್ಳಬಹುದು.

ಬೆಂಡೆ ಕಾಯಿ
ಮಧುಮೇಹಿಗಳಿಗೆ ಬೆಂಡೆ ಕಾಯಿ ಬೆಸ್ಟ್ ಔಷಧಿ. ಬೆಂಡೆಕಾಯಿಯನ್ನು ಕತ್ತರಿಸಿ ಅದರಿಂದ ಬರುವ ಬಿಳಿ ಹಾಲನ್ನು ಒಂದು ಲೋಟ ನೀರಿಗೆ ಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಇನ್ಸುಲಿನ್ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು.



Click it and Unblock the Notifications
