Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಮಧುಮೇಹಿಗಳು ಈ ಸಿಹಿ ಹಣ್ಣುಗಳನ್ನು ತಿನ್ನಬಹುದು
ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ತಿನ್ನಬೇಕು. ಸಿಹಿ ಅಂತೂ ಮುಟ್ಟಲೇಬಾರದು.
ಹಾಗಂತ ಸಿಹಿ ಹಣ್ಣುಗಳಲ್ಲಿ ಕೆಲವೊಂದು ಹಣ್ಣುಗಳನ್ನು ತಿನ್ನಬಹುದು. ಇದು ದೇಹದಲ್ಲಿ ಸಕ್ಕರೆಯಂಶವನ್ನು ಹೆಚ್ಚಿಸುವುದಿಲ್ಲ, ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಈ ಕೆಳಗೆ ಕೆಲವೊಂದು ಹಣ್ಣುಗಳ ಪಟ್ಟಿ ನೀಡಲಾಗಿದೆ. ಈ ಹಣ್ಣುಗಳಲ್ಲಿ ಸಕ್ಕರೆಯಂಶ ಕಡಿಮೆ ಇದ್ದು ಪ್ರೊಟೀನ್, ವಿಟಮಿನ್ಸ್ ಅಧಿಕವಿರುತ್ತದೆ. ಮಧುಮೇಹಿಗಳಿಗೆ ಸಿಹಿ ತಿನ್ನಬೇಕೆಂದು ಅನಿಸಿದಾಗ ಈ ಹಣ್ಣುಗಳನ್ನು ತಿಂದರೆ ಆರೋಗ್ಯಕ್ಕೆ ಎಲ್ಲಿ ಅಪಾಯ ಉಂಟಾಗುತ್ತದೆ ಎಂಬ ಭಯ ಪಡಬೇಕಾದ ಅವಶ್ಯಕತೆ ಕೂಡ ಇಲ್ಲ.

ಪೇರಳೆ (ಪಿಯರ್ಸ್)
ಇದರಲ್ಲಿ ಪೆಕ್ಟಿನ್ ಅಂಶ ಅಧಿಕವಿದ್ದು, ಇದನ್ನು ಮಿತಿಯಲ್ಲಿ ತಿಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುತ್ತದೆ.

ಆಪ್ರಿಕಾಟ್
ತಾಜಾ ಆಪ್ರಿಕಾಟ್ ಗಳನ್ನು ತಿನ್ನುವ ಬದಲು ಒಣ ಆಪ್ರಿಕಾಟ್ ತಿನ್ನುವುದು ಒಳ್ಳೆಯದು. ಇದರಲ್ಲಿ ಪೊಟಾಷ್ಯಿಯಂ ಅಧಿಕವಿದ್ದು ಮಧುಮೇಹಿಗಳ ಆರೋಗ್ಯಕ್ಕೆ ಈ ಪೋಷಕಾಂಶ ಅವಶ್ಯಕ.

ಬೆರ್ರಿ
ಎಲ್ಲಾ ಬಗೆಯ ಬೆರ್ರಿ ಹಣ್ಣುಗಳನ್ನು ತಿನ್ನಬಹುದು. ಈ ಬೆರ್ರಿ ಹಣ್ಣುಗಳು ಮಧುಮೇಹಿಗಳ ದೇಹದಲ್ಲಿರುವ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಮಾಡುತ್ತದೆ.

ಚೆರ್ರಿ
ತುಂಬಾ ಸಿಹಿ ತಿನ್ನಬೇಕೆಂದು ಅನಿಸಿದಾಗ ಕೃತಕ ಸಿಹಿ ತಿಂದು ಆರೋಗ್ಯ ಕೆಡಿಸಿಕೊಳ್ಳಬೇಡಿ. ಚೆರ್ರಿ ಹಣ್ಣನ್ನು ಸಿಪ್ಪೆ ಸಹಿತ ತಿನ್ನಿ. ಇದರಲ್ಲಿರುವ ನಾರಿನಂಶ ರಕ್ತದಲ್ಲಿರುವ ಸಕ್ಕರೆಯಂಶವನ್ನು ಕಡಿಮೆ ಮಾಡುತ್ತದೆ.

ದ್ರಾಕ್ಷಿ
ದ್ರಾಕ್ಷಿಯನ್ನು ಮಿತಿಯಲ್ಲಿ ತಿನ್ನಬಹುದು. ಹೆಚ್ಚು ತಿಂದರೆ ಇದರಲ್ಲಿ ಕಾರ್ಬೋಹೈಟ್ರೇಟ್ ಇದ್ದು ದೇಹದಲ್ಲಿ ಸಕ್ಕರೆಯಂಶವನ್ನು ಹೆಚ್ಚಿಸಬಬಹುದು. ಆದ್ದರಿಂದ ತಿನ್ನಬೇಕೆಂದು ಅನಿಸಿದಾಗ ದಿನದಲ್ಲಿ 3-4 ದ್ರಾಕ್ಷಿ ತಿನ್ನಬಹುದು.

ಪ್ಲಮ್ಸ್
ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಹಾಗೂ ಕ್ಯಾಲೋರಿ ಕಡಿಮೆಯಿದ್ದು ನಾರಿನಂಶ ಅಧಿಕವಿರುತ್ತದೆ. ಆದ್ದರಿಂದ ಮಧುಮೇಹಿಗಳಿಗೆ ತಿನ್ನಲು ಸೂಕ್ತವಾದ ಹಣ್ಣು ಇದಾಗಿದೆ.

ಕಿತ್ತಳೆ
ಇದರಲ್ಲಿ ವಿಟಮಿನ್ ಸಿ ಇದ್ದು, ಇದರಲ್ಲಿರುವ ನಾರಿನಂಶ ದೇಹವು ಸಕ್ಕರೆಯಂಶವನ್ನು ಹೀರಿಕೊಳ್ಳುವುದನ್ನು ನಿಧಾನ ಮಾಡುವುದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ.

ಗ್ರೇಪ್ ಫ್ರೂಟ್
ಇದನ್ನು ತಿಂದರೆ ನೈಸರ್ಗಿಕವಾಗಿ ಸಕ್ಕರೆಯಂಶ ಹೆಚ್ಚಾಗದಂತೆ ನೋಡಿಕೊಳ್ಳಬಹುದು, ಅಲ್ಲದೆ ಇದು ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚಿಸುತ್ತದೆ.

ಬೆಣ್ಣೆ ಹಣ್ಣು
ಈ ಹಣ್ಣಿನಲ್ಲಿ ಪೊಟಾಷ್ಯಿಯಂ ಅಧಿಕವಿದೆ. ಇದನ್ನು ತಿಂದರೆ triglyceride ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಕರ್ಬೂಜದ ಹಣ್ಣು
ಈ ಹಣ್ಣು ಕೂಡ ಸಿಹಿಯಾಗಿದ್ದು, ಮಧುಮೇಹಿಗಳನ್ನು ಈ ಹಣ್ಣನ್ನು ತಿಂದರೆ ಯಾವುದೇ ಅಪಾಯ ಉಂಟಾಗುವುದಿಲ್ಲ. ತುಂಬಾ ಹಣ್ಣಾದ ಕರ್ಬೂಜವನ್ನು ತಿನ್ನದಿರುವುದು ಒಳ್ಳೆಯದು.

ಸೇಬು
ಸೇಬು ತಿಂದರೆ ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಮಾಡುತ್ತದೆ. ಮಧುಮೇಹಿಗಳು ಪ್ರತಿದಿನ ಒಂದು ಸೇಬು ತಿನ್ನುವುದು ಒಳ್ಳೆಯದು.



Click it and Unblock the Notifications