Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮಧುಮೇಹಿಗಳು ಈ ಸಿಹಿ ಹಣ್ಣುಗಳನ್ನು ತಿನ್ನಬಹುದು
ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ತಿನ್ನಬೇಕು. ಸಿಹಿ ಅಂತೂ ಮುಟ್ಟಲೇಬಾರದು.
ಹಾಗಂತ ಸಿಹಿ ಹಣ್ಣುಗಳಲ್ಲಿ ಕೆಲವೊಂದು ಹಣ್ಣುಗಳನ್ನು ತಿನ್ನಬಹುದು. ಇದು ದೇಹದಲ್ಲಿ ಸಕ್ಕರೆಯಂಶವನ್ನು ಹೆಚ್ಚಿಸುವುದಿಲ್ಲ, ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಈ ಕೆಳಗೆ ಕೆಲವೊಂದು ಹಣ್ಣುಗಳ ಪಟ್ಟಿ ನೀಡಲಾಗಿದೆ. ಈ ಹಣ್ಣುಗಳಲ್ಲಿ ಸಕ್ಕರೆಯಂಶ ಕಡಿಮೆ ಇದ್ದು ಪ್ರೊಟೀನ್, ವಿಟಮಿನ್ಸ್ ಅಧಿಕವಿರುತ್ತದೆ. ಮಧುಮೇಹಿಗಳಿಗೆ ಸಿಹಿ ತಿನ್ನಬೇಕೆಂದು ಅನಿಸಿದಾಗ ಈ ಹಣ್ಣುಗಳನ್ನು ತಿಂದರೆ ಆರೋಗ್ಯಕ್ಕೆ ಎಲ್ಲಿ ಅಪಾಯ ಉಂಟಾಗುತ್ತದೆ ಎಂಬ ಭಯ ಪಡಬೇಕಾದ ಅವಶ್ಯಕತೆ ಕೂಡ ಇಲ್ಲ.

ಪೇರಳೆ (ಪಿಯರ್ಸ್)
ಇದರಲ್ಲಿ ಪೆಕ್ಟಿನ್ ಅಂಶ ಅಧಿಕವಿದ್ದು, ಇದನ್ನು ಮಿತಿಯಲ್ಲಿ ತಿಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುತ್ತದೆ.

ಆಪ್ರಿಕಾಟ್
ತಾಜಾ ಆಪ್ರಿಕಾಟ್ ಗಳನ್ನು ತಿನ್ನುವ ಬದಲು ಒಣ ಆಪ್ರಿಕಾಟ್ ತಿನ್ನುವುದು ಒಳ್ಳೆಯದು. ಇದರಲ್ಲಿ ಪೊಟಾಷ್ಯಿಯಂ ಅಧಿಕವಿದ್ದು ಮಧುಮೇಹಿಗಳ ಆರೋಗ್ಯಕ್ಕೆ ಈ ಪೋಷಕಾಂಶ ಅವಶ್ಯಕ.

ಬೆರ್ರಿ
ಎಲ್ಲಾ ಬಗೆಯ ಬೆರ್ರಿ ಹಣ್ಣುಗಳನ್ನು ತಿನ್ನಬಹುದು. ಈ ಬೆರ್ರಿ ಹಣ್ಣುಗಳು ಮಧುಮೇಹಿಗಳ ದೇಹದಲ್ಲಿರುವ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಮಾಡುತ್ತದೆ.

ಚೆರ್ರಿ
ತುಂಬಾ ಸಿಹಿ ತಿನ್ನಬೇಕೆಂದು ಅನಿಸಿದಾಗ ಕೃತಕ ಸಿಹಿ ತಿಂದು ಆರೋಗ್ಯ ಕೆಡಿಸಿಕೊಳ್ಳಬೇಡಿ. ಚೆರ್ರಿ ಹಣ್ಣನ್ನು ಸಿಪ್ಪೆ ಸಹಿತ ತಿನ್ನಿ. ಇದರಲ್ಲಿರುವ ನಾರಿನಂಶ ರಕ್ತದಲ್ಲಿರುವ ಸಕ್ಕರೆಯಂಶವನ್ನು ಕಡಿಮೆ ಮಾಡುತ್ತದೆ.

ದ್ರಾಕ್ಷಿ
ದ್ರಾಕ್ಷಿಯನ್ನು ಮಿತಿಯಲ್ಲಿ ತಿನ್ನಬಹುದು. ಹೆಚ್ಚು ತಿಂದರೆ ಇದರಲ್ಲಿ ಕಾರ್ಬೋಹೈಟ್ರೇಟ್ ಇದ್ದು ದೇಹದಲ್ಲಿ ಸಕ್ಕರೆಯಂಶವನ್ನು ಹೆಚ್ಚಿಸಬಬಹುದು. ಆದ್ದರಿಂದ ತಿನ್ನಬೇಕೆಂದು ಅನಿಸಿದಾಗ ದಿನದಲ್ಲಿ 3-4 ದ್ರಾಕ್ಷಿ ತಿನ್ನಬಹುದು.

ಪ್ಲಮ್ಸ್
ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಹಾಗೂ ಕ್ಯಾಲೋರಿ ಕಡಿಮೆಯಿದ್ದು ನಾರಿನಂಶ ಅಧಿಕವಿರುತ್ತದೆ. ಆದ್ದರಿಂದ ಮಧುಮೇಹಿಗಳಿಗೆ ತಿನ್ನಲು ಸೂಕ್ತವಾದ ಹಣ್ಣು ಇದಾಗಿದೆ.

ಕಿತ್ತಳೆ
ಇದರಲ್ಲಿ ವಿಟಮಿನ್ ಸಿ ಇದ್ದು, ಇದರಲ್ಲಿರುವ ನಾರಿನಂಶ ದೇಹವು ಸಕ್ಕರೆಯಂಶವನ್ನು ಹೀರಿಕೊಳ್ಳುವುದನ್ನು ನಿಧಾನ ಮಾಡುವುದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ.

ಗ್ರೇಪ್ ಫ್ರೂಟ್
ಇದನ್ನು ತಿಂದರೆ ನೈಸರ್ಗಿಕವಾಗಿ ಸಕ್ಕರೆಯಂಶ ಹೆಚ್ಚಾಗದಂತೆ ನೋಡಿಕೊಳ್ಳಬಹುದು, ಅಲ್ಲದೆ ಇದು ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚಿಸುತ್ತದೆ.

ಬೆಣ್ಣೆ ಹಣ್ಣು
ಈ ಹಣ್ಣಿನಲ್ಲಿ ಪೊಟಾಷ್ಯಿಯಂ ಅಧಿಕವಿದೆ. ಇದನ್ನು ತಿಂದರೆ triglyceride ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಕರ್ಬೂಜದ ಹಣ್ಣು
ಈ ಹಣ್ಣು ಕೂಡ ಸಿಹಿಯಾಗಿದ್ದು, ಮಧುಮೇಹಿಗಳನ್ನು ಈ ಹಣ್ಣನ್ನು ತಿಂದರೆ ಯಾವುದೇ ಅಪಾಯ ಉಂಟಾಗುವುದಿಲ್ಲ. ತುಂಬಾ ಹಣ್ಣಾದ ಕರ್ಬೂಜವನ್ನು ತಿನ್ನದಿರುವುದು ಒಳ್ಳೆಯದು.

ಸೇಬು
ಸೇಬು ತಿಂದರೆ ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಮಾಡುತ್ತದೆ. ಮಧುಮೇಹಿಗಳು ಪ್ರತಿದಿನ ಒಂದು ಸೇಬು ತಿನ್ನುವುದು ಒಳ್ಳೆಯದು.



Click it and Unblock the Notifications











