Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ವ್ರತ ಪಾಲಿಸುವಾಗ ಆರ್ಯುವೇದ ಗುಣದ ಈ ಆಹಾರ ತಿನ್ನಿ
ನವರಾತ್ರಿ ಸಮಯದಲ್ಲಿ ಉಪವಾಸ ಮಾಡಿದರೆ ಒಳ್ಳೆಯದು ಎಂಬ ನಂಬಿಕೆ ನಮ್ಮಲ್ಲಿದೆ. ನವರಾತ್ರಿ ಸಮಯದಲ್ಲಿ ಉಪವಾಸ ಮಾಡುವವರಲ್ಲಿ ಕೆಲವರು ಬರೀ ಒಂದು ಹೊತ್ತು ಮಾತ್ರ ಆಹಾರವನ್ನು ತೆಗೆದುಕೊಳ್ಳುತ್ತಾರೆ, ಉಪವಾಸ ಮಾಡುವವರು ಕೆಲವೊಂದು ಆರ್ಯುವೇದ ಪ್ಲಾನ್ ಬಳಸಿದರೆ ಮತ್ತಷ್ಟು ಆರೋಗ್ಯವನ್ನು ಪಡೆಯಬಹುದು.
ಉಪವಾಸ ಮಾಡುವಾಗ ಆರ್ಯುವೇದ ಗುಣವಿರುವ ಯಾವ ವಸ್ತುಗಳನ್ನು ತಿನ್ನಬೇಕು, ಅದರಿಂದ ದೊರೆಯುವ ಪ್ರಯೋಜನಗಳೇನು ಎಂದು ತಿಳಿಯಲು ಮುಂದೆ ಓದಿ:

ನಿಂಬೆ ಹಣ್ಣು
ಉಪವಾಸ ಮಾಡುವವರು ಆಹಾರವನ್ನು ತೆಗೆದುಕೊಳ್ಳುವಾಗ ಲೋಟ ನಿಂಬೆ ಶರಬತ್ತು ಕುಡಿಯಿರಿ. ಇದು ದೇಹದಲ್ಲಿ ಉತ್ಸಾಹವನ್ನು ತುಂಬಿ ಸುಸ್ತನ್ನು ಹೋಗಲಾಡಿಸುತ್ತದೆ.

ತುಪ್ಪ
ವ್ರತದ ಅಡುಗೆಗಳನ್ನು ತಯಾರಿಸುವಾಗ ತುಪ್ಪವನ್ನು ಹಾಕಿ ತಯಾರಿಸಲು ಮರೆಯಬೇಡಿ. ಇದು ನರಗಳಿಗೆ ಶಕ್ತಿಯನ್ನು ತುಂಬುತ್ತದೆ ಹಾಗೂ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಅಂಜೂರ
ಉಪವಾಸ ಮಾಡುವವರು ತಿನ್ನಬೇಕಾದ ಮತ್ತೊಂದು ಬೆಸ್ಟ್ ಹಣ್ಣೆಂದರೆ ಅಂಜೂರ. ಇದರಲ್ಲಿ ಅಧಿಕ ಪೋಷಕಾಂಶವಿದ್ದು, 2 ಹೊತ್ತು ಊಟ ಮಾಡದೆ ಬರೀ ಒಂದು ಹೊತ್ತು ಊಟ ಮಾಡಿದರೂ ದೇಹಕ್ಕೆ ಅಗತ್ಯವಾದ ಪೋಷಕಾಂಶವನ್ನು ಅಂಜೂರದಿಂದ ಪಡೆಯಬಹುದು.

ಬಾದಾಮಿ
ಆಹಾರವನ್ನು ತೆಗೆದುಕೊಳ್ಳುವಾಗ 2-3 ಬಾದಾಮಿಯನ್ನು ಬಾಯಿಗೆ ಹಾಕಿಕೊಳ್ಳಿ. ಇದರಲ್ಲಿರುವ ಪೋಷಕಾಂಶ ನಿಮ್ಮ ಸುಸ್ತನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಖರ್ಜೂರ
ಬರೀ ಒಂದು ಆಹಾರ ತೆಗೆದುಕೊಳ್ಳುವಾಗ ಅದರ ಜೊತೆ ಖರ್ಜೂರವನ್ನು ತಿನ್ನಲು ಮರೆಯದಿರಿ. ಇದು ದೇಹಕ್ಕೆ ಶಕ್ತಿಯನ್ನು ನೀಡುವುದು ಮಾತ್ರವಲ್ಲ, ಹೊಟ್ಟೆ ಹಸಿವನ್ನು ನಿಯಂತ್ರಿಸಿ, ನೀವು ಮಾಡುವ ಕೆಲಸದಲ್ಲಿ ಕಾರ್ಯಮಗ್ನರಾಗುವಂತೆ ಮಾಡುತ್ತದೆ.

ಜೀರಿಗೆ
ಹೊಟ್ಟೆ ಉರಿ, ಗ್ಯಾಸ್ ಮುಂತಾದ ಸಮಸ್ಯೆ ಕಾಣಿಸದಿರಲು ಒಂದು ಲೋಟ ಜೀರಿಗೆ ನೀರು ಸಹಾಯ ಮಾಡುವುದು.

ಲಸ್ಸಿ
ಲಸ್ಸಿ ಶಕ್ತಿವರ್ಧಕ ಪಾನೀಯವಾಗಿದೆ. ಅಲ್ಲದೆ ಇದರಲ್ಲಿ ಸ್ವಲ್ಪ ಚಕ್ಕೆ ಹಾಕಿ ಕುಡಿದರೆ ಕಾಯಿಲೆಗಳು ಬರದಂತೆ ತಡೆಯಬಹುದು.

ಸೀಸನ್ ಫುಡ್ಸ್
ಹಣ್ಣುಗಳನ್ನು ತಿನ್ನುವಾಗ ಸೀಸನ್ ಫುಡ್ ತಿನ್ನಿ, ಆಹಾರ ತಿಂದ ಬಳಿಕ ಒಂದು ಸೇಬು ತಿನ್ನುವುದು ಒಳ್ಳೆಯದು.

ಶುಂಠಿ
ಈರುಳ್ಳಿ, ಬೆಳ್ಳುಳ್ಳಿ ವ್ರತ ಅಡುಗೆಗಳಲ್ಲಿ ಬಳಸುವುದಿಲ್ಲ, ಆದರೆ ಶುಂಠಿಯನ್ನು ಬಳಸಬಹುದು, ಶುಂಠಿ ಬಳಸಿ, ಅದರ ಗುಣ ಪಡೆಯಿರಿ.

ಮೊಳಕೆ ಬರಿಸಿದ ಹೆಸರು ಕಾಳು
ಮೊಳಕೆ ಬರಿಸಿದ ಹೆಸರುಕಾಳು ಹೊಟ್ಟೆಯನ್ನು ತುಂಬಿರುವಂತೆ ಮಾಡುವುದಲ್ಲದೆ, ಬೇಗನೆ ಸುಸ್ತಾಗುವುದಿಲ್ಲ, ದಿನಾಪೂರ್ತಿ ಲವಲವಿಕೆಯಿಂದ ಇರುವಂತೆ ಮಾಡುವುದು.



Click it and Unblock the Notifications