Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ವ್ರತ ಪಾಲಿಸುವಾಗ ಆರ್ಯುವೇದ ಗುಣದ ಈ ಆಹಾರ ತಿನ್ನಿ
ನವರಾತ್ರಿ ಸಮಯದಲ್ಲಿ ಉಪವಾಸ ಮಾಡಿದರೆ ಒಳ್ಳೆಯದು ಎಂಬ ನಂಬಿಕೆ ನಮ್ಮಲ್ಲಿದೆ. ನವರಾತ್ರಿ ಸಮಯದಲ್ಲಿ ಉಪವಾಸ ಮಾಡುವವರಲ್ಲಿ ಕೆಲವರು ಬರೀ ಒಂದು ಹೊತ್ತು ಮಾತ್ರ ಆಹಾರವನ್ನು ತೆಗೆದುಕೊಳ್ಳುತ್ತಾರೆ, ಉಪವಾಸ ಮಾಡುವವರು ಕೆಲವೊಂದು ಆರ್ಯುವೇದ ಪ್ಲಾನ್ ಬಳಸಿದರೆ ಮತ್ತಷ್ಟು ಆರೋಗ್ಯವನ್ನು ಪಡೆಯಬಹುದು.
ಉಪವಾಸ ಮಾಡುವಾಗ ಆರ್ಯುವೇದ ಗುಣವಿರುವ ಯಾವ ವಸ್ತುಗಳನ್ನು ತಿನ್ನಬೇಕು, ಅದರಿಂದ ದೊರೆಯುವ ಪ್ರಯೋಜನಗಳೇನು ಎಂದು ತಿಳಿಯಲು ಮುಂದೆ ಓದಿ:

ನಿಂಬೆ ಹಣ್ಣು
ಉಪವಾಸ ಮಾಡುವವರು ಆಹಾರವನ್ನು ತೆಗೆದುಕೊಳ್ಳುವಾಗ ಲೋಟ ನಿಂಬೆ ಶರಬತ್ತು ಕುಡಿಯಿರಿ. ಇದು ದೇಹದಲ್ಲಿ ಉತ್ಸಾಹವನ್ನು ತುಂಬಿ ಸುಸ್ತನ್ನು ಹೋಗಲಾಡಿಸುತ್ತದೆ.

ತುಪ್ಪ
ವ್ರತದ ಅಡುಗೆಗಳನ್ನು ತಯಾರಿಸುವಾಗ ತುಪ್ಪವನ್ನು ಹಾಕಿ ತಯಾರಿಸಲು ಮರೆಯಬೇಡಿ. ಇದು ನರಗಳಿಗೆ ಶಕ್ತಿಯನ್ನು ತುಂಬುತ್ತದೆ ಹಾಗೂ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಅಂಜೂರ
ಉಪವಾಸ ಮಾಡುವವರು ತಿನ್ನಬೇಕಾದ ಮತ್ತೊಂದು ಬೆಸ್ಟ್ ಹಣ್ಣೆಂದರೆ ಅಂಜೂರ. ಇದರಲ್ಲಿ ಅಧಿಕ ಪೋಷಕಾಂಶವಿದ್ದು, 2 ಹೊತ್ತು ಊಟ ಮಾಡದೆ ಬರೀ ಒಂದು ಹೊತ್ತು ಊಟ ಮಾಡಿದರೂ ದೇಹಕ್ಕೆ ಅಗತ್ಯವಾದ ಪೋಷಕಾಂಶವನ್ನು ಅಂಜೂರದಿಂದ ಪಡೆಯಬಹುದು.

ಬಾದಾಮಿ
ಆಹಾರವನ್ನು ತೆಗೆದುಕೊಳ್ಳುವಾಗ 2-3 ಬಾದಾಮಿಯನ್ನು ಬಾಯಿಗೆ ಹಾಕಿಕೊಳ್ಳಿ. ಇದರಲ್ಲಿರುವ ಪೋಷಕಾಂಶ ನಿಮ್ಮ ಸುಸ್ತನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಖರ್ಜೂರ
ಬರೀ ಒಂದು ಆಹಾರ ತೆಗೆದುಕೊಳ್ಳುವಾಗ ಅದರ ಜೊತೆ ಖರ್ಜೂರವನ್ನು ತಿನ್ನಲು ಮರೆಯದಿರಿ. ಇದು ದೇಹಕ್ಕೆ ಶಕ್ತಿಯನ್ನು ನೀಡುವುದು ಮಾತ್ರವಲ್ಲ, ಹೊಟ್ಟೆ ಹಸಿವನ್ನು ನಿಯಂತ್ರಿಸಿ, ನೀವು ಮಾಡುವ ಕೆಲಸದಲ್ಲಿ ಕಾರ್ಯಮಗ್ನರಾಗುವಂತೆ ಮಾಡುತ್ತದೆ.

ಜೀರಿಗೆ
ಹೊಟ್ಟೆ ಉರಿ, ಗ್ಯಾಸ್ ಮುಂತಾದ ಸಮಸ್ಯೆ ಕಾಣಿಸದಿರಲು ಒಂದು ಲೋಟ ಜೀರಿಗೆ ನೀರು ಸಹಾಯ ಮಾಡುವುದು.

ಲಸ್ಸಿ
ಲಸ್ಸಿ ಶಕ್ತಿವರ್ಧಕ ಪಾನೀಯವಾಗಿದೆ. ಅಲ್ಲದೆ ಇದರಲ್ಲಿ ಸ್ವಲ್ಪ ಚಕ್ಕೆ ಹಾಕಿ ಕುಡಿದರೆ ಕಾಯಿಲೆಗಳು ಬರದಂತೆ ತಡೆಯಬಹುದು.

ಸೀಸನ್ ಫುಡ್ಸ್
ಹಣ್ಣುಗಳನ್ನು ತಿನ್ನುವಾಗ ಸೀಸನ್ ಫುಡ್ ತಿನ್ನಿ, ಆಹಾರ ತಿಂದ ಬಳಿಕ ಒಂದು ಸೇಬು ತಿನ್ನುವುದು ಒಳ್ಳೆಯದು.

ಶುಂಠಿ
ಈರುಳ್ಳಿ, ಬೆಳ್ಳುಳ್ಳಿ ವ್ರತ ಅಡುಗೆಗಳಲ್ಲಿ ಬಳಸುವುದಿಲ್ಲ, ಆದರೆ ಶುಂಠಿಯನ್ನು ಬಳಸಬಹುದು, ಶುಂಠಿ ಬಳಸಿ, ಅದರ ಗುಣ ಪಡೆಯಿರಿ.

ಮೊಳಕೆ ಬರಿಸಿದ ಹೆಸರು ಕಾಳು
ಮೊಳಕೆ ಬರಿಸಿದ ಹೆಸರುಕಾಳು ಹೊಟ್ಟೆಯನ್ನು ತುಂಬಿರುವಂತೆ ಮಾಡುವುದಲ್ಲದೆ, ಬೇಗನೆ ಸುಸ್ತಾಗುವುದಿಲ್ಲ, ದಿನಾಪೂರ್ತಿ ಲವಲವಿಕೆಯಿಂದ ಇರುವಂತೆ ಮಾಡುವುದು.



Click it and Unblock the Notifications











