Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಶೀತ ಆದಾಗ ಏನು ಮಾಡಬೇಕು, ಏನು ಮಾಡಬಾರದು?
ಸಾಮಾನ್ಯ ಶೀತವನ್ನು ಶಾಶ್ವತವಾಗಿ ಹೋಗಲಾಡಿಸಲು ಸಾಧ್ಯವಿಲ್ಲ. ಔಷಧಿ ತೆಗೆದುಕೊಂಡಾಗ ಕಡಿಮೆಯಾಗುತ್ತದೆ, ಮತ್ತೆ ಕೆಲವು ದಿನಗಳ ಬಳಿಕ ಕಾಣಿಸಿಕೊಳ್ಳುತ್ತದೆ. ಶೀತ ಕಾಣಿಸಿಕೊಂಡಾಗ ಮದ್ದು ಮಾಡಿದರೆ ಬೇಗನೆ ಕಮ್ಮಿಯಾಗುತ್ತದೆ. ಆದರೆ ಅಡ್ಡ ಪರಿಣಾಮವಿಲ್ಲದ ಮದ್ದು ಮಾಡಬೇಕು, ಆದರೆ ಅದರ ಬಗ್ಗೆ ನಾವೇ ಯೋಚಿಸುವುದೇ ಇಲ್ಲ, ಶೀತ ಕಮ್ಮಿಯಾದರೆ ಸಾಕೆಂದು ಯೋಚಿಸುತ್ತೇವೆ. ಶೀತ ಬಂದಾಗ ಏನು ಮಾಡಬೇಕು, ಏನು ಮಾಡಬಾರದು ಎಂದು ತಿಳಿಯಲು ಮುಂದೆ ಓದಿ:
ಬಿಟ್ಟು, ಬಿಡದೆ ಕಾಡುವ ಶೀತಕ್ಕೆ ಮನೆ ಮದ್ದು ಮಾಡುವುದೇ ಒಳ್ಳೆಯದು. ಶೀತವನ್ನು ತಕ್ಷಣ ಶಮನ ಮಾಡುವ ಪರಿಣಾಮಕಾರಿಯಾದ ಮನೆ ಮದ್ದು ಏನು ಎಂದು ಮೊದಲಿಗೆ ನೋಡೋಣ ಬನ್ನಿ:

ನೀರು ಮತ್ತು ಇತರ ಪಾನೀಯಗಳು
ನೀರು, ಜ್ಯೂಸ್ ಕುಡಿಯಿರಿ. ಇವು ದೇಹದಲ್ಲಿ ನೀರಿನಂಶ ಕಡಿಮೆಯಾಗುವುದನ್ನು ತಡೆಯುತ್ತದೆ. ಕಾಫಿ, ಮದ್ಯ, ಸೋಡಾ ಇವುಗಳನ್ನು ಶೀತವಾದಾಗ ಕುಡಿಯಬೇಡಿ, ಇವುಗಳು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ.

ಉಪ್ಪು ನೀರು
ಅರ್ಧ ಗ್ಲಾಸ್ ಬಿಸಿ ನೀರಿಗೆ ಅರ್ಧ ಚಮಚ ಉಪ್ಪು ಹಾಕಿ ಮಿಕ್ಸ್ ಮಾಡಿ ಅದರಿಂದ ಬಾಯಿ ಮುಕ್ಕಳಿಸಿದರೆ ಗಂಟಲಿನ ಕೆರೆತ ಕಡಿಮೆಯಾಗುವುದು.

ಮೂಗಿಗೆ saline ಡ್ರಾಪ್ ಹಾಕುವುದು
ಇದು ಮೂಗು ಕಟ್ಟಿದ್ದನ್ನು ಕಮ್ಮಿ ಮಾಡುತ್ತದೆ, ಇದರಿಂದ ಶೀತದಿಂದಾದ ತೊಂದರೆ ಕಡಿಮೆಯಾಗಿ ಉಸಿರಾಟ ಸರಾಗವಾಗಿ ಆಗುವುದು.

ಚಿಕನ್ ಸೂಪ್
ಶೀತವನ್ನು ಹೋಗಲಾಡಿಸುವ ಮತ್ತೊಂದು ಅತ್ಯುತ್ತಮವಾದ ಮನೆ ಮದ್ದೆಂದರೆ ಚಿಕನ್ ಸೂಪ್ . ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಕಾಡಿದ ಶೀತ ತಕ್ಷಣ ಇಲ್ಲವಾಗುವುದು.

ಮಕ್ಕಳು ಮತ್ತು ವಯಸ್ಕರ ಮೇಲೆ ಶೀತ ಮತ್ತು ಕೆಮ್ಮಿನ ಔಷಧಿಗಳ ಪ್ರಭಾವ
ಇವುಗಳು ತಕ್ಷಣಕ್ಕೆ ರಿಲೀಫ್ ನೀಡಿದರೂ ಈ ಔಷಧಿಗಳು ಅಡ್ಡ ಪರಿಣಾಮವನ್ನು ಬೀರುತ್ತದೆ. ಈ ಔಷಧಿಗಳನ್ನು ಕೆಲವು ದಿನಗಳವರೆಗೆ ನಿರಂತರವಾಗಿ ತೆಗೆದುಕೊಳ್ಳುತ್ತಿದ್ದರೆ ಖಂಡಿತ ಇವುಗಳು ನಮ್ಮ ಶರೀರದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.

ಶುಷ್ಕ ಗಾಳಿ
ಶುಷ್ಕ ಗಾಳಿಯಲ್ಲಿ ಶೀತ ತರುವ ಸೋಂಕಾಣುಗಳು ತುಂಬಾ ಚಟುವಟಿಕೆಯಿಂದ ಇರುತ್ತದೆ. ಆದ್ದರಿಂದಲೇ ಚಳಿಗಾಲದಲ್ಲಿ ಶೀತ, ಗೆಂಟಲು ಕೆರೆತ ಈ ರೀತಿಯ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು.

ಶೀತ ಬಂದಾಗ ನಾವು ಮಾಡಬಾರದ ಕಾರ್ಯಗಳು
ಇಲ್ಲಿ ನಾವು ಕೆಲವೊಂದು ಅಂಶಗಳನ್ನು ಲಿಸ್ಟ್ ಮಾಡಿದ್ದೇವೆ, ಶೀತದಿಂದ ಮುಕ್ತಿ ಪಡೆಯಲು ನಾವೆಲ್ಲಾ ಈ ವಿಧಾನವನ್ನು ಅನುಸರಿಸುತ್ತೇವೆ, ಆದರೆ ಅದು ಒಳ್ಳೆಯದಲ್ಲ. ಏಕೆ ಒಳ್ಳೆಯದಲ್ಲ ಎಂಬ ಮಾಹಿತಿ ಮುಂದಿನ ಸ್ಲೈಡ್ ನಲ್ಲಿದೆ ನೋಡಿ.

ಆಂಟಿ ಬಯೋಟಿಕ್ ಮಾತ್ರೆಗಳು
ಇವುಗಳು ಸೋಂಕಾಣುಗಳ ವಿರುದ್ಧ ಹೋರಾಡುತ್ತದೆ ನಿಜ, ಆದರೆ ಶೀತ ಬಂದಾಗ ಇವುಗಳನ್ನು ತೆಗೆದುಕೊಳ್ಳುವುದನ್ನು ಕಮ್ಮಿ ಮಾಡಿ. ಇದನ್ನು ತೆಗೆದುಕೊಂಡರೆ ತಕ್ಷಣ ಗುಣ ಮುಖವಾಗುವುದಿಲ್ಲ, ಅಲ್ಲದೆ ದೇಹದಲ್ಲಿ ಸೋಂಕಾಣುಗಳ ವಿರುದ್ಧ ಹೋರಾಡುವ ಬ್ಯಾಕ್ಟೀರಿಯಾಗಳ ಉತ್ಪತ್ತಿಗೆ ಅಡಚಣೆ ಉಂಟು ಮಾಡುತ್ತದೆ.

ಚಿಕ್ಕ ಮಕ್ಕಳಿಗೆ ಶೀತ, ಕೆಮ್ಮಿಗೆ ಮಾತ್ರೆ ಕೊಡಬಾರದು
ಮಕ್ಕಳಿಗೆ ಮಾತ್ರೆ ಕೊಡುವುದಾದರೆ ವೈದ್ಯರ ಸಲಹೆ ಪಡೆದ ಬಳಿಕವಷ್ಟೇ ಕೊಡಬೇಕು, ಇಲ್ಲದಿದ್ದರೆ ಓವರ್ ಡೊಸ್ ಆಗುವುದು. ಅಲ್ಲದೆ ಚಿಕ್ಕ ಮಕ್ಕಳಿಗೆ ಅಡ್ಡ ಪರಿಣಾಮವಿಲ್ಲದ ಮನೆ ಮದ್ದು ಕೊಡುವುದು ಒಳ್ಳೆಯದು.

ಸತು
ಶೀತವಾದಾಗ ಸತುವಿನಂಶವಿರುವ ಆಹಾರಗಳನ್ನು ತೆಗೆದುಕೊಂಡರೆ ಶೀತ ಕಮ್ಮಿಯಾಗುತ್ತದೆ, ಆದರೆ ಇದರಿಂದ ಅಡ್ಡ ಪರಿಣಾಮವೂ ಉಂಟಾಗುವುದು, ಇದನ್ನು ತೆಗೆದುಕೊಂಡರೆ ರುಚಿ ಗ್ರಹಿಸುವ ಶಕ್ತಿ ಸ್ವಲ್ಪ ದಿನದವರೆಗೆ ಇಲ್ಲದಾಗುವ ಸಾಧ್ಯತೆ ಇದೆ.



Click it and Unblock the Notifications
