Latest Updates
-
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಸ್ವ ಚಿಕಿತ್ಸೆಯ ಅಡ್ಡ ಪರಿಣಾಮದ ಬಗ್ಗೆ ತಿಳಿದಿದೆಯೇ?
ಸ್ವಲ್ಪ ಮೈ ಬಿಸಿಯಾದರೆ, ತಲೆ ನೋವು ಶೀತ, ಕೆಮ್ಮು ಕಾಣಿಸಿಕೊಂಡರೆ ಈ ಚಿಕ್ಕ-ಪುಟ್ಟ ಕಾಯಿಲೆಗೆಲ್ಲಾ ಯಾರು ವೈದ್ಯರ ಹತ್ತಿರ ಹೋಗುತ್ತಾರೆ? ಎಂದು ಸ್ವಚಿಕಿತ್ಸೆ ಮಾಡಿಕೊಳ್ಳುವವರೇ ಹೆಚ್ಚು. ವೈದ್ಯರ ಸಲಹೆ ಪಡೆಯದೆ ವಿಟಮಿನ್ ಮಾತ್ರೆಗಳನ್ನು ಕೂಡ ತೆಗೆದುಕೊಳ್ಳಬಾರದು, ಆದರೆ ಯಾರೂ ಇದರ ಬಗ್ಗೆ ಚಿಂತಿಸುವುದೇ ಇಲ್ಲ.
ತಲೆನೋವು ಕಾಣಿಸಿಕೊಂಡಾಗ ತಲೆನೋವಿನ ಮಾತ್ರೆ ನುಂಗಿದರೆ ಸ್ವಲ್ಪ ಹೊತ್ತಿಗೆಲ್ಲಾ ಕಮ್ಮಿಯಾಗುತ್ತದೆ, ಮತ್ತೆ ನಾವು ನಮ್ಮ ಕೆಲಸದತ್ತ ಗಮನ ಕೊಡುತ್ತೇವೆ, ಸ್ವಲ್ಪ ದಿನ ಬಿಟ್ಟು ತಲೆ ನೋವು ಕಾಣಿಸಿಕೊಂಡರೆ ಮತ್ತೆ ಮಾತ್ರೆ ನುಂಗುತ್ತೇವೆ. ಇದೇ ರೀತಿ ಎಲ್ಲಾ ಚಿಕ್ಕ ಪುಟ್ಟ ಕಾಯಿಲೆಗಳು ಕಾಣಿಸಿಕೊಂಡಾಗಲೂ ಮಾಡುತ್ತೇವೆ. ಈ ರೀತಿಯ ಸ್ವಚಿಕಿತ್ಸೆಯಿಂದ ಎಂತಹ ಅಪಾಯ ಉಂಟಾಗುವುದೆಂದು ನಿಮಗೆ ಗೊತ್ತೇ? ಸ್ವ ಚಿಕಿತ್ಸೆಯ ಅಡ್ಡ ಪರಿಣಾಮದ ಬಗ್ಗೆ ತಿಳಿಯಲು ಮುಂದೆ ಓದಿ:

ಕಾಯಿಲೆ ಏನೆಂದು ತಿಳಿಯುವುದಿಲ್ಲ
ಕೆಲವೊಮ್ಮೆ ಕಾಯಿಲೆ ಏನೆಂದು ತಿಳಿಯುವುದಿಲ್ಲ, ಕೊನೆಗೆ ಕಾಯಿಲೆ ತುಂಬಾ ಅಧಿಕವಾದಾಗ ವೈದ್ಯರ ಬಳಿ ಹೋದಾಗ ತಿಳಿಯುತ್ತದೆ. ಯಾವುದೇ ಕಾಯಿಲೆ ಇರಲಿ ಮೊದಲಿಗೆ ಗುರುತಿಸಿದರೆ ಗುಣ ಪಡಿಸುವುದು ಸುಲಭ ಹಾಗೂ ತಗುಲುವ ವೆಚ್ಛ ಕೂಡ ಕಡಿಮೆ ಅನ್ನುವುದನ್ನು ಮರೆಯದಿರಿ. ಆದ್ದರಿಂದ ಯಾವುದೇ ಕಾಯಿಲೆ ಆದರೂ ನಿರ್ಲಕ್ಷ್ಯ ಮಾಡಬೇಡಿ.

ಸರಿಯಾದ ಪ್ರಮಾಣದ ಡೋಸೇಜ್ ಗೊತ್ತಾಗುವುದಿಲ್ಲ
ಡೋಸೇಜ್ ನಲ್ಲಿ ವ್ಯತ್ಯಾಸವಾದರೆ ಶರೀರದ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಡೋಸೇಜ್ ಜಾಸ್ತಿಯಾದರೆ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಕೂಡ ಇದೆ. ಆದ್ದರಿಂದ ಸರಿಯಾದ ಪ್ರಮಾಣದ ಡೋಸೇಜ್ ತೆಗೆದುಕೊಳ್ಳಲು ವೈದ್ಯರ ಸಲಹೆ ಮೇರೆಗಷ್ಟೇ ಔಷಧಿ ತೆಗೆದುಕೊಳ್ಳುವುದು ಒಳ್ಳೆಯದು.

ಚಟವಾಗಿ ಬಿಡುತ್ತದೆ
ಕೆಲವರಿಗೆ ಸ್ವಚಿಕಿತ್ಸೆ ಒಂದು ಚಟವಾಗಿ ಬಿಡುತ್ತದೆ. ಹೇಗೆಂದರೆ ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುವ ಚಟವಿರುತ್ತದೆ. ಕೆಲವೊಮ್ಮೆ ಸ್ವಚಿಕಿತ್ಸೆ ಮಾಡಿ, ವೈದ್ಯರು ನೀಡುವ ಔಷಧಿಗೆ ನಮ್ಮ ದೇಹ ಪ್ರತಿಸ್ಪಂದಿಸುವ ಸಾಮರ್ಥ್ಯ ಕಳೆದುಕೊಳ್ಳುತ್ತದೆ.

ವ್ಯತಿರಿಕ್ತ ಪರಿಣಾಮ ಬೀರಬಹುದು
ಕೆಲವೊಮ್ಮೆ ಒಂದು ಕಾಯಿಲೆಯನ್ನು ಗುಣ ಪಡಿಸಲು ತೆಗೆದುಕೊಂಡ ಔಷಧಿ ಮತ್ತೊಂದು ಸಮಸ್ಯೆ ಇರಬಹುದು. ಕೆಲವೊಂದು ಔಷಧಿಯನ್ನು ತೆಗೆದುಕೊಳ್ಳುವಾಗ ಕೆಲವೊಂದು ಆಹಾರಗಳನ್ನು ತಿನ್ನಬಾರದು. ಮತ್ತೆ ಒಬ್ಬರಿಗೆ ಜ್ವರ ಅಂತ ಔಷಧಿಯನ್ನು ಮನೆಯಲ್ಲಿ ಮತ್ತೊಬ್ಬರಿಗೆ ಜ್ವರ ಕಾಣಿಸಿದಾಗ ಕೊಡಬೇಡಿ. ಅಡ್ಡ ಪರಿಣಾಮ ಉಂಟಾಗಬಹುದು.

ಬಿಪಿ ಮತ್ತು ಮಧುಮೇಹದಂತಹ ಸಮಸ್ಯೆ ಇರುವವರು
ಇವರಂತೂ ಯಾವುದೇ ಔಷಧಿಯನ್ನು ವೈದ್ಯರ ಸಲಹೆಯಿಲ್ಲದೆ ಸ್ವಚಿಕಿತ್ಸೆ ಮಾಡುವ ಸಾಹಸ ಮಾಡದಿರುವುದು ಒಳ್ಳೆಯದು.

ಗರ್ಭಿಣಿಯರು
ಗರ್ಭಿಣಿಯರು ವಾಂತಿ, ತಲೆ ನೋವು ಹೀಗೆ ಯಾವುದೇ ರೀತಿಯ ಸಮಸ್ಯೆ ಕಾಣಿಸಿಕೊಂಡರೂ ವೈದ್ಯರ ಸಲಹೆ ಪಡೆದ ಬಳಿಕವಷ್ಟೇ ಔಷಧಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ವಿಟಮಿನ್ ಮಾತ್ರೆಗಳು
ವಿಟಮಿನ್ ಮಾತ್ರೆಗಳು ಆರೋಗ್ಯಕರವಾದರೂ ವೈದ್ಯರ ಸಲಹೆ ಪಡೆಯದೆ ತೆಗೆದುಕೊಳ್ಳಬೇಡಿ. ಏಕೆಂದರೆ ದೇಹದಲ್ಲಿ ವಿಟಮಿನ್ ಅಂಶ ಅಧಿಕವಾದರೂ ತೊಂದರೆಗಳು ಕಾಣಿಸಿಕೊಳ್ಳುವುದು.



Click it and Unblock the Notifications