Latest Updates
-
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ
ಮಧುಮೇಹಿಗಳಿಗೆ ಬೆಸ್ಟ್ ಮನೆಮದ್ದು ಅರಿಶಿಣ
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕವಿರುವ ರಾಷ್ಟ್ರವೆಂದರೆ ಭಾರತ. ಭಾರತೀಯರಿಗೆ ಅನೇಕ ಬಗೆಯ ಮನೆದ್ದುಗಳು ಗೊತ್ತಿದೆ. ಆದರೂ ನಮ್ಮಲ್ಲಿ ಈ ಸಮಸ್ಯೆ ಹೆಚ್ಚಾಗಲು ಕಾರಣ, ನಮಗೆ ನಮ್ಮ ಆರೋಗ್ಯದ ಬಗ್ಗೆ ಇರುವ ಅಸಡ್ಡೆ ಮನೋಭಾವವೆಂದರೆ ತಪ್ಪಾಗಲಾರದು. ನಾವೆಲ್ಲಾ ಕಾಯಿಲೆ ಬರುವ ತನಕ ತಲೆಕೆಡಿಸುವುದಿಲ್ಲ. ಬಂದ ಮೇಲೆ ಕಷ್ಟ ಪಡುತ್ತೇವೆ. ಕೆಲವೊಂದು ಕಾಯಿಲೆಗಳು ಬಂದರೆ ಜೀವನ ಪೂರ್ತಿ ನಮ್ಮ ಜೊತೆ ಇರುತ್ತದೆ, ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿಡಬಹುದು. ಅಂತಹ ಕಾಯಿಲೆಗಳಲ್ಲೊಂದು ಮಧುಮೇಹ.
ಮಧುಮೇಹವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಹಜವಾದ ಬದುಕನ್ನು ನಡೆಸಬಹುದು. ಕೆಲವೊಂದು ಮನೆಮದ್ದುಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಸರಿಯಾದ ರೀತಿ ಇಡುವಲ್ಲಿ ಸಹಾಯ ಮಾಡುತ್ತದೆ. ಅವುಗಳಲ್ಲಿ ಪ್ರಮುಖವಾದವು ಬೆಂಡೆಕಾಯಿ, ಅರಿಶಿಣ. ಇಲ್ಲಿ ನಾವು ಅರಿಶಿಣ ಮಧುಮೇಹಿಗಳ ದೇಹದ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂದು ವಿವರಿಸಿದ್ದೇವೆ ನೋಡಿ:

ಇನ್ಸುಲಿನ್ ಅನ್ನು ಸಮತೋಲನದಲ್ಲಿಡುತ್ತದೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿಣ ಹಾಕಿದ ಹಾಲನ್ನು ಕುಡಿದರೆ ಇನ್ಸುಲಿನ್ ನ ಮಟ್ಟವನ್ನು ಸಮತೋಲನದಲ್ಲಿಡಬಹುದು. ದೇಹದಲ್ಲಿ ಸಕ್ಕರೆಯಂಶವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾದ ಮದ್ದು ಇದಾಗಿದೆ.
ಕೊಬ್ಬನ್ನು ಕರಗಿಸುತ್ತದೆ
ಮಧುಮೇಹಿಗಳಲ್ಲಿ ಕಂಡು ಬರುವ ಮತ್ತೊಂದು ಸಮಸ್ಯೆಯೆಂದರೆ ಬೊಜ್ಜು. ಬೊಜ್ಜು ಹೆಚ್ಚಾದಂತೆ ಕಾಯಿಲೆಯೂ ಹೆಚ್ಚಾಗುವುದು. ಇದು ಕೊಬ್ಬನ್ನು ಕರಗಿಸುವಲ್ಲಿ ಸಹಕಾರಿಯಾಗಿದೆ.
ಸೋಂಕಾಣುಗಳ ವಿರುದ್ಧ ಹೋರಾಡುತ್ತದೆ
Pathogens ಅನ್ನುವ ವೈರಸ್ ನಿಂದ ಟೈಪ್ 1 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಅರಿಶಿಣದಲ್ಲಿರುವ ಆಂಟಿಬಯೋಟಿಕ್ ಅಂಶ ಈ ವೈಸರ್ ಅನ್ನು ನಾಶ ಪಡಿಸುತ್ತದೆ.
ಒಟ್ಟು ಮೊತ್ತದ ಆರೋಗ್ಯಕ್ಕೆ
ಇದರಲ್ಲಿರುವ ಆಂಟಿ ಗ್ಲೈಸೆಮಿಕ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿ, ರೋಗಾಣುಗಳು ಬರದಂತೆ ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications