Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮಧುಮೇಹಿಗಳಿಗೆ ಬೆಸ್ಟ್ ಮನೆಮದ್ದು ಅರಿಶಿಣ
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕವಿರುವ ರಾಷ್ಟ್ರವೆಂದರೆ ಭಾರತ. ಭಾರತೀಯರಿಗೆ ಅನೇಕ ಬಗೆಯ ಮನೆದ್ದುಗಳು ಗೊತ್ತಿದೆ. ಆದರೂ ನಮ್ಮಲ್ಲಿ ಈ ಸಮಸ್ಯೆ ಹೆಚ್ಚಾಗಲು ಕಾರಣ, ನಮಗೆ ನಮ್ಮ ಆರೋಗ್ಯದ ಬಗ್ಗೆ ಇರುವ ಅಸಡ್ಡೆ ಮನೋಭಾವವೆಂದರೆ ತಪ್ಪಾಗಲಾರದು. ನಾವೆಲ್ಲಾ ಕಾಯಿಲೆ ಬರುವ ತನಕ ತಲೆಕೆಡಿಸುವುದಿಲ್ಲ. ಬಂದ ಮೇಲೆ ಕಷ್ಟ ಪಡುತ್ತೇವೆ. ಕೆಲವೊಂದು ಕಾಯಿಲೆಗಳು ಬಂದರೆ ಜೀವನ ಪೂರ್ತಿ ನಮ್ಮ ಜೊತೆ ಇರುತ್ತದೆ, ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿಡಬಹುದು. ಅಂತಹ ಕಾಯಿಲೆಗಳಲ್ಲೊಂದು ಮಧುಮೇಹ.
ಮಧುಮೇಹವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಹಜವಾದ ಬದುಕನ್ನು ನಡೆಸಬಹುದು. ಕೆಲವೊಂದು ಮನೆಮದ್ದುಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಸರಿಯಾದ ರೀತಿ ಇಡುವಲ್ಲಿ ಸಹಾಯ ಮಾಡುತ್ತದೆ. ಅವುಗಳಲ್ಲಿ ಪ್ರಮುಖವಾದವು ಬೆಂಡೆಕಾಯಿ, ಅರಿಶಿಣ. ಇಲ್ಲಿ ನಾವು ಅರಿಶಿಣ ಮಧುಮೇಹಿಗಳ ದೇಹದ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂದು ವಿವರಿಸಿದ್ದೇವೆ ನೋಡಿ:

ಇನ್ಸುಲಿನ್ ಅನ್ನು ಸಮತೋಲನದಲ್ಲಿಡುತ್ತದೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿಣ ಹಾಕಿದ ಹಾಲನ್ನು ಕುಡಿದರೆ ಇನ್ಸುಲಿನ್ ನ ಮಟ್ಟವನ್ನು ಸಮತೋಲನದಲ್ಲಿಡಬಹುದು. ದೇಹದಲ್ಲಿ ಸಕ್ಕರೆಯಂಶವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾದ ಮದ್ದು ಇದಾಗಿದೆ.
ಕೊಬ್ಬನ್ನು ಕರಗಿಸುತ್ತದೆ
ಮಧುಮೇಹಿಗಳಲ್ಲಿ ಕಂಡು ಬರುವ ಮತ್ತೊಂದು ಸಮಸ್ಯೆಯೆಂದರೆ ಬೊಜ್ಜು. ಬೊಜ್ಜು ಹೆಚ್ಚಾದಂತೆ ಕಾಯಿಲೆಯೂ ಹೆಚ್ಚಾಗುವುದು. ಇದು ಕೊಬ್ಬನ್ನು ಕರಗಿಸುವಲ್ಲಿ ಸಹಕಾರಿಯಾಗಿದೆ.
ಸೋಂಕಾಣುಗಳ ವಿರುದ್ಧ ಹೋರಾಡುತ್ತದೆ
Pathogens ಅನ್ನುವ ವೈರಸ್ ನಿಂದ ಟೈಪ್ 1 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಅರಿಶಿಣದಲ್ಲಿರುವ ಆಂಟಿಬಯೋಟಿಕ್ ಅಂಶ ಈ ವೈಸರ್ ಅನ್ನು ನಾಶ ಪಡಿಸುತ್ತದೆ.
ಒಟ್ಟು ಮೊತ್ತದ ಆರೋಗ್ಯಕ್ಕೆ
ಇದರಲ್ಲಿರುವ ಆಂಟಿ ಗ್ಲೈಸೆಮಿಕ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿ, ರೋಗಾಣುಗಳು ಬರದಂತೆ ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
