Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮಧುಮೇಹಿಗಳಿಗೆ ಬೆಸ್ಟ್ ಮನೆಮದ್ದು ಅರಿಶಿಣ
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕವಿರುವ ರಾಷ್ಟ್ರವೆಂದರೆ ಭಾರತ. ಭಾರತೀಯರಿಗೆ ಅನೇಕ ಬಗೆಯ ಮನೆದ್ದುಗಳು ಗೊತ್ತಿದೆ. ಆದರೂ ನಮ್ಮಲ್ಲಿ ಈ ಸಮಸ್ಯೆ ಹೆಚ್ಚಾಗಲು ಕಾರಣ, ನಮಗೆ ನಮ್ಮ ಆರೋಗ್ಯದ ಬಗ್ಗೆ ಇರುವ ಅಸಡ್ಡೆ ಮನೋಭಾವವೆಂದರೆ ತಪ್ಪಾಗಲಾರದು. ನಾವೆಲ್ಲಾ ಕಾಯಿಲೆ ಬರುವ ತನಕ ತಲೆಕೆಡಿಸುವುದಿಲ್ಲ. ಬಂದ ಮೇಲೆ ಕಷ್ಟ ಪಡುತ್ತೇವೆ. ಕೆಲವೊಂದು ಕಾಯಿಲೆಗಳು ಬಂದರೆ ಜೀವನ ಪೂರ್ತಿ ನಮ್ಮ ಜೊತೆ ಇರುತ್ತದೆ, ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿಡಬಹುದು. ಅಂತಹ ಕಾಯಿಲೆಗಳಲ್ಲೊಂದು ಮಧುಮೇಹ.
ಮಧುಮೇಹವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಹಜವಾದ ಬದುಕನ್ನು ನಡೆಸಬಹುದು. ಕೆಲವೊಂದು ಮನೆಮದ್ದುಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಸರಿಯಾದ ರೀತಿ ಇಡುವಲ್ಲಿ ಸಹಾಯ ಮಾಡುತ್ತದೆ. ಅವುಗಳಲ್ಲಿ ಪ್ರಮುಖವಾದವು ಬೆಂಡೆಕಾಯಿ, ಅರಿಶಿಣ. ಇಲ್ಲಿ ನಾವು ಅರಿಶಿಣ ಮಧುಮೇಹಿಗಳ ದೇಹದ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂದು ವಿವರಿಸಿದ್ದೇವೆ ನೋಡಿ:

ಇನ್ಸುಲಿನ್ ಅನ್ನು ಸಮತೋಲನದಲ್ಲಿಡುತ್ತದೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿಣ ಹಾಕಿದ ಹಾಲನ್ನು ಕುಡಿದರೆ ಇನ್ಸುಲಿನ್ ನ ಮಟ್ಟವನ್ನು ಸಮತೋಲನದಲ್ಲಿಡಬಹುದು. ದೇಹದಲ್ಲಿ ಸಕ್ಕರೆಯಂಶವನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿಯಾದ ಮದ್ದು ಇದಾಗಿದೆ.
ಕೊಬ್ಬನ್ನು ಕರಗಿಸುತ್ತದೆ
ಮಧುಮೇಹಿಗಳಲ್ಲಿ ಕಂಡು ಬರುವ ಮತ್ತೊಂದು ಸಮಸ್ಯೆಯೆಂದರೆ ಬೊಜ್ಜು. ಬೊಜ್ಜು ಹೆಚ್ಚಾದಂತೆ ಕಾಯಿಲೆಯೂ ಹೆಚ್ಚಾಗುವುದು. ಇದು ಕೊಬ್ಬನ್ನು ಕರಗಿಸುವಲ್ಲಿ ಸಹಕಾರಿಯಾಗಿದೆ.
ಸೋಂಕಾಣುಗಳ ವಿರುದ್ಧ ಹೋರಾಡುತ್ತದೆ
Pathogens ಅನ್ನುವ ವೈರಸ್ ನಿಂದ ಟೈಪ್ 1 ಮಧುಮೇಹ ಬರುವ ಸಾಧ್ಯತೆ ಹೆಚ್ಚು. ಅರಿಶಿಣದಲ್ಲಿರುವ ಆಂಟಿಬಯೋಟಿಕ್ ಅಂಶ ಈ ವೈಸರ್ ಅನ್ನು ನಾಶ ಪಡಿಸುತ್ತದೆ.
ಒಟ್ಟು ಮೊತ್ತದ ಆರೋಗ್ಯಕ್ಕೆ
ಇದರಲ್ಲಿರುವ ಆಂಟಿ ಗ್ಲೈಸೆಮಿಕ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿ, ರೋಗಾಣುಗಳು ಬರದಂತೆ ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications