Latest Updates
-
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ!
ಒಣ ಕೆಮ್ಮಿನ ನಿವಾರಣೆಗೆ ಉತ್ತಮ ಮನೆಮದ್ದು
ಚಳಿ ಮತ್ತು ಬೇಸಿಗೆಕಾಲದಲ್ಲಿ ಹೆಚ್ಚಿನವರಿಗೆ ಒಣ ಕೆಮ್ಮಿನ ಸಮಸ್ಯೆ ಕಂಡು ಬರುತ್ತದೆ. ದೂಳಿನ ಅಲರ್ಜಿ ಇರುವವರೆಗೆ ಈ ರೀತಿಯ ಕೆಮ್ಮು ಕಂಡು ಬರುತ್ತದೆ. ಒಣ ಕೆಮ್ಮು ಕಾಣಿಸಿದರೆ ಕಫ ಸಮಸ್ಯೆ ಇರುವುದಿಲ್ಲ, ಆದರೆ ಗಂಟಲಿನಲ್ಲಿ ಕೆರೆತ ಮತ್ತು ನಿರಂತರ ಕೆಮ್ಮು ಕಂಡು ಬರುವುದು, ಕೆಲವರಿಗೆ 2 ತಿಂಗಳವರೆಗೆ ಈ ರೀತಿಯ ಕೆಮ್ಮು ಕಂಡು ಬರುವುದು.
ಇಂತವರು ದೂಳಿನಿಂದ ದೂರವಿರುವುದರ ಮುಖಾಂತರ ಹಾಗೂ ಕೆಲ ಮನೆ ಮದ್ದುಗಳನ್ನು ಪಾಲಿಸುವುದರಿಂದ ಬರದಂತೆ ತಡೆಯಬಹುದು. ಒಣಕೆಮ್ಮನ್ನು ತಡೆಯುವ ಸರಳವಾದ ಮನೆ ಮದ್ದುಗಳ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ:

ನೀರು ಕುಡಿಯಿರಿ
ಒಣ ಕೆಮ್ಮು ಕಾಣಿಸಿದಾಗ ಆಗಾಗ ಸ್ವಲ್ಪ-ಸ್ವಲ್ಪ ನೀರು ಕುಡಿಯಿರಿ. ಹೀಗೆ ಮಾಡಿದರೆ ಕೆಮ್ಮು ಬರುವುದನ್ನು ತಡೆಯಬಹುದು. ಗಂಟಲು ಒಣಗಲು ಬಿಡಬೇಡಿ. ಆಗಾಗ ನೀರನ್ನು ಕುಡಿಯುತ್ತಿದ್ದರೆ ಕ್ರಮೇಣ ಒಣ ಕೆಮ್ಮು ಕಮ್ಮಿಯಾಗುವುದು. ಇದರ ಜೊತೆಗೆ ಮುಂದಿನ ಸ್ಲೈಡ್ ನಲ್ಲಿ ಹೇಳಿದ ಮನೆ ಮದ್ದುಗಳನ್ನು ಪಾಲಿಸಿ.

ಐಸ್ ಕ್ಯಾಂಡಿ
ಒಣ ಕೆಮ್ಮನ್ನು ಕಮ್ಮಿ ಮಾಡುವಲ್ಲಿ ಐಸ್ ಕ್ಯಾಂಡಿ ಕೂಡ ತುಂಬಾ ಸಹಾಯಕಾರಿಯಾಗಿದೆ. ಕ್ಯಾಂಡಿ ಗಂಟಲನ್ನು ತಂಪು ಮಾಡಿ, ಕೆಮ್ಮು ಬರುವುದನ್ನು ತಡೆಯುತ್ತದೆ.

ಹರ್ಬಲ್ ಟೀ
ಒಣ ಕೆಮ್ಮು ಹೋಗಲಾಡಿಸಲು ಕೆಲವೊಂದು ಹರ್ಬಲ್ ಟೀ ತುಂಬಾ ಸಹಾಯಕಾರಿ. ಶುಂಠಿ, ತುಳಸಿ ಈ ಅಂಶಗಳಿರುವ ಹರ್ಬಲ್ ಟೀ ತುಂಬಾ ಒಳ್ಳೆಯದು.

ನಿಂಬೆ ಪಾನೀಯ
ನಿಂಬೆ ಪಾನೀಯ ಮಾಡಿ ದಿನದಲ್ಲಿ 3-4 ಲೋಟ ಕುಡಿಯಿರಿ. ಈ ನಿಂಬೆ ಜ್ಯೂಸ್ ನಲ್ಲಿ ವಿಟಮಿನ್ ಸಿ ಅಧಿಕವಿದ್ದು ಒಣ ಕೆಮ್ಮಿನ ಸಮಸ್ಯೆಗೆ ಉತ್ತಮವಾದ ಮನೆಮದ್ದಾಗಿದೆ.

ಶುಂಠಿ
ಶುಂಠಿ ಕಷಾಯ ಮಾಡಿ ಕುಡಿಯುವುದು ಅಥವಾ ಶುಂಠಿ ರಸಕ್ಕೆ ಸ್ವಲ್ಪ ಜೇನು ಬೆರೆಸಿ ಸೇವಿಸುವುದು ಮಾಡುತ್ತಾ ಬಂದರೆ ಒಣ ಕೆಮ್ಮು ದೂರವಾಗುವುದು.

ಆಪಲ್ ಸೈಡರ್ ವಿನೆಗರ್
ಗಂಟಲು ಕೆರೆತ ಹೋಗಲಾಡಿಸಲು ಬಿಸಿ ನೀರಿಗೆ ಸ್ವಲ್ಪ ಆಪಲ್ ಸೈಡರ್ ವಿನಿಗರ್ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಗಂಟಲಿನ ಕೆರೆತ ತಡೆಯಬಹುದು.

ಉಪ್ಪು
ಉಪ್ಪನ್ನು ಬಿಸಿ ನೀರಿಗೆ ಹಾಕಿ ಮುಕ್ಕಳಿಸಿದರೆ ಗಂಟಲಿನ ಕೆರೆತ ಕಡಿಮೆಯಾಗುವುದು. ಅಲ್ಲದೆ ಈ ರೀತಿ ಮಾಡುವುದರಿಂದ ಗಂಟಲಿನ ನೋವನ್ನು ಕಡಿಮೆಯಾಗುವುದು.

ಚಕ್ಕೆ
ಚಕ್ಕೆಯನ್ನು ನೀರಿನಲ್ಲಿ ನೆನೆ ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಕುಡಿದರೆ ಒಣ ಕೆಮ್ಮು ಕಡಿಮೆಯಾಗುವುದು.



Click it and Unblock the Notifications