Latest Updates
-
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ -
ಗಣೇಶ ಹಬ್ಬ 2026: ಬೆಂಗಳೂರಿನಲ್ಲಿ PoP ಮೂರ್ತಿಗಳ ಮೇಲೆ ಕಠಿಣ ನಿಷೇಧ, ಪರಿಸರ ಸ್ನೇಹಿ ಗಣಪತಿಯನ್ನು ಪತ್ತೆ ಹಚ್ಚುವುದು ಹೇಗೆ? -
ವೈ-ವೈ ನೂಡಲ್ಸ್ ಕಂಪನಿಗೆ FSSAI ಬಿಗ್ ಶಾಕ್: ಉತ್ಪಾದನೆ ಸ್ಥಗಿತ, ಅಸಲಿ ಕಾರಣವೇನು? -
ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಕದನ: ನಾಳೆ ದುಬೈನಲ್ಲಿ ಗೆಲ್ಲೋರು ಯಾರು?
ಒಣ ಕೆಮ್ಮಿನ ನಿವಾರಣೆಗೆ ಉತ್ತಮ ಮನೆಮದ್ದು
ಚಳಿ ಮತ್ತು ಬೇಸಿಗೆಕಾಲದಲ್ಲಿ ಹೆಚ್ಚಿನವರಿಗೆ ಒಣ ಕೆಮ್ಮಿನ ಸಮಸ್ಯೆ ಕಂಡು ಬರುತ್ತದೆ. ದೂಳಿನ ಅಲರ್ಜಿ ಇರುವವರೆಗೆ ಈ ರೀತಿಯ ಕೆಮ್ಮು ಕಂಡು ಬರುತ್ತದೆ. ಒಣ ಕೆಮ್ಮು ಕಾಣಿಸಿದರೆ ಕಫ ಸಮಸ್ಯೆ ಇರುವುದಿಲ್ಲ, ಆದರೆ ಗಂಟಲಿನಲ್ಲಿ ಕೆರೆತ ಮತ್ತು ನಿರಂತರ ಕೆಮ್ಮು ಕಂಡು ಬರುವುದು, ಕೆಲವರಿಗೆ 2 ತಿಂಗಳವರೆಗೆ ಈ ರೀತಿಯ ಕೆಮ್ಮು ಕಂಡು ಬರುವುದು.
ಇಂತವರು ದೂಳಿನಿಂದ ದೂರವಿರುವುದರ ಮುಖಾಂತರ ಹಾಗೂ ಕೆಲ ಮನೆ ಮದ್ದುಗಳನ್ನು ಪಾಲಿಸುವುದರಿಂದ ಬರದಂತೆ ತಡೆಯಬಹುದು. ಒಣಕೆಮ್ಮನ್ನು ತಡೆಯುವ ಸರಳವಾದ ಮನೆ ಮದ್ದುಗಳ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ:

ನೀರು ಕುಡಿಯಿರಿ
ಒಣ ಕೆಮ್ಮು ಕಾಣಿಸಿದಾಗ ಆಗಾಗ ಸ್ವಲ್ಪ-ಸ್ವಲ್ಪ ನೀರು ಕುಡಿಯಿರಿ. ಹೀಗೆ ಮಾಡಿದರೆ ಕೆಮ್ಮು ಬರುವುದನ್ನು ತಡೆಯಬಹುದು. ಗಂಟಲು ಒಣಗಲು ಬಿಡಬೇಡಿ. ಆಗಾಗ ನೀರನ್ನು ಕುಡಿಯುತ್ತಿದ್ದರೆ ಕ್ರಮೇಣ ಒಣ ಕೆಮ್ಮು ಕಮ್ಮಿಯಾಗುವುದು. ಇದರ ಜೊತೆಗೆ ಮುಂದಿನ ಸ್ಲೈಡ್ ನಲ್ಲಿ ಹೇಳಿದ ಮನೆ ಮದ್ದುಗಳನ್ನು ಪಾಲಿಸಿ.

ಐಸ್ ಕ್ಯಾಂಡಿ
ಒಣ ಕೆಮ್ಮನ್ನು ಕಮ್ಮಿ ಮಾಡುವಲ್ಲಿ ಐಸ್ ಕ್ಯಾಂಡಿ ಕೂಡ ತುಂಬಾ ಸಹಾಯಕಾರಿಯಾಗಿದೆ. ಕ್ಯಾಂಡಿ ಗಂಟಲನ್ನು ತಂಪು ಮಾಡಿ, ಕೆಮ್ಮು ಬರುವುದನ್ನು ತಡೆಯುತ್ತದೆ.

ಹರ್ಬಲ್ ಟೀ
ಒಣ ಕೆಮ್ಮು ಹೋಗಲಾಡಿಸಲು ಕೆಲವೊಂದು ಹರ್ಬಲ್ ಟೀ ತುಂಬಾ ಸಹಾಯಕಾರಿ. ಶುಂಠಿ, ತುಳಸಿ ಈ ಅಂಶಗಳಿರುವ ಹರ್ಬಲ್ ಟೀ ತುಂಬಾ ಒಳ್ಳೆಯದು.

ನಿಂಬೆ ಪಾನೀಯ
ನಿಂಬೆ ಪಾನೀಯ ಮಾಡಿ ದಿನದಲ್ಲಿ 3-4 ಲೋಟ ಕುಡಿಯಿರಿ. ಈ ನಿಂಬೆ ಜ್ಯೂಸ್ ನಲ್ಲಿ ವಿಟಮಿನ್ ಸಿ ಅಧಿಕವಿದ್ದು ಒಣ ಕೆಮ್ಮಿನ ಸಮಸ್ಯೆಗೆ ಉತ್ತಮವಾದ ಮನೆಮದ್ದಾಗಿದೆ.

ಶುಂಠಿ
ಶುಂಠಿ ಕಷಾಯ ಮಾಡಿ ಕುಡಿಯುವುದು ಅಥವಾ ಶುಂಠಿ ರಸಕ್ಕೆ ಸ್ವಲ್ಪ ಜೇನು ಬೆರೆಸಿ ಸೇವಿಸುವುದು ಮಾಡುತ್ತಾ ಬಂದರೆ ಒಣ ಕೆಮ್ಮು ದೂರವಾಗುವುದು.

ಆಪಲ್ ಸೈಡರ್ ವಿನೆಗರ್
ಗಂಟಲು ಕೆರೆತ ಹೋಗಲಾಡಿಸಲು ಬಿಸಿ ನೀರಿಗೆ ಸ್ವಲ್ಪ ಆಪಲ್ ಸೈಡರ್ ವಿನಿಗರ್ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಗಂಟಲಿನ ಕೆರೆತ ತಡೆಯಬಹುದು.

ಉಪ್ಪು
ಉಪ್ಪನ್ನು ಬಿಸಿ ನೀರಿಗೆ ಹಾಕಿ ಮುಕ್ಕಳಿಸಿದರೆ ಗಂಟಲಿನ ಕೆರೆತ ಕಡಿಮೆಯಾಗುವುದು. ಅಲ್ಲದೆ ಈ ರೀತಿ ಮಾಡುವುದರಿಂದ ಗಂಟಲಿನ ನೋವನ್ನು ಕಡಿಮೆಯಾಗುವುದು.

ಚಕ್ಕೆ
ಚಕ್ಕೆಯನ್ನು ನೀರಿನಲ್ಲಿ ನೆನೆ ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಕುಡಿದರೆ ಒಣ ಕೆಮ್ಮು ಕಡಿಮೆಯಾಗುವುದು.



Click it and Unblock the Notifications