Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಒಣ ಕೆಮ್ಮಿನ ನಿವಾರಣೆಗೆ ಉತ್ತಮ ಮನೆಮದ್ದು
ಚಳಿ ಮತ್ತು ಬೇಸಿಗೆಕಾಲದಲ್ಲಿ ಹೆಚ್ಚಿನವರಿಗೆ ಒಣ ಕೆಮ್ಮಿನ ಸಮಸ್ಯೆ ಕಂಡು ಬರುತ್ತದೆ. ದೂಳಿನ ಅಲರ್ಜಿ ಇರುವವರೆಗೆ ಈ ರೀತಿಯ ಕೆಮ್ಮು ಕಂಡು ಬರುತ್ತದೆ. ಒಣ ಕೆಮ್ಮು ಕಾಣಿಸಿದರೆ ಕಫ ಸಮಸ್ಯೆ ಇರುವುದಿಲ್ಲ, ಆದರೆ ಗಂಟಲಿನಲ್ಲಿ ಕೆರೆತ ಮತ್ತು ನಿರಂತರ ಕೆಮ್ಮು ಕಂಡು ಬರುವುದು, ಕೆಲವರಿಗೆ 2 ತಿಂಗಳವರೆಗೆ ಈ ರೀತಿಯ ಕೆಮ್ಮು ಕಂಡು ಬರುವುದು.
ಇಂತವರು ದೂಳಿನಿಂದ ದೂರವಿರುವುದರ ಮುಖಾಂತರ ಹಾಗೂ ಕೆಲ ಮನೆ ಮದ್ದುಗಳನ್ನು ಪಾಲಿಸುವುದರಿಂದ ಬರದಂತೆ ತಡೆಯಬಹುದು. ಒಣಕೆಮ್ಮನ್ನು ತಡೆಯುವ ಸರಳವಾದ ಮನೆ ಮದ್ದುಗಳ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ:

ನೀರು ಕುಡಿಯಿರಿ
ಒಣ ಕೆಮ್ಮು ಕಾಣಿಸಿದಾಗ ಆಗಾಗ ಸ್ವಲ್ಪ-ಸ್ವಲ್ಪ ನೀರು ಕುಡಿಯಿರಿ. ಹೀಗೆ ಮಾಡಿದರೆ ಕೆಮ್ಮು ಬರುವುದನ್ನು ತಡೆಯಬಹುದು. ಗಂಟಲು ಒಣಗಲು ಬಿಡಬೇಡಿ. ಆಗಾಗ ನೀರನ್ನು ಕುಡಿಯುತ್ತಿದ್ದರೆ ಕ್ರಮೇಣ ಒಣ ಕೆಮ್ಮು ಕಮ್ಮಿಯಾಗುವುದು. ಇದರ ಜೊತೆಗೆ ಮುಂದಿನ ಸ್ಲೈಡ್ ನಲ್ಲಿ ಹೇಳಿದ ಮನೆ ಮದ್ದುಗಳನ್ನು ಪಾಲಿಸಿ.

ಐಸ್ ಕ್ಯಾಂಡಿ
ಒಣ ಕೆಮ್ಮನ್ನು ಕಮ್ಮಿ ಮಾಡುವಲ್ಲಿ ಐಸ್ ಕ್ಯಾಂಡಿ ಕೂಡ ತುಂಬಾ ಸಹಾಯಕಾರಿಯಾಗಿದೆ. ಕ್ಯಾಂಡಿ ಗಂಟಲನ್ನು ತಂಪು ಮಾಡಿ, ಕೆಮ್ಮು ಬರುವುದನ್ನು ತಡೆಯುತ್ತದೆ.

ಹರ್ಬಲ್ ಟೀ
ಒಣ ಕೆಮ್ಮು ಹೋಗಲಾಡಿಸಲು ಕೆಲವೊಂದು ಹರ್ಬಲ್ ಟೀ ತುಂಬಾ ಸಹಾಯಕಾರಿ. ಶುಂಠಿ, ತುಳಸಿ ಈ ಅಂಶಗಳಿರುವ ಹರ್ಬಲ್ ಟೀ ತುಂಬಾ ಒಳ್ಳೆಯದು.

ನಿಂಬೆ ಪಾನೀಯ
ನಿಂಬೆ ಪಾನೀಯ ಮಾಡಿ ದಿನದಲ್ಲಿ 3-4 ಲೋಟ ಕುಡಿಯಿರಿ. ಈ ನಿಂಬೆ ಜ್ಯೂಸ್ ನಲ್ಲಿ ವಿಟಮಿನ್ ಸಿ ಅಧಿಕವಿದ್ದು ಒಣ ಕೆಮ್ಮಿನ ಸಮಸ್ಯೆಗೆ ಉತ್ತಮವಾದ ಮನೆಮದ್ದಾಗಿದೆ.

ಶುಂಠಿ
ಶುಂಠಿ ಕಷಾಯ ಮಾಡಿ ಕುಡಿಯುವುದು ಅಥವಾ ಶುಂಠಿ ರಸಕ್ಕೆ ಸ್ವಲ್ಪ ಜೇನು ಬೆರೆಸಿ ಸೇವಿಸುವುದು ಮಾಡುತ್ತಾ ಬಂದರೆ ಒಣ ಕೆಮ್ಮು ದೂರವಾಗುವುದು.

ಆಪಲ್ ಸೈಡರ್ ವಿನೆಗರ್
ಗಂಟಲು ಕೆರೆತ ಹೋಗಲಾಡಿಸಲು ಬಿಸಿ ನೀರಿಗೆ ಸ್ವಲ್ಪ ಆಪಲ್ ಸೈಡರ್ ವಿನಿಗರ್ ಹಾಕಿ ಬಾಯಿ ಮುಕ್ಕಳಿಸಿ. ಇದರಿಂದ ಗಂಟಲಿನ ಕೆರೆತ ತಡೆಯಬಹುದು.

ಉಪ್ಪು
ಉಪ್ಪನ್ನು ಬಿಸಿ ನೀರಿಗೆ ಹಾಕಿ ಮುಕ್ಕಳಿಸಿದರೆ ಗಂಟಲಿನ ಕೆರೆತ ಕಡಿಮೆಯಾಗುವುದು. ಅಲ್ಲದೆ ಈ ರೀತಿ ಮಾಡುವುದರಿಂದ ಗಂಟಲಿನ ನೋವನ್ನು ಕಡಿಮೆಯಾಗುವುದು.

ಚಕ್ಕೆ
ಚಕ್ಕೆಯನ್ನು ನೀರಿನಲ್ಲಿ ನೆನೆ ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಕುಡಿದರೆ ಒಣ ಕೆಮ್ಮು ಕಡಿಮೆಯಾಗುವುದು.



Click it and Unblock the Notifications