Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಪುರುಷರಿಗಾಗಿ 8 ಶಕ್ತಿವರ್ಧಕ ಆಹಾರಗಳು
ಮನೆಯಲ್ಲಿ ಪುರುಷರಿಗೆ ಬೇರೆ ಅಡುಗೆ, ಮಹಿಳೆಯರಿಗೆ ಬೇರೆ ಅಡುಗೆ ಅಂತ ಮಾಡುವುದಿಲ್ಲ. ಮಾಡಿರುವ ಅಡುಗೆಯಲ್ಲಿ ತಮಗೆ ಬೇಕಾದ ಪ್ರಮಾಣದಷ್ಟು ಆಹಾರವನ್ನು ತಿನ್ನುತ್ತೇವೆ ಹೊರತು ಬಾಡಿ ಬಿಲ್ಡರ್ ಹೊರತು ಪಡಿಸಿ ಪ್ರತ್ಯೇಕ ಡಯಟ್ ಮಾಡುವವರು ತುಂಬಾ ಕಡಿಮೆ.
ಪುರುಷರ ದೇಹಕ್ಕೆ, ಮಹಿಳೆಯರ ದೇಹಕ್ಕೆ ಅಗತ್ಯವಿರುವ ಪ್ರೊಟೀನ್ ಹಾಗೂ ಖನಿಜಾಂಶಗಳ ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದೆ. ಮಹಿಳೆಯರಿಗೆ ಕಬ್ಬಿಣದಂಶ ಮತ್ತು ಕ್ಯಾಲ್ಸಿಯಂ ಅಧಿಕವಾಗಿ ಬೇಕಾಗಿರುವುದರಿಂದ ಅಂತಹ ಆಹಾರಗಳನ್ನು ತಿಂದರೆ ಒಳ್ಳೆಯದು , ಪುರುಷರಿಗೆ ಸತುವಿನಂಶ ಮತ್ತು ಪ್ರೊಟೀನ್ ಹೆಚ್ಚಿರುವ ಆಹಾರಗಳ ಸೇವನೆ ಅತ್ಯಗತ್ಯ. ಇಲ್ಲದಿದ್ದರೆ ನಿಶ್ಯಕ್ತಿ ಸಮಸ್ಯೆ ಕಾಡುವುದು.
ಪುರುಷರು ತಮ್ಮ ಆಹಾರಕ್ರಮದಲ್ಲಿ ಈ ಆಹಾರಗಳನ್ನು ಸೇರಿಸಿದರೆ ದೇಹದ ಶಕ್ತಿ ವೃದ್ಧಿಸುವುದು:

ಮೊಟ್ಟೆ
ಇದರಲ್ಲಿ ಪ್ರೊಟೀನ್, ಸತು ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಇರುವುದರಿಂದ ಪ್ರತಿದಿನ ಒಂದು ಮೊಟ್ಟೆ ತಿನ್ನುವುದು ಒಳ್ಳೆಯದು.

ಸಾವಕ್ಕಿ
ಅನ್ನ, ಗೋಧಿಗೆ ಬದಲು ಸಾವಕ್ಕಿ ಬಳಸಿದರೆ ದೇಹಕ್ಕೆ ಅಗತ್ಯವಾದ ಪ್ರೊಟೀನ್ ದೊರೆಯುವುದು, ಇದು ದೇಹದಲ್ಲಿ ಶಕ್ತಿ ವರ್ಧಕವಾಗಿ ಕೆಲಸ ಮಾಡುತ್ತದೆ.

ಮೃದ್ವಂಗಿಗಳು
ಸಮುದ್ರಾಹಾರಗಳಲ್ಲಿ ಸತುವಿನಂಶ ಅಧಿಕವಿರುತ್ತದೆ. ಅದರಲ್ಲೂ ಮೃದ್ವಂಗಿಗಳಲ್ಲಿ ಈ ಅಂಶ ಅಧಿಕವಾಗಿರುತ್ತದೆ. ಮೃದ್ವಂಗಿಗಳಲ್ಲಿ ಸತುವಿನಂಶ ಮಾತ್ರವಲ್ಲ ಇತರ ಖನಿಜಾಂಶಗಳು ಕೂಡ ಇರುವುದರಿಂದ ಇದು ಆರೋಗ್ಯವನ್ನು ವೃದ್ಧಿಸುತ್ತದೆ.

ಬಾದಾಮಿ
ಬಾದಾಮಿ ಕೂಡ ಶಕ್ತಿ ವರ್ಧಕ ಆಹಾರವಾಗಿದ್ದು, ಇದನ್ನು ಮಹಿಳೆಯರು, ಪುರುಷರು, ಮಕ್ಕಳು ಎನ್ನುವ ಬೇಧವಿಲ್ಲದೆ ಎಲ್ಲರೂ ತಮ್ಮ ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು.

ನೇರಳೆ ಹಣ್ಣು
ಕೆಲವೊಮ್ಮೆ ನಮ್ಮಆಲೋಚನಾ ಶಕ್ತಿ ಕುಂದಿದಂತೆ ಅನಿಸುವುದು. ಏಕಾಗ್ರತೆ ಕಡಿಮೆಯಾಗುವುದು, ಇದಕ್ಕೆ ಮಿದುಳಿನ ನರಗಳು ಬಳಲಿರುವುದು ಕೂಡ ಒಂದು ಕಾರಣ. ನೇರಳೆ ಹಣ್ಣಿಗೆ ಮಿದುಳಿನ ನರವನ್ನು ಚುರುಕುಗೊಳಿಸುವ ಸಾಮರ್ಥ್ಯ ಹೊಂದಿದೆ ಅನ್ನುವುದು ಗೊತ್ತಿದೆಯೇ?

ಸಿಹಿ ಗೆಣಸು
ದೇಹದಲ್ಲಿ ಸಕ್ಕರೆಯಂಶ ಕಡಿಮೆಯಾದರೆ ತಲೆ ಸುತ್ತು ಕಂಡು ಬರುವುದು. ಈ ರೀತಿಯ ಸಮಸ್ಯೆ ಕಾಣಿಸಿದಾಗ ಕಾರ್ಬೋಹೈಡ್ರೇಟ್ ತಿನ್ನುವುದು ಒಳ್ಳೆಯದು. ಸಿಹಿ ಗೆಣಸಿನಲ್ಲಿ ಕಾರ್ಬೋಹೈಡ್ರೇಟ್ ಅಧಿಕವಿರುವುದರಿಂದ ಇದನ್ನು ತಿಂದರೆ ರಕ್ತದಲ್ಲಿ ಕಡಿಮೆಯಾದ ಸಕ್ಕರೆಯಂಶವನ್ನು ಹೆಚ್ಚು ಮಾಡುವಲ್ಲಿ ಸಹಕಾರಿಯಾಗುವುದು.

ಮೀನು
ಇದರಲ್ಲಿರುವ ಒಮೆಗಾ 3 ಕೊಬ್ಬಿನಂಶ ದೇಹಕ್ಕೆ ಅವಶ್ಯಕವಾದ ಕೊಬ್ಬಿನಂಶವಾಗಿದೆ. ಮಾಂಸಾಹಾರಿಗಳು ತಮ್ಮ ಆಹಾರಕ್ರಮದಲ್ಲಿ ಮೀನನ್ನು ಸೇರಿಸುವುದು ಒಳ್ಳೆಯದು.

ಕಾಫಿ
ಕಾಫಿ ಕುಡಿಯುವುದರ ಬಗ್ಗೆ ಅನೇಕ ವಾದ, ಪ್ರತಿವಾದಗಳಿವೆ. ಮಿತವಾಗಿ ಕಾಫಿ ಕುಡಿಯುವುದರಿಂದ ದೇಹದಲ್ಲಿ ಲವಲವಿಕೆ ತುಂಬುವುದು ಅನ್ನುವ ಅಂಶವನ್ನು ಅಲ್ಲಗಳೆಯುವಂತಿಲ್ಲ.



Click it and Unblock the Notifications