Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಈ ವಿಧಾನದಿಂದ ಮೂಲವ್ಯಾಧಿ ಗುಣಪಡಿಸಬಹುದು
ಪೈಲ್ಸ್ ಅಥವಾ ಮೂಲವ್ಯಾಧಿ ಕಾಯಿಲೆ ಬಂದರೆ ವಿಪರೀತ ನೋವಿನಿಂದ ಒದ್ದಾಡಬೇಕಾಗುತ್ತದೆ. ಪೈಲ್ಸ್ ಬೇರೆ-ಬೇರೆ ಗಾತ್ರದಲ್ಲಿ ಕಂಡು ಬರುವುದು, ಕೆಲವರಿಗೆ ಗುದದ್ವಾರ ಹೊರಗೆ ಪೈಲ್ಸ್ ಉಂಟಾದರೆ, ಮತ್ತೆ ಕೆಲವರಿಗೆ ಗುದದ್ವಾರದ ಒಳಗೆ ಪೈಲ್ಸ್ ಉಂಟಾಗುವುದು. ಮೂಲವ್ಯಾಧಿ ನಿವಾರಣೆಗೆ 20 ರೀತಿಯ ಮನೆಮದ್ದು
ಈ ಕಾಯಿಲೆ ಹೆಚ್ಚಾದರೆ ರಕ್ತಸ್ರಾವ ಕಂಡು ಬರುವುದು ಹಾಗೂ ಮಲವಿಸರ್ಜನೆಗೆ ಹೋಗುವಾಗ ವಿಪರೀತ ನೋವು ಕಂಡು ಬರುವುದು, ಕೂರುವುದು, ನಡೆಯುವುದು ಕೂಡ ಕಷ್ಟವಾಗುವುದು. ಇದಕ್ಕೆ ಆರ್ಯುವೇದ ಅಥವಾ ಅಲೋಪತಿ ಔಷಧಿ ತೆಗೆದುಕೊಂಡರೆ, ಕೆಲವರು ಆಪರೇಷನ್ ಮಾಡಿಸಿದರೆ ಮೂಲವ್ಯಾಧಿಯ ನೋವಿನಿಂದ ಪಾರಾಗಬಹುದು. ಮೂಲವ್ಯಾಧಿ ಗುಣವಾಗಲು ಪಾಲಿಸಲೇಬೇಕಾದ ಪಥ್ಯ
ಆದರೆ ಇದರ ಜೊತೆಗೆ ಆಹಾರಕ್ರಮದ ಬಗ್ಗೆ ಗಮನ ಕೊಡದಿದ್ದರೆ ಆ ನೋವು ಮರುಕಳಿಸುವುದು, ಆದ್ದರಿಂದ ಮೂಲವ್ಯಾಧಿ ಇರುವವರು ಈ ಕೆಳಗಿನ ಆಹಾರಗಳನ್ನು ಕಡ್ಡಾಯವಾಗಿ ತಮ್ಮ ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು.

ಜೀರಿಗೆ
ಪ್ರತೀದಿನ ಒಂದು ಲೋಟ ಜೀರಿಗೆ ನೀರು ಕುಡಿಯಿರಿ. ಅದರಲ್ಲೂ ಜೀರಿಗೆಯನ್ನು ರೋಸ್ಟ್ ಮಾಡಿ ಪುಡಿ ಮಾಡಿ ಇರಿ, ಅದನ್ನು ಜೀರಿಗೆ ಕಲೆಸಿ ಕುಡಿದರೆ ಒಳ್ಳೆಯದು.

ಮಜ್ಜಿಗೆ
ಮಜ್ಜಿಗೆ ತುಂಬಾ ಒಳ್ಳೆಯದು, ಇದು ಹೊಟ್ಟೆಯನ್ನು ತಂಪಾಗಿ ಇಡುತ್ತದೆ ಹಾಗೂ ಮಲಬದ್ಧತೆ ಸಮಸ್ಯೆ ಉಂಟು ಮಾಡುವುದಿಲ್ಲ.

ಬಾಳೆ ಹಣ್ಣು
ಬಾಳೆ ಹಣ್ಣನ್ನು ಒಂದು ಕಪ್ ನೀರಿನಲ್ಲಿ ಹಾಕಿ ಬೇಯಿಸಿ, ಈ ನೀರನ್ನು ದಿನದಲ್ಲಿ 3 ಬಾರಿ ಕುಡಿಯಿರಿ. ಈ ರೀತಿ ಕುಡಿಯುವುದರಿಂದ ಮೂಲವ್ಯಾಧಿ ಸಮಸ್ಯೆ ನೈಸರ್ಗಿಕವಾಗಿ ಕಡಿಮೆಯಾಗುವುದು.

ಜ್ಯೂಸ್
ಕ್ಯಾರೆಟ್ ಅಥವಾ ಬೀಟ್ ರೂಟ್ ಜ್ಯೂಸ್, ಕಿತ್ತಳೆ ಜ್ಯೂಸ್ ಇವೆಲ್ಲಾ ಉರಿಯನ್ನು ಕಡಿಮೆ ಮಾಡುತ್ತದೆ.

ಹಾಗಾಲಕಾಯಿ
ಹಾಗಾಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು. ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.

ಕಹಿ ಬೇವಿನ ಎಲೆ ಮತ್ತು ಗೋಧಿ ಹುಲ್ಲು
ಕಹಿ ಬೇವಿನ ಎಲೆ ಮತ್ತು ಗೋಧಿ ಹುಲ್ಲನ್ನು ಹಾಕಿ ಕುದಿಸಿದ ನೀರು ಕುಡಿಯುವುದು ಮೂಲವ್ಯಾಧಿಗೆ ನೈಸರ್ಗಿಕವಾದ ಮನೆಮದ್ದು.

ಬೆರ್ರಿ
ಎಲ್ಲಾ ಬೆರ್ರಿ ಹಣ್ಣುಗಳು ಮೂಲವ್ಯಾಧಿ ಕಾಯಿಲೆ ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ. ಸ್ಟ್ರಾಬೆರಿ, ದ್ರಾಕ್ಷಿ ಈ ರೀತಿಯ ಹಣ್ಣುಗಳನ್ನು ಪ್ರತಿನಿತ್ಯ ತಿನ್ನಿ.

ಶುಂಠಿ
ಅರ್ಧ ಚಮಚ ಶುಂಠಿ ಪುಡಿಯನ್ನು ಒಂದು ಚಮಚ ನಿಂಬೆ ರಸದ ಜೊತೆ ಕಲೆಸಿ, ಅದಕ್ಕೆ 1 ಚಮಚ ಜೇನು ಬೆರೆಸಿ ತಿಂದರೆ ಕೂಡ ಪೈಲ್ಸ್ ಕಡಿಮೆಯಾಗುವುದು.

ಮೂಲಂಗಿ
ಮೂಲಂಗಿ ಮೂಲವ್ಯಾಧಿಯನ್ನು ಹೋಗಲಾಡಿಸುವಲ್ಲಿ ಪರಿಣಾಮಕಾರಿಯಾದ ಆಹಾರವಾಗಿದೆ. ಕಾಲು ಗ್ಲಾಸ್ ಮೂಲಂಗಿ ಜ್ಯೂಸ್ ಕುಡಿಯುವುದರಿಂದ ಪೈಲ್ಸ್ ಹೆಚ್ಚಾಗದಂತೆ ತಡೆಯಬಹುದು.

ನೀರು
ಸಾಕಷ್ಟು ನೀರು ಕುಡಿಯಿರಿ, ತುಂಬಾ ನೀರು ಕುಡಿದರೆ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ನೀರು ಕಮ್ಮಿ ಕುಡಿದು ಮಲಬದ್ಧತೆ ಸಮಸ್ಯೆ ಕಾಣಿಸಿದರೆ ಪೈಲ್ಸ್ ಕಾಯಿಲೆ ಉಂಟಾಗುವುದು, ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ.

ಆಹಾರಕ್ರಮ
ಉಪ್ಪಿನಕಾಯಿ, ಅಧಿಕ ಖಾರವಿರುವ ಆಹಾರಗಳು ಇವುಗಳನ್ನು ತಿನ್ನಬೇಡಿ. ಖಾರ, ಉಪ್ಪು, ಹುಳಿ ಸ್ವಲ್ಪ ಕಮ್ಮಿಯಿದ್ದರೂ ಪರ್ವಾಗಿಲ್ಲ, ಆದರೆ ಇವು ಹೆಚ್ಚಾದರೆ ನಿಮ್ಮ ಕಾಯಿಲೆಯೂ ಹೆಚ್ಚಾಗುವುದು ನೆನಪಿರಲಿ.

ಅಡುಗೆ ಸೋಡಾ
ವಿಪರೀತ ಉರಿಯಿಂದ ನರುಳಿತ್ತಿದ್ದರೆ, ಊದಿದ ಭಾಗಕ್ಕೆ ಅಡುಗೆ ಸೋಡಾ ಹಚ್ಚಿದರೆ ಕಡಿಮೆಯಾಗುವುದು.



Click it and Unblock the Notifications