Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ನಾವು ತಿಂದ ಆಹಾರ ಜೀರ್ಣವಾಗಲು ನಮ್ಮ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಬೇಕು. ಈ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದರೆ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ತೊಳೆಸುವಿಕೆ ಮುಂತಾದ ಸಮಸ್ಯೆ ಕಂಡು ಬರುವುದು.
ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ನಮ್ಮ ದೇಹದ ಎಲ್ಲಾ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆ ಉಂಟಾಗುವುದು. ಆದ್ದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ. ಈ ಕೆಳಗೆ ನೀಡಿದ ಟಿಪ್ಸ್ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಕಾರಿಯಾಗಿದೆ. ಆದಾಗ್ಯೂ ಅಜೀರ್ಣ ಸಮಸ್ಯೆ ಆಗಾಗ ಕಾಣುತ್ತಿದ್ದರೆ ವೈದ್ಯರ ಹತ್ತಿರ ಸಲಹೆ ಪಡೆಯಿರಿ.

ನಾರಿನ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಿ
ನಾರಿನಂಶವಿರುವ ಆಹಾರಗಳು ಜೀರ್ಣಕ್ರಿಯೆಗೆ ತುಂಬಾ ಸಹಾಯಕಾರಿ. ನಾರಿನಂಶವಿರುವ ಆಹಾರಗಳು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಿ.

ನೀರು
ಕಮ್ಮಿ ಪ್ರಮಾಣದಲ್ಲಿ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ಊಟವಾದ ಬಳಿಕ ಒಂದು ಲೋಟ ಬಿಸಿ ನೀರು ಕುಡಿಯುವುದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.

ವ್ಯಾಯಾಮ
ದೇಹಕ್ಕೆ ಶ್ರಮವಿಲ್ಲದಿದ್ದರೆ ನಮ್ಮ ದೇಹದ ಅಂಗಳ ಕಾರ್ಯ ವೈಖರಿ ಕೂಡ ಕಡಿಮೆಯಾಗುವುದು. ಬೆವರು ಸುರಿಯುವಂತೆ ಕೆಲಸ ಮಾಡುವುದು ಅಥವಾ ವ್ಯಾಯಾಮ ಮಾಡುವುದು ಮಾಡಿ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಊಟವನ್ನು ನಿಧಾನಕ್ಕೆ ತಿನ್ನಿ
ಊಟ ಮಾಡುವಾಗ ನಿಧಾನಕ್ಕೆ ಚೆನ್ನಾಗಿ ಜಗಿದು ತಿನ್ನಿ. ಹೀಗೆ ತಿಂದರೆ ಜೀರ್ಣಕ್ರಿಯೆ ಸುಲಭವಾಗುವುದು.

ಮಿತಿ ಮೀರಿ ತಿನ್ನಲು ಹೀಗಬೇಡಿ
ಹೊಟ್ಟೆ ಬಿರಿಯುವಂತೆ ತಿಂದರೆ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಆದ್ದರಿಂದ ಯಾವಾಗಲೂ ಮಿತಿ ಆಹಾರ ಸೇವನೆ ಆರೊಗ್ಯದ ದೃಷ್ಟಿಯಿಂದ ಒಳ್ಳೆಯದು.

ಲೋಳೆಸರದ ಜ್ಯೂಸ್
ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವು, ಮಲಬದ್ಧತೆ ಕಾಣಿಸಿಕೊಂಡರೆ ಲೋಳೆಸರದ ಜ್ಯೂಸ್ ಕುಡಿಯುವುದು ಒಳ್ಳೆಯದು.

ಸಕ್ಕರೆಯಂಶವಿರುವ ಆಹಾರವನ್ನು ಕಮ್ಮಿ ಮಾಡಿ
ನಿಮ್ಮ ಡಯಟ್ ನಲ್ಲಿ ಸಕ್ಕರೆಯಂಶವನ್ನು ಕಮ್ಮಿ ತಿನ್ನಿ. ಕೆಫೀನ್ ಅಂಶವನ್ನು ಕೂಡ ಮಿತಿಯಲ್ಲಿ ಸೇವಿಸಿ.

ಒತ್ತಡ
ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳಿಗೆ ಕಾರಣ ಮಾನಸಿಕ ಒತ್ತಡ. ಇದನ್ನು ಕಮ್ಮಿ ಮಾಡಿದರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ದೊರಕಿದಂತೆ.



Click it and Unblock the Notifications