Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ನಾವು ತಿಂದ ಆಹಾರ ಜೀರ್ಣವಾಗಲು ನಮ್ಮ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಬೇಕು. ಈ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದರೆ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ತೊಳೆಸುವಿಕೆ ಮುಂತಾದ ಸಮಸ್ಯೆ ಕಂಡು ಬರುವುದು.
ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ನಮ್ಮ ದೇಹದ ಎಲ್ಲಾ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆ ಉಂಟಾಗುವುದು. ಆದ್ದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ. ಈ ಕೆಳಗೆ ನೀಡಿದ ಟಿಪ್ಸ್ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಕಾರಿಯಾಗಿದೆ. ಆದಾಗ್ಯೂ ಅಜೀರ್ಣ ಸಮಸ್ಯೆ ಆಗಾಗ ಕಾಣುತ್ತಿದ್ದರೆ ವೈದ್ಯರ ಹತ್ತಿರ ಸಲಹೆ ಪಡೆಯಿರಿ.

ನಾರಿನ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಿ
ನಾರಿನಂಶವಿರುವ ಆಹಾರಗಳು ಜೀರ್ಣಕ್ರಿಯೆಗೆ ತುಂಬಾ ಸಹಾಯಕಾರಿ. ನಾರಿನಂಶವಿರುವ ಆಹಾರಗಳು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಿ.

ನೀರು
ಕಮ್ಮಿ ಪ್ರಮಾಣದಲ್ಲಿ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ಊಟವಾದ ಬಳಿಕ ಒಂದು ಲೋಟ ಬಿಸಿ ನೀರು ಕುಡಿಯುವುದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.

ವ್ಯಾಯಾಮ
ದೇಹಕ್ಕೆ ಶ್ರಮವಿಲ್ಲದಿದ್ದರೆ ನಮ್ಮ ದೇಹದ ಅಂಗಳ ಕಾರ್ಯ ವೈಖರಿ ಕೂಡ ಕಡಿಮೆಯಾಗುವುದು. ಬೆವರು ಸುರಿಯುವಂತೆ ಕೆಲಸ ಮಾಡುವುದು ಅಥವಾ ವ್ಯಾಯಾಮ ಮಾಡುವುದು ಮಾಡಿ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಊಟವನ್ನು ನಿಧಾನಕ್ಕೆ ತಿನ್ನಿ
ಊಟ ಮಾಡುವಾಗ ನಿಧಾನಕ್ಕೆ ಚೆನ್ನಾಗಿ ಜಗಿದು ತಿನ್ನಿ. ಹೀಗೆ ತಿಂದರೆ ಜೀರ್ಣಕ್ರಿಯೆ ಸುಲಭವಾಗುವುದು.

ಮಿತಿ ಮೀರಿ ತಿನ್ನಲು ಹೀಗಬೇಡಿ
ಹೊಟ್ಟೆ ಬಿರಿಯುವಂತೆ ತಿಂದರೆ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಆದ್ದರಿಂದ ಯಾವಾಗಲೂ ಮಿತಿ ಆಹಾರ ಸೇವನೆ ಆರೊಗ್ಯದ ದೃಷ್ಟಿಯಿಂದ ಒಳ್ಳೆಯದು.

ಲೋಳೆಸರದ ಜ್ಯೂಸ್
ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವು, ಮಲಬದ್ಧತೆ ಕಾಣಿಸಿಕೊಂಡರೆ ಲೋಳೆಸರದ ಜ್ಯೂಸ್ ಕುಡಿಯುವುದು ಒಳ್ಳೆಯದು.

ಸಕ್ಕರೆಯಂಶವಿರುವ ಆಹಾರವನ್ನು ಕಮ್ಮಿ ಮಾಡಿ
ನಿಮ್ಮ ಡಯಟ್ ನಲ್ಲಿ ಸಕ್ಕರೆಯಂಶವನ್ನು ಕಮ್ಮಿ ತಿನ್ನಿ. ಕೆಫೀನ್ ಅಂಶವನ್ನು ಕೂಡ ಮಿತಿಯಲ್ಲಿ ಸೇವಿಸಿ.

ಒತ್ತಡ
ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳಿಗೆ ಕಾರಣ ಮಾನಸಿಕ ಒತ್ತಡ. ಇದನ್ನು ಕಮ್ಮಿ ಮಾಡಿದರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ದೊರಕಿದಂತೆ.



Click it and Unblock the Notifications