Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ನಾವು ತಿಂದ ಆಹಾರ ಜೀರ್ಣವಾಗಲು ನಮ್ಮ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಬೇಕು. ಈ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದರೆ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ತೊಳೆಸುವಿಕೆ ಮುಂತಾದ ಸಮಸ್ಯೆ ಕಂಡು ಬರುವುದು.
ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ನಮ್ಮ ದೇಹದ ಎಲ್ಲಾ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆ ಉಂಟಾಗುವುದು. ಆದ್ದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ. ಈ ಕೆಳಗೆ ನೀಡಿದ ಟಿಪ್ಸ್ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಕಾರಿಯಾಗಿದೆ. ಆದಾಗ್ಯೂ ಅಜೀರ್ಣ ಸಮಸ್ಯೆ ಆಗಾಗ ಕಾಣುತ್ತಿದ್ದರೆ ವೈದ್ಯರ ಹತ್ತಿರ ಸಲಹೆ ಪಡೆಯಿರಿ.

ನಾರಿನ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಿ
ನಾರಿನಂಶವಿರುವ ಆಹಾರಗಳು ಜೀರ್ಣಕ್ರಿಯೆಗೆ ತುಂಬಾ ಸಹಾಯಕಾರಿ. ನಾರಿನಂಶವಿರುವ ಆಹಾರಗಳು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಿ.

ನೀರು
ಕಮ್ಮಿ ಪ್ರಮಾಣದಲ್ಲಿ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ಊಟವಾದ ಬಳಿಕ ಒಂದು ಲೋಟ ಬಿಸಿ ನೀರು ಕುಡಿಯುವುದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.

ವ್ಯಾಯಾಮ
ದೇಹಕ್ಕೆ ಶ್ರಮವಿಲ್ಲದಿದ್ದರೆ ನಮ್ಮ ದೇಹದ ಅಂಗಳ ಕಾರ್ಯ ವೈಖರಿ ಕೂಡ ಕಡಿಮೆಯಾಗುವುದು. ಬೆವರು ಸುರಿಯುವಂತೆ ಕೆಲಸ ಮಾಡುವುದು ಅಥವಾ ವ್ಯಾಯಾಮ ಮಾಡುವುದು ಮಾಡಿ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಊಟವನ್ನು ನಿಧಾನಕ್ಕೆ ತಿನ್ನಿ
ಊಟ ಮಾಡುವಾಗ ನಿಧಾನಕ್ಕೆ ಚೆನ್ನಾಗಿ ಜಗಿದು ತಿನ್ನಿ. ಹೀಗೆ ತಿಂದರೆ ಜೀರ್ಣಕ್ರಿಯೆ ಸುಲಭವಾಗುವುದು.

ಮಿತಿ ಮೀರಿ ತಿನ್ನಲು ಹೀಗಬೇಡಿ
ಹೊಟ್ಟೆ ಬಿರಿಯುವಂತೆ ತಿಂದರೆ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಆದ್ದರಿಂದ ಯಾವಾಗಲೂ ಮಿತಿ ಆಹಾರ ಸೇವನೆ ಆರೊಗ್ಯದ ದೃಷ್ಟಿಯಿಂದ ಒಳ್ಳೆಯದು.

ಲೋಳೆಸರದ ಜ್ಯೂಸ್
ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವು, ಮಲಬದ್ಧತೆ ಕಾಣಿಸಿಕೊಂಡರೆ ಲೋಳೆಸರದ ಜ್ಯೂಸ್ ಕುಡಿಯುವುದು ಒಳ್ಳೆಯದು.

ಸಕ್ಕರೆಯಂಶವಿರುವ ಆಹಾರವನ್ನು ಕಮ್ಮಿ ಮಾಡಿ
ನಿಮ್ಮ ಡಯಟ್ ನಲ್ಲಿ ಸಕ್ಕರೆಯಂಶವನ್ನು ಕಮ್ಮಿ ತಿನ್ನಿ. ಕೆಫೀನ್ ಅಂಶವನ್ನು ಕೂಡ ಮಿತಿಯಲ್ಲಿ ಸೇವಿಸಿ.

ಒತ್ತಡ
ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳಿಗೆ ಕಾರಣ ಮಾನಸಿಕ ಒತ್ತಡ. ಇದನ್ನು ಕಮ್ಮಿ ಮಾಡಿದರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ದೊರಕಿದಂತೆ.



Click it and Unblock the Notifications
