Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ನಾವು ತಿಂದ ಆಹಾರ ಜೀರ್ಣವಾಗಲು ನಮ್ಮ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಬೇಕು. ಈ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದರೆ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ತೊಳೆಸುವಿಕೆ ಮುಂತಾದ ಸಮಸ್ಯೆ ಕಂಡು ಬರುವುದು.
ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ನಮ್ಮ ದೇಹದ ಎಲ್ಲಾ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆ ಉಂಟಾಗುವುದು. ಆದ್ದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ. ಈ ಕೆಳಗೆ ನೀಡಿದ ಟಿಪ್ಸ್ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಕಾರಿಯಾಗಿದೆ. ಆದಾಗ್ಯೂ ಅಜೀರ್ಣ ಸಮಸ್ಯೆ ಆಗಾಗ ಕಾಣುತ್ತಿದ್ದರೆ ವೈದ್ಯರ ಹತ್ತಿರ ಸಲಹೆ ಪಡೆಯಿರಿ.

ನಾರಿನ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಿ
ನಾರಿನಂಶವಿರುವ ಆಹಾರಗಳು ಜೀರ್ಣಕ್ರಿಯೆಗೆ ತುಂಬಾ ಸಹಾಯಕಾರಿ. ನಾರಿನಂಶವಿರುವ ಆಹಾರಗಳು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಿ.

ನೀರು
ಕಮ್ಮಿ ಪ್ರಮಾಣದಲ್ಲಿ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ಊಟವಾದ ಬಳಿಕ ಒಂದು ಲೋಟ ಬಿಸಿ ನೀರು ಕುಡಿಯುವುದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.

ವ್ಯಾಯಾಮ
ದೇಹಕ್ಕೆ ಶ್ರಮವಿಲ್ಲದಿದ್ದರೆ ನಮ್ಮ ದೇಹದ ಅಂಗಳ ಕಾರ್ಯ ವೈಖರಿ ಕೂಡ ಕಡಿಮೆಯಾಗುವುದು. ಬೆವರು ಸುರಿಯುವಂತೆ ಕೆಲಸ ಮಾಡುವುದು ಅಥವಾ ವ್ಯಾಯಾಮ ಮಾಡುವುದು ಮಾಡಿ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ಊಟವನ್ನು ನಿಧಾನಕ್ಕೆ ತಿನ್ನಿ
ಊಟ ಮಾಡುವಾಗ ನಿಧಾನಕ್ಕೆ ಚೆನ್ನಾಗಿ ಜಗಿದು ತಿನ್ನಿ. ಹೀಗೆ ತಿಂದರೆ ಜೀರ್ಣಕ್ರಿಯೆ ಸುಲಭವಾಗುವುದು.

ಮಿತಿ ಮೀರಿ ತಿನ್ನಲು ಹೀಗಬೇಡಿ
ಹೊಟ್ಟೆ ಬಿರಿಯುವಂತೆ ತಿಂದರೆ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಆದ್ದರಿಂದ ಯಾವಾಗಲೂ ಮಿತಿ ಆಹಾರ ಸೇವನೆ ಆರೊಗ್ಯದ ದೃಷ್ಟಿಯಿಂದ ಒಳ್ಳೆಯದು.

ಲೋಳೆಸರದ ಜ್ಯೂಸ್
ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವು, ಮಲಬದ್ಧತೆ ಕಾಣಿಸಿಕೊಂಡರೆ ಲೋಳೆಸರದ ಜ್ಯೂಸ್ ಕುಡಿಯುವುದು ಒಳ್ಳೆಯದು.

ಸಕ್ಕರೆಯಂಶವಿರುವ ಆಹಾರವನ್ನು ಕಮ್ಮಿ ಮಾಡಿ
ನಿಮ್ಮ ಡಯಟ್ ನಲ್ಲಿ ಸಕ್ಕರೆಯಂಶವನ್ನು ಕಮ್ಮಿ ತಿನ್ನಿ. ಕೆಫೀನ್ ಅಂಶವನ್ನು ಕೂಡ ಮಿತಿಯಲ್ಲಿ ಸೇವಿಸಿ.

ಒತ್ತಡ
ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳಿಗೆ ಕಾರಣ ಮಾನಸಿಕ ಒತ್ತಡ. ಇದನ್ನು ಕಮ್ಮಿ ಮಾಡಿದರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ದೊರಕಿದಂತೆ.



Click it and Unblock the Notifications