Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಬೇಸಿಗೆಯಲ್ಲಿ ಈ ಆಹಾರಗಳನ್ನು ದೂರ ಮಾಡಬೇಡಿ!
ಬೇಸಿಗೆಯಲ್ಲಿ ನೀರಿನಂಶ ಅಧಿಕವಿರುವ ಹಣ್ಣು, ತರಕಾರಿಗಳನ್ನು ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣತೆಯನ್ನು ಸಮತೋಲನದಲ್ಲಿಡಬಹುದು. ಅದರಲ್ಲೂ ಸೀಸನ್ ಫುಡ್ಸ್ (ಆಯಾ ಆಯಾ ಕಾಲಕ್ಕೆ ಬೆಳೆಯುವ ಆಹಾರಗಳು) ಅಧಿಕ ತಿನ್ನಬೇಕು. ಶೀತಲೀಕರಣ ಮಾಡಿದ ಆಹಾರಗಳನ್ನು ದೂರವಿಡಿ.
ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಅಜೀರ್ಣ, ಮಲಬದ್ಧತೆ, ಪೈಲ್ಸ್, ಕಿಡ್ನಿಯಲ್ಲಿ ಕಲ್ಲು ಈ ರೀತಿಯ ಸಮಸ್ಯೆಗಳು ಕಂಡು ಬರಬಹುದು. ಅದಲ್ಲದೆ ಬೇಸಿಗೆಯಲ್ಲಿ ಮೈ ಬೆವರುವುದರಿಂದ ದೇಹಕ್ಕೆ ಅಧಿಕ ನೀರಿನಂಶ ಅವಶ್ಯಕ. ಆದ್ದರಿಂದ ಅಧಿಕ ನೀರಿನಂಶವಿರುವ ಆಹಾರಗಳನ್ನು ತಿನ್ನಲು ಮರೆಯಬೇಡಿ.
ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು ಈ ಕೆಳಗಿನ ಆಹಾರಗಳನ್ನು ತಿನ್ನುವುದು ಒಳ್ಳೆಯದು:

ಟೊಮೆಟೊ
ಟೊಮೆಟೊದಲ್ಲಿ ಪೊಟಾಷ್ಯಿಯಂ, ಲೈಕೊಪೆನೆ, ವಿಟಮಿನ್ ಸಿ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊ ಜ್ಯೂಸ್ ಮಾಡಿ ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಇರುತ್ತದೆ. ಇದನ್ನು ಆಹಾರಕ್ರಮದಲ್ಲಿ ಸೇರಿಸಲು ಮರೆಯಬೇಡಿ.

ಕ್ಯಾರೆಟ್
ಬೆಳಗ್ಗೆ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿದರೆ ದೇಹದಲ್ಲಿರುವ ಬೇಡದ ರಾಸಾಯನಿಕಗಳನ್ನು ಹೊರಹಾಕುವುದರಿಂದ ತ್ವಚೆಯೂ ಆಕರ್ಷಕವಾಗಿರುತ್ತದೆ, ನಿರ್ಜಲೀಕರಣ ಕೂಡ ಉಂಟಾಗುತ್ತದೆ.

ನೂಕೋಲು ಮತ್ತು ಮೂಲಂಗಿ
ನೂಕೋಲು ಹಾಗೂ ಮೂಲಂಗಿಯನ್ನು ತಿಂದರೆ ಇದು ರಕ್ತವನ್ನು ಶುದ್ಧ ಮಾಡುತ್ತದೆ, ಅಲ್ಲದೆ ಮಲಬದ್ಧತೆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತದೆ.

ಸೌತೆಕಾಯಿ
ಸೌತೆಕಾಯಿಯನ್ನು ತಿಂದರೆ ಬಾಯಾರಿಕೆಯನ್ನು ನೀಗಿಸುವುದು ಮಾತ್ರವಲ್ಲ, ದೇಹದಲ್ಲಿ ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ.

ಕಿತ್ತಳೆ
ಪ್ರತೀದಿನ ಒಂದು ಕಿತ್ತಳೆ ತಿಂದರೆ ಇದರಲ್ಲಿ ನೀರಿನಂಶ ಹಾಗೂ ನಾರಿನಂಶ, ವಿಟಮಿನ್ ಸಿ ಇರುವುದರಿಂದ ದೇಹಕ್ಕೆ ತುಂಬಾ ಒಳ್ಳೆಯದು.

ಪೈನಾಪಲ್
ಪೈನಾಪಲ್ ಕೂಡ ಬೇಸಿಗೆಯಲ್ಲಿ ತಿನ್ನಲು ಸೂಕ್ತವಾದ ಹಣ್ಣಾಗಿದೆ. ಆದರೆ ಗರ್ಭಿಣಿಯರು ಮಾತ್ರ ಈ ಹಣ್ಣನ್ನು ಮುಟ್ಟಲೇಬಾರದು.

ಕಲ್ಲಂಗಡಿ
ಇದು ಅತ್ಯಧಿಕ ನೀರಿನಂಶ ಇರುವ ಹಣ್ಣಾಗಿದೆ. ಬೇಸಿಗೆಯಲ್ಲಿ ತಮ್ಮ ದಿನ ನಿತ್ಯದ ಆಹಾರಕ್ರಮದಲ್ಲಿ ಈ ಹಣ್ಣು ಕೂಡ ಇರುವುದು ಒಳ್ಳೆಯದು. ಮಧುಮೇಹ ಇರುವವರು ಈ ಹಣ್ಣನ್ನು ತಿನ್ನಬಾರದು.

ಸ್ಟ್ರಾಬೆರಿ
ಸ್ಟ್ರಾಬೆರಿಯಲ್ಲಿ ವಿಟಮಿನ್, ಪ್ರೊಟೀನ್, ಅಯೋಡಿನ್,ಪೋಷಕಾಂಶಗಳು ಅಧಿಕವಾಗಿದೆ.

ದ್ರಾಕ್ಚಿ
ದ್ರಾಕ್ಷಿ ತಿಂದರೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಡುವ ನಿರ್ಜಲೀಕರಣ ಹಾಗೂ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ದ್ರಾಕ್ಷಿಯನ್ನು ಮಧುಮೇಹ ಇರುವವರು ಮಿತಿಯಲ್ಲಿ ತಿನ್ನಬಹುದು.



Click it and Unblock the Notifications