Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಮಳೆಗಾಲದಲ್ಲಿ ಕಾಯಿಲೆ ಬೀಳದಿರಲು ಇವುಗಳನ್ನು ಪಾಲಿಸಿ
ಮಾನ್ಸೂನ್ ತಿಂಗಳಿನಲ್ಲಿ ಶೀತ, ನೆಗಡಿಯಂತಹ ಕಾಯಿಲೆಗಳು ಸರ್ವೇ ಸಾಮಾನ್ಯ. ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗೆ ನಮ್ಮ ದೇಹ ಹೊಂದಿಕೊಂಡಿರುವುದಿಲ್ಲ ಆದ್ದರಿಂದ ಕಾಯಿಲೆ ಬೀಳುತ್ತೇವೆ.
ತೇವವಾದ ವಾತಾವರಣ ಸೂಕ್ಷ್ಮಾಣು ಜೀವಿಗಳನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತವೆ. ಆದ್ದರಿಂದ ಮಳೆಗಾಲದಲ್ಲಿ ಸ್ವಲ್ಪ ಮುಂಜಾಗ್ರತೆಯಿಂದ ಇರುವುದು ಒಳ್ಳೆಯದು. ಇಲ್ಲಿ ನಾವು ಕೆಲ ಟಿಪ್ಸ್ ನೀಡಿದ್ದೇವೆ. ಇವುಗಳನ್ನು ಪಾಲಿಸಿದರೆ ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ಶೀತ, ಕೆಮ್ಮು, ಜ್ವರ ಈ ರೀತಿಯ ಸಾಮಾನ್ಯ ಕಾಯಿಲೆಗಳನ್ನು ದೂರವಿಡಬಹುದು:

ಮಳೆಯಲ್ಲಿ ಒದ್ದೆಯಾಗಬೇಡಿ
ಮೂವಿಯಲ್ಲಿ ಮಳೆಯಲ್ಲಿ ಒದ್ದೆಯಾಗುವುದನ್ನು ನೋಡಿ ಅದರಂತ ನೀವೂ ಮಾಡಬೇಡಿ. ಮಳೆ ನೆನೆಯುವುದು ಖುಷಿಕೊಟ್ಟರೂ ಕೆಲವರಿಗೆ ಮಳೆ ನೆನೆದರೆ ಒಂದು ವಾರ ಕಾಯಿಲೆ ಬೀಳುವವರು. ಆದ್ದರಿಂದ ಮಳೆ ನೆನಯುವ ಆಸೆ ಇದ್ದರೆ ನಿಮ್ಮ ದೇಹ ಸ್ಥಿತಿಯ ಬಗ್ಗೆ ಯೋಚಿಸಿ, ನಂತರ ನಿರ್ಧಾರ ಕೈಗೊಳ್ಳಿ.

ಕುದಿಸಿದ ನೀರು ಕುಡಿಯಿರಿ
ಮಳೆಗಾಲದಲ್ಲಿ ಸಾಕಷ್ಟು ಕಾಯಿಲೆಗಳು ನೀರಿನ ಮುಖಾಂತರ ಬರುತ್ತದೆ. ಆದ್ದರಿಂದ ಕುದಿಸಿದ ನೀರನ್ನು ಮಾತ್ರ ಕುಡಿಯಿರಿ.

ಶುದ್ಧತೆ ಬಗ್ಗೆ ಗಮನವಿರಲಿ
ಪ್ರತೀಬಾರಿ ಮಳೆಯಲ್ಲಿ ಹೊರಗಡೆ ಹೋಗಿ ಬಂದ ಮುಖ, ಕೈ, ಕಾಲು ತೊಳೆಯಲು ಮರೆಯಬೇಡಿ. ಈ ರೀತಿ ಮಾಡುವುದರಿಂದ ರೋಗಾಣುಗಳು ನಿಮ್ಮ ಮೇಲೆ ದಾಳಿ ಮಾಡುವುದನ್ನು ತಡೆಯಬಹುದು. ಅದರಲ್ಲೂ ಬಿಸಿ ನೀರು ಮಳೆ ಕೈ, ಕಾಲು ತೊಳೆಯುವುದು ಒಳ್ಳೆಯದು.

ಸೂಪ್, ಕಷಾಯ
ಈ ಸಮಯದಲ್ಲಿ ಸೂಪ್, ಕಷಾಯ ಇವುಗಳನ್ನು ಮಾಡಿ ಕುಡಿಯುವುದು ಒಳ್ಳೆಯದು. ಇವುಗಳು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಹಾಗೂ ಇವುಗಳು ರೋಗಾಣುಗಳ ವಿರುದ್ಧ ಹೋರಾಡಿ, ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತದೆ.

ಮಳೆಯಲ್ಲಿ ನೆನೆದರೆ ಸ್ನಾನ ಮಾಡಿ
ಮಳೆಯಲ್ಲಿ ನೆನೆದರೆ ಮನೆಗೆ ಬಂದ ತಕ್ಷಣ ಬಿಸಿ ನೀರಿನಲ್ಲಿ ಸ್ನಾನ ಮಾಡಿ. ಇದರಿಂದ ಕಾಯಿಲೆ ಬೀಳುವುದನ್ನು ತಡೆಯಬಹುದು. ಇದರಿಂದ ದೇಹದ ಉಷ್ಣತೆ ಸಮಸ್ಥಿತಿಗೆ ಬಂದು ಶೀತ ಉಂಟಾಗುವುದನ್ನು ತಡೆಯಬಹುದು.

ಸರಿಯಾದ ಸಮಯಕ್ಕೆ ನಿದ್ದೆ ಮಾಡಿ
ಮಳೆಗಾಲದಲ್ಲಿ ನಿದ್ದೆ ಬೇಗನೆ ಬಳಿ ಸುಳಿಯುವುದು, ಟಿವಿ ನೋಡುತ್ತಾ, ಟ್ಯಾಪ್ ಟಾಪ್ ಮುಂದೆ ಕೂರುತ್ತಾ ಸುಂದರ ನಿದ್ದೆ ಹಾಳು ಮಾಡಿ, ಆರೊಗ್ಯ ಹಾಳು ಮಾಡ್ಕೋಬೇಡಿ.

ವ್ಯಾಯಾಮ
ಮಳೆಗಾಲ ಅಂತ ವ್ಯಾಯಾಮಕ್ಕೆ ಬ್ರೇಕ್ ಹಾಕಬೇಡಿ, ಮನೆಯಲ್ಲಿ ವ್ಯಾಯಾಮ ಮಾಡಿ, ಸಮತೂಕವನ್ನು ಕಾಪಾಡಿಕೊಳ್ಳಿ.

ಆಹಾರಗಳು
ಪೋಷಕಾಂಶವಿರುವ ಆಹಾರಗಳನ್ನು ತಿನ್ನಿ. ಅದರಲ್ಲೂ ದೇಹ ಉಷ್ಣತೆ ಹೆಚ್ಚಿಸುವ ಆಹಾರ ತಿನ್ನಿ. ಶುಂಠಿ, ಕರಿ ಮೆಣಸಿನ ಪುಡಿ ಇವೆಲ್ಲಾ ನಿಮ್ಮ ಆಹಾರದಲ್ಲಿ ಇರಲಿ.



Click it and Unblock the Notifications